ತುಮಕೂರಿನಿಂದ ಲೋಕಸಭಾ ಸ್ಪರ್ಧೆಗೆ ಸೋಮಣ್ಣ ಸ್ಪಷ್ಟನೆ: ಸ್ವಪಕ್ಷದಲ್ಲೇ ಅಸಮಾಧಾನ
ಬೆಂಗಳೂರು, ಫೆಬ್ರವರಿ 05: ತುಮಕೂರು ಹಾಲಿ ಸಂಸದ ಜಿ.ಎಸ್ ಬಸವರಾಜ್ ನನಗೆ ಆತ್ಮೀಯರು. ತುಮಕೂರು ಕ್ಷೇತ್ರಕ್ಕೆ ನಾನು ಬರಬೇಕೆಂದು ಅವರ ಭಾವನೆಯಾಗಿದೆ. ತುಮಕೂರು ಕ್ಷೇತ್ರದಿಂದ ನಾನು ಸ್ಪರ್ಧೆ ಮಾಡಬೇಕೇ ಎನ್ನುವುದು ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಬಿಜೆಪಿ ಹಿರಿಯ ನಾಯಕ ವಿ.ಸೋಮಣ್ಣ ಹೇಳಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಚುನಾವಣೆಗೆ ನಾನು ಕಾರ್ಯ ತಂತ್ರ ಮಾಡಬೇಕಾಗಿಲ್ಲ. ಬೇರು ಬಿಗಿಯಾಗಿದೆ, ಪಕ್ಷನೂ ಬಿಗಿಯಾಗಿದೆ. ದೇಶಕ್ಕೆ ನರೇಂದ್ರ ಮೋದಿ ಆಡಳಿತ ಮುಂದುವರಿಯಬೇಕಿದೆ. ನನಗೆ ಅವಕಾಶ ಕೊಟ್ಟರೆ ಒಳ್ಳೆಯ ತನದಲ್ಲಿ ಕೆಲಸ ಮಾಡಿ ಪಕ್ಷಕ್ಕೆ ಶಕ್ತಿ ತುಂಬುತ್ತೇನೆ ಎಂದು ಹೇಳಿದರು.

ದೆಹಲಿಗೆ ಭೇಟಿ ನೀಡಿದ ವಿಚಾರವಾಗಿ ಮಾತನಾಡಿದ, ಬಿಜೆಪಿ ಹಿರಿಯ ನಾಯಕ ವಿ.ಸೋಮಣ್ಣ, ಖಾಸಗಿ ಕೆಲಸಕ್ಕಾಗಿ ದೆಹಲಿಗೆ ಬಂದಿದ್ದೇನೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಭೇಟಿಗೂ ಪ್ರಯತ್ನಿಸುತ್ತೇನೆ ಎಂದರು. ಇನ್ನು ಮಾಜಿ ಸಚಿವ ಕೆ.ಸುಧಾಕರ್ ಲೋಕಸಭಗೆ ಸ್ಪರ್ಧೆ ಮಾಡುವ ಬಗ್ಗೆ ಮಾತನಾಡಿದ ಅವರು, ನನಗೆ ಆ ಬಗ್ಗೆ ಮಾಹಿತಿ ಇಲ್ಲ. ಸುಧಾಕರ್ ಏನು ಹೇಳಿದ್ದಾರೆ ಅಂತ ನನಗೆ ಗೊತ್ತಿಲ್ಲ. ಗೊತ್ತಿಲ್ಲದೆ ಮಾತಾಡುವುದು ಸರಿಯಲ್ಲ ಎಂದರು.
ತುಮಕೂರು ಲೋಕಸಭೆಗೆ ನಾನು ಕೂಡ ಟಿಕೆಟ್ ಆಕಾಂಕ್ಷಿ-ಮಾಜಿ ಸಚಿವ ಮಾಧುಸ್ವಾಮಿ
ತುಮಕೂರು ಲೋಕಸಭೆ ಟಿಕೆಕ್ ಆಕಾಂಕ್ಷಿಯಾಗಿರುವ ಬಗ್ಗೆ ಮಾಜಿ ಸಚಿವ ಜೆ.ಸಿ ಮಾಧುಸ್ವಾಮಿ ಕೂಡ ಮಾತನಾಡಿದ್ದು, ತುಮಕೂರು ಲೋಕಸಭೆಗೆ ನಾನು ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಈ ಬಗ್ಗೆ ವರಿಷ್ಟರಿಗೂ ತಿಳಿಸಿದ್ದೇನೆ. ವರಿಷ್ಠರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮಣ್ಣ ಸೇರಿದಂತೆ ಯಾರು ಬೇಕಾದರೂ ಟಿಕೆಟ್ಗಾಗಿ ಓಡಾಡಬಹುದು. ಹಾಲಿ ಸಂಸದ ಬಸವರಾಜ್ ಅವರು ಸೋಮಣ್ಣ ಪರ ಬ್ಯಾಟ್ ಬಿಸಿರುವುದು ಅವರ ವೈಯಕ್ತಿಕ. ನಾನು ಅದರ ಬಗ್ಗೆ ಪ್ರತಿಕ್ರಿಯೆ ನೀಡಲ್ಲ. ತುಮಕೂರಿನಲ್ಲಿ ವಲಸೆ ಅಭ್ಯರ್ಥಿಗಳು ಗೆಲ್ಲಲ್ಲ ಅಂತಾ ನಾನು ಹೇಳುವುದಿಲ್ಲ. ಈ ಹಿಂದೆ ಬಂದವರು ಗೆದ್ದಿಲ್ಲ ಎಂದರು.
ಕೋದಂಡರಾಮಯ್ಯ ಸೋಲ್ತಾರೆ ಅಂತಾ ನಾನೇ ಹೇಳಿದ್ದೆ. ದೇವೇಗೌಡರು ಕೂಡ ಸೋತಿದ್ದರು. ಹಾಗಂದ ಮಾತ್ರಕ್ಕೆ ಮುಂದೆ ಬರುವವರು ಗೆಲ್ಲಲ್ಲ ಅಂತಾ ನಾನು ಹೇಳಲ್ಲ. ಸೋಮಣ್ಣ ಚಾಮರಾಜನಗರದಲ್ಲೂ ಸಕ್ರೀಯರಾಗಿದ್ದರು. ಹಾಸನದಲ್ಲೂ ಆ್ಯಕ್ಟೀವ್ ಆಗಿದ್ದರು, ಇಡೀ ರಾಜ್ಯದಲ್ಲಿ ಸಕ್ರೀಯರಾಗಿದ್ದಾರೆ. ಅವರು ಶಕ್ತಿ ಇದ್ದವರು, ಅವರ ಬಗ್ಗೆ ನಾವೇನು ಹೇಳಲಾಗುವುದಿಲ್ಲ. ನನಗೆ ಟಿಕೆಟ್ ಸಿಗುವಂತಹ ಭರವಸೆ ಇದೆ ಎಂದರು.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ












Click it and Unblock the Notifications