ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಸ್ಪೀಕರ್ ಸ್ಥಾನದಲ್ಲಿ ಕೂತ ಮುಸ್ಲಿಂ ಯುಟಿ ಖಾದರ್
ಬೆಂಗಳೂರು, ಮೇ 24: ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಮುಸ್ಲಿಂ ಸಮುದಾಯದಿಂದ ವಿಧಾನಸಭೆ ಸ್ಪೀಕರ್ ಆಗಿ ಯುಟಿ ಖಾದರ್ ಅಧಿಕಾರ ಸ್ವೀಕರಿಸಿದ್ದಾರೆ. ಹಿಂದೆ ಖಾದರ್ ಅವರು ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡಿದ್ದಾರೆ.
ಈ ಬಾರಿಯ ವಿಧಾನಸಭೆ ಕಾಂಗ್ರೆಸ್ಗೆ ಅಚ್ಚರಿಯ ಫಲಿತಾಂಶವನ್ನು ನೀಡಿದಲ್ಲದೆ ಕಾಂಗ್ರೆಸ್ಗೆ ಭರ್ಜರಿ 135 ಸ್ಥಾನಗಳ ಜಯವನ್ನು ನೀಡಿತು, ಹಿಂದೆ ಕಾಂಗ್ರೆಸ್ ಸಚಿವರಾಗಿ ಅನೇಕ ಖಾತೆಗಳನ್ನು ನಿರ್ವಹಿಸಿರುವ ಯುಟಿ ಖಾದರ್ ಮೊದಲ ಬಾರಿ ಸ್ಪೀಕರ್ ಆಗಿ ಅಧಿಕಾರರೂಢರಾಗಿದ್ದಾರೆ. BA.LLB ವ್ಯಾಸಂಗ ಮಾಡಿರುವ ಯು.ಟಿ. ಅಬ್ದುಲ್ ಖಾದರ್ ಫರೀದ್ ಕರುನಾಡ ಮೊದಲ ಮುಸ್ಲಿಂ ಸ್ಪೀಕರ್ ಎಂಬ ಹೆಗ್ಗಳಿಕೆ ಪಡೆದಿದ್ದಾರೆ.

ಯುಟಿ ಖಾದರ್ ಅವರ ಪೂರ್ಣ ಹೆಸರು ಯು.ಟಿ.ಅಬ್ದುಲ್ ಖಾದರ್ ಫರೀದ್. 12-10-1969ರಂದು ಯು.ಟಿ.ಫರೀದ್ & ಯು.ಟಿ.ನಸೀಮಾ ದಂಪತಿ ಪುತ್ರನಾಗಿ ಯು.ಟಿ.ಖಾದರ್ ಕರಾವಳಿ ಮಂಗಳೂರಿನಲ್ಲಿ ಜನಿಸಿದರು.
BA.LLB ವ್ಯಾಸಂಗ ಮಾಡಿರುವ ಯು.ಟಿ.ಖಾದರ್ ಅವರ ತಂದೆ ಕೂಡ ಶಾಸಕರಾಗಿದ್ದರು. ಯು.ಟಿ.ಫರೀದ್ 1972,1978,1999, 2004ರಲ್ಲಿ 4 ಬಾರಿ ಶಾಸಕ ಸ್ಥಾನ ಅಲಂಕರಿಸಿದ್ದರು. ಇನ್ನು ಯು.ಟಿ.ಖಾದರ್ ಅವರ ತಾಯಿ ಹೆಸರು ಯು.ಟಿ.ನಸೀಮಾ ಫರೀದ್.
ಇನ್ನು ಸೈಂಟ್ ಜೆರೋಝ್ ಶಾಲೆಯಲ್ಲಿ ಯುಟಿ ಖಾದರ್ ಪ್ರಾಥಮಿಕ ಶಿಕ್ಷಣ ಪಡೆದರು. ನಂತರ 4ನೇ ತರಗತಿಗೆ ಸೈಂಟ್ ಅಲೋಶಿಯಸ್ ಶಿಕ್ಷಣ ಸಂಸ್ಥೆಗೆ ಸೇರಿ, ಪ್ರೌಢ ಶಿಕ್ಷಣವನ್ನ ಅಲ್ಲೇ ಪಡೆದಿದ್ದಾರೆ. ಪದವಿ ಪೂರ್ವ ಶಿಕ್ಷಣ ಮೂಡಬಿದಿರೆ ಮಹಾವೀರ ಕಾಲೇಜಿನಲ್ಲಿ ಮುಗಿಸಿದ್ದು, SDM ಕಾಲೇಜಿನಲ್ಲಿ BA.LLB ಪದವಿ ಶಿಕ್ಷಣ ಪಡೆದಿದ್ದಾರೆ.

ವಿಧಾನಸಭೆ ನೂತನ ಸ್ವೀಕರ್ ಆಗಿ ಯುಟಿ ಖಾದರ್ ಅವರು ಸರ್ವಾನುಮತದಿಂದ ಬುಧವಾರ ಆಯ್ಕೆಯಾಗಿದ್ದಾರೆ. ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯು.ಟಿ. ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸ್ತಾಪಿಸಿದ್ದರು. ನಿನ್ನೆಯಷ್ಟೇ ಅವರು ಸ್ಪೀಕರ್ ಸ್ಥಾನಕ್ಕೆ ನಾಮಪತ್ರವನ್ನು ಸಲ್ಲಿಸಿದ್ದರು.
ಮುಖ್ಯಮಂಚ್ಕಿದಶ ಪ್ರಸ್ತಾವವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅನುಮೋದಿಸಿದರು. ಇದರಂತೆ ವಿಧಾನಸಭೆ ಸ್ಪೀಕರ್ ಆಗಿ ಯು.ಟಿ. ಖಾದರ್ ಅವರು ಸರ್ವಾನುಮತದಿಂದ ಆಯ್ಕೆಗೊಂಡರು. ದಕ್ಷಿಣ ಕನ್ನಡ ಜಿಲ್ಲೆಯಿಂದ ಸಭಾಧ್ಯಕ್ಷರಾದಎರಡನೇ ಜನಪ್ರತಿನಿಧಿ ಖಾದರ್ ಆಗಿದ್ದಾರೆ.
ಇದರಂತೆ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದಿಂದ ಈ ಹುದ್ದೆಗೆ ಏರಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಈ ಹಿಂದೆ ಬೆಳ್ತಂಗಡಿ ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಿ. ವೈಕುಂಠ ಬಾಳಿಗಾ ಎರಡು ಬಾರಿ (1962, 1967) ಸಭಾಧ್ಯಕ್ಷರಾಗಿದ್ದರು.
ಖಾದರ್ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಆರೋಗ್ಯ ಖಾತೆ, ಜಲಸಂಪನ್ಮೂಲ ಖಾತೆ, ನಗರಾಭಿವೃದ್ಧಿ ಮತ್ತು ವಸತಿಯಂತಹ ದೊಡ್ಡ ಖಾತೆಗಳ ಮಂತ್ರಿಯಾಗಿಯೂ ಉತ್ತಮ ಹೆಸರು ಮಾಡಿದ್ದವರು.
-
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Eid Mubarak Wishes 2026: ರಂಜಾನ್ ಹಬ್ಬದ ಶುಭಾಶಯಗಳ 35 ಮನಮುಟ್ಟುವ ಸಂದೇಶಗಳು ಇಲ್ಲಿವೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ












Click it and Unblock the Notifications