Get Updates
Get notified of breaking news, exclusive insights, and must-see stories!

ವಿ. ಸೋಮಣ್ಣ, ಅರವಿಂದ ಲಿಂಬಾವಳಿ ಕಾಂಗ್ರೆಸ್‌ ಸೇರ್ಪಡೆ: ಜಿ ಪರಮೇಶ್ವರ್‌ ಸುಳಿವು?

ತುಮಕೂರು, ನವೆಂಬರ್‌ 24: ಸೂಕ್ತ ಸ್ಥಾನಮಾನ ಸಿಗದೆ ಬಿಜೆಪಿಯಿಂದ ದಿನೇ ದಿನೆ ದೂರವಾಗುತ್ತಿರುವ ಮಾಜಿ ಸಚಿವ ವಿ ಸೋಮಣ್ಣ ಹಾಗೂ ಅರವಿಂದ ಲಿಂಬಾವಳಿ ಅವರು ಕಾಂಗ್ರೆಸ್‌ ಸೇರುತ್ತಾರೆ ಎಂಬ ಬಗ್ಗೆ ಗೃಹ ಸಚಿವ ಡಾ ಜಿ ಪರಮೇಶ್ವರ್‌ ಅವರು ಸುಳಿವು ನೀಡಿದ್ದಾರೆ.

ಬಿಜೆಪಿಯ ನಾಯಕರು ಕಾಂಗ್ರೆಸ್‌ಗೆ ಸೇರುತ್ತಾರೆ ಎಂಬ ಊಹಾಪೋಹಗಳ ನಡುವೆ ಗೃಹ ಸಚಿವ ಜಿ ಪರಮೇಶ್ವರ ಅವರು ಗುರುವಾರ ಅತೃಪ್ತ ಬಿಜೆಪಿ ನಾಯಕರಾದ ವಿ ಸೋಮಣ್ಣ ಮತ್ತು ಅರವಿಂದ ಲಿಂಬಾವಳಿ ಅವರು ಹಳೆಯ ಪಕ್ಷದ ಕಡೆಗೆ ಹೆಚ್ಚು ಹತ್ತಿರವಾಗುತ್ತಿದ್ದಾರೆ ಎಂಬ ಸುಳಿವು ಬಿಟ್ಟುಕೊಟ್ಟಿದ್ದಾರೆ.

v-somanna-aravinda-limbavali-join-congress

ಬಿಜೆಪಿಯ ಹಿರಿಯ ನಾಯಕರು ಕಾಂಗ್ರೆಸ್ ಸೇರುವ ಕುರಿತು ಕೆಪಿಸಿಸಿ ಅಧ್ಯಕ್ಷರ ಮಟ್ಟದಲ್ಲಿ ಮಾತುಕತೆ ನಡೆಸಲಾಗುವುದು. ವಿ ಸೋಮಣ್ಣ ಅವರು ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿದ್ದಾರೆ. ನಾನು ಡಿಸೆಂಬರ್ 6 ರಂದು ಸಮಾರಂಭದಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಹೇಳಿದ್ದಾರೆ.

ವಿಧಾನಸಭಾ ಚುನಾವಣೆ ಅವಧಿಯಿಂದಲೂ ಬಿಜೆಪಿಯ ಹಿರಿಯ ನಾಯಕ ವಿ ಸೋಮಣ್ಣ ಪಕ್ಷದ ವಿರುದ್ಧ ಅಸಮಾಧಾನದ ಮಾತುಗಳನ್ನು ಆಡುತ್ತಲೇ ಬಂದಿದ್ದಾರೆ. ವಿಧಾನಸಭಾ ಚುನಾವಣೆ ಬಳಿಕವೂ ತಮ್ಮ ಹಿರಿಯತನಕ್ಕೆ ಆದರೂ ರಾಜ್ಯಾಧ್ಯಕ್ಷ ಸ್ಥಾನವನ್ನು ಕೊಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಹೈಕಮಾಂಡ್‌ ಅವರನ್ನು ಸಂಪೂರ್ಣ ಬದಿಗೊತ್ತಿದಂತೆ ಕಾಣುತ್ತಿದೆ.

ಈಗ ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಟಿಕೆಟ್‌ ಸಿಗುವ ಯಾವುದೇ ಭರವಸೆ ಕಾಣದ ಹಿನ್ನೆಲೆಯಲ್ಲಿ ಡಿಸೆಂಬರ್‌ 6ರವರೆಗೆ ಕಾದುನೋಡುವ ನಿರ್ಧಾರಕ್ಕೆ ಸೋಮಣ್ಣ ಬಂದಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಅವರು ಗೆಲ್ಲುವುದಿಲ್ಲ ಎಂದು ಗೊತ್ತಿದ್ದರೂ ಅವರಿಗೆ ಟಿಕೆಟ್‌ ನೀಡಲಾಗಿತ್ತು, ಅದರಂತೆ ಅವರು ಅಲ್ಲಿ ಸೋತರು. ಬಳಿಕ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗದೆ ಪರದಾಡುವಂತಾಗಿದೆ.

v-somanna-aravinda-limbavali-join-congress

ಬಿಎಸ್‌ ಯಡಿಯೂರಪ್ಪ ಅವರ ಮಗನಿಗೆ ರಾಜ್ಯಾಧ್ಯಕ್ಷ ಹುದ್ದೆ ನೀಡಿದಂತೆ ತಾಮಗಾದರೂ ಪರವಾಗಿಲ್ಲ ತಮ್ಮ ಮಗನಿಗಾದರೂ ಪಕ್ಷ ಸ್ಥಾನಮಾನ ನೀಡಿದರೆ ಅವರು ಸುಮ್ಮನಾಗುತ್ತಿದ್ದರೂ ಆದರೆ ಹೈಕಮಾಂಡ್‌ ಅವರನ್ನು ಗೌರವಿಸಿದಂತೆ ಕಾಣುತ್ತಿಲ್ಲ. ಹೀಗಾಗಿ ಅವರು ಬಿಜೆಪಿ ಬಿಡುವ ಹಂತದಲ್ಲಿ ಇದ್ದಾರೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಗಳು ನಡೆಯುತ್ತಿವೆ.

ಅವರಂತೆ ಬಿಜೆಪಿಯ ಮತ್ತೊಬ್ಬ ಹಿರಿಯ ನಾಯಕ ಆರ್‌ಎಸ್‌ಎಸ್‌ಗೆ ಹತ್ತಿರವಿರುವ ದಲಿತ ನಾಯಕ ಅರವಿಂದ ಲಿಂಬಾವಳಿ ಅವರಿಗೂ ಪಕ್ಷ ಅನ್ಯಾಯ ಮಾಡುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಆರ್‌ಎಸ್‌ಎಸ್‌ಗೆ ಹತ್ತಿರದ್ದರಿಂದಲೇ ಅವರಿಗಲ್ಲದೆ ಅವರ ಪತ್ನಿಗೆ ಟಿಕೆಟ್‌ ನೀಡಲಾಗಿತ್ತಾದರೂ ಅವರ ಹಿರಿತನಕ್ಕೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗಬಹುದು ಎಂದು ಭಾವಿಸಲಾಗಿತ್ತು. ಈಗ ಅದೂ ಇಲ್ಲ ಎನ್ನುತ್ತಿದಂತೆ ಅವರೂ ಕೂಡ ಈಗ ಸಿಟ್ಟಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ನಿನ್ನೆ ನಡೆದ ಕಾರ್ಯಕ್ರಮವೊಂದರಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಹೊಗಳಿರುವ ಅರವಿಂದ ಲಿಂಬಾವಳಿ ಅವರು ಸಿದ್ದರಾಮಯ್ಯ ಅವರು ಹಿಂದುಳಿದವರ ಪ್ರಗತಿಗೆ ಶ್ರಮಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಹಿಂದೆ ಅವರು ಈ ಮಾತುಗಳನ್ನು ಹೇಳಿದ ಹಿನ್ನೆಲೆ ಇಲ್ಲ. ಈಗ ಅವರು ಸಿದ್ದರಾಮಯ್ಯ ಅವರನ್ನು ಹೊಗಳಿರುವುದರಿಂದ ಕಾಂಗ್ರೆಸ್‌ಗೆ ಹತ್ತಿರವಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಸಿಎಂ ಸಿದ್ದರಾಮಯ್ಯ ಜೊತೆಗೆ ಮಾತುಕತೆ ನಡೆಸಿರುವ ಸೋಮಣ್ಣ ಅವರು ಡಿಸೆಂಬರ್‌ 15 ರ ನಂತರ ಅಂದ್ರೆ ಬೆಳಗಾವಿಯನ್ನ ನಡೆಯುವ ಚಳಿಗಾಲದ ಅಧಿವೇಶನದ ಬಳಿಕ ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕರ್ನಾಟಕ ಕಾಂಗ್ರೆಸ್‌ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಬ ಅಸಮಾಧಾನಿತ ನಾಯಕರಿಗೆ ಗಾಳ ಹಾಕಿತ್ತಿದ್ದು, ಮಾಜಿ ಸಚಿವ ವಿ ಸೋಮಣ್ಣ, ಶಿವರಾಮ್‌ ಹೆಬ್ಬಾರ್‌ ಕಾಂಗ್ರೆಸ್‌ ಸೇರ್ಪಡೆ ಕುರಿತು ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+