ಮೈಸೂರು ಭಾಗದ ಬಿಜೆಪಿ ಚುನಾವಣಾ ತಂತ್ರದಲ್ಲಿ ಸೋಮಣ್ಣ ಪ್ರಮುಖ ಪಾತ್ರ

ಮೈಸೂರು, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಸೋಮಣ್ಣ ಅವರಿಗೆ ದೊಡ್ಡ ಪಾತ್ರ ನೀಡಲಾಗುವುದು. ಲಿಂಗಾಯತ ಸಮುದಾಯವು ಇಲ್ಲಿ ಪ್ರಮುಖ ಮತದಾರ ಸಮುದಾಯವಾಗಿದೆ. ಹಾಗಾಗಿ ಲಿಂಗಾಯತ ಸಮುದಾಯದ ಸೋಮಣ್ಣ ಅವರು ಇಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ

ಮೈಸೂರು, ಮಾರ್ಚ್‌ 17: ವಸತಿ ಸಚಿವ ವಿ ಸೋಮಣ್ಣ ಅವರನ್ನು ಹಾಸನ ಜಿಲ್ಲಾ ಉಸ್ತುವಾರಿಯನ್ನಾಗಿ ಮಾಡುವ ಸಾಧ್ಯತೆಯಿದ್ದು, ಜೊತೆಗೆ ಹಳೆ ಮೈಸೂರು ಭಾಗದಲ್ಲಿ ಪಕ್ಷದ ವ್ಯವಹಾರಗಳಲ್ಲಿ ಮುಕ್ತ ಹಸ್ತ ನೀಡಲಾಗುತ್ತದೆ ಎನ್ನಲಾಗಿದೆ.

ನವದೆಹಲಿಯಲ್ಲಿ ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದ ಸೋಮಣ್ಣ ಅವರ ಬೆಂಬಲಿಗರು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮೈಸೂರು, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಸೋಮಣ್ಣ ಅವರಿಗೆ ದೊಡ್ಡ ಪಾತ್ರ ನೀಡಲಾಗುವುದು. ಲಿಂಗಾಯತ ಸಮುದಾಯವು ಇಲ್ಲಿ ಪ್ರಮುಖ ಮತದಾರ ಸಮುದಾಯವಾಗಿದೆ. ಹಾಗಾಗಿ ಲಿಂಗಾಯತ ಸಮುದಾಯದ ಸೋಮಣ್ಣ ಅವರು ಇಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ತಿಳಿಸಿದ್ದಾರೆ.

V Somanna is a key role in BJPs election strategy in Mysuru

ವಿ ಸೋಮಣ್ಣ ಅವರ ಪುತ್ರ ಡಾ.ಅರುಣ್ ಅವರಿಗೂ ಪಕ್ಷದ ವ್ಯವಹಾರಗಳಲ್ಲಿ ಅವಕಾಶ ಕಲ್ಪಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಎರಡೂ ಆಶ್ವಾಸನೆಗಳು ಗೃಹ ಸಚಿವ ಅಮಿತ್ ಶಾ ಹೊರತುಪಡಿಸಿ ಬೇರೆ ಯಾರಿಂದಲೂ ಬಂದಿಲ್ಲ. ಹೀಗಾಗಿ ಸೋಮಣ್ಣ ಬಿಜೆಪಿಯಲ್ಲೇ ಉಳಿಯಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚುನಾವಣೆ ಮುಗಿಯುವವರೆಗೆ ಮುಂದಿನ ಮೂರು ತಿಂಗಳ ಕಾಲ ಯಡಿಯೂರಪ್ಪ ಅಥವಾ ಅವರ ಪುತ್ರ ವಿಜಯೇಂದ್ರ ಬಗ್ಗೆ ಹೆಚ್ಚು ಚಿಂತಿಸಬೇಡಿ ಎಂದು ಅಮಿತ್‌ ಶಾ ಸೋಮಣ್ಣ ಅವರಿಗೆ ಹೇಳಿದ್ದಾರೆ ಎನ್ನಲಾಗಿದೆ. ಅವರು (ಯಡಿಯೂರಪ್ಪ ಮತ್ತು ವಿಜಯೇಂದ್ರ) ನಮ್ಮ ನಾಯಕರು ಮತ್ತು ಅವರನ್ನು ಹೇಗೆ ಎದುರಿಸಬೇಕೆಂದು ನಮಗೆ ತಿಳಿದಿದೆ. ಅವರ ಬಗ್ಗೆ ಚಿಂತಿಸಬೇಡಿ. ಈ ಭಾಗದಲ್ಲಿ ಹೆಚ್ಚು ಸೀಟು ಗೆಲ್ಲುವ ಚಿಂತೆ ನಿಮ್ಮ ಮುಂದಿದೆ ಎಂದು ಗೃಹ ಸಚಿವರು ಸೋಮಣ್ಣ ಅವರಿಗೆ ಹೇಳಿದ್ದಾರೆ ಎನ್ನಲಾಗಿದೆ.

V Somanna is a key role in BJPs election strategy in Mysuru

ನಾನೊಬ್ಬ ಚುನಾವಣಾ ತಂತ್ರಗಾರ. ನಾನು ಕೇವಲ ಯಡಿಯೂರಪ್ಪನವರ ಅಡಿಯಲ್ಲಿ ಕೆಲಸ ಮಾಡಿಲ್ಲ, ಸ್ವತಃ ಚುನಾವಣಾ ತಂತ್ರಗಾರ. ನಾನು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಮುಖ್ಯಮಂತ್ರಿಗಳಾದ ಜೆ ಎಚ್ ಪಟೇಲ್ ಮತ್ತು ರಾಮಕೃಷ್ಣ ಹೆಗಡೆ ಅವರಂತಹ ರಾಜಕೀಯ ಖ್ಯಾತನಾಮರೊಂದಿಗೆ ಕೆಲಸ ಮಾಡಿದ್ದೇನೆ. ಅವರು ನನಗೆ ರಾಜಕೀಯ ಮತ್ತು ಚುನಾವಣಾ ತಂತ್ರಗಳನ್ನು ಕಲಿಸಿದವರು ಎಂದು ಸೋಮಣ್ಣ ಅವರು ಹೇಳಿದ್ದಾರೆ.

ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಹಿರಿಯ ಬಿಜೆಪಿ ಹಿರಿಯ ನಾಯಕರೂ ಆಗಿರುವ ವಿ ಸೋಮಣ್ಣ ಅವರಿಗೆ ಹೈಕಮಾಂಡ್‌ ವರಿಷ್ಠರು ಹೆಚ್ಚಿನ ಹೊಣೆಗಾರಿಕೆ ನೀಡಿದ್ದಾರೆ ಎಂದಿದ್ದಾರೆ. ಈ ಬಗ್ಗೆ ಗಮನಹರಿಸುವೆ ಎಂದು ಅವರು ತಿಳಿಸಿದ್ದಾರೆ. ದೆಹಲಿಯಲ್ಲಿ ಗೃಹ ಸಚಿವ ಅಮಿತ್‌ ಶಾ ಜೊತೆಗೆ ಮಾತುಕತೆ ಮುಗಿಸಿ ಬಂದ ಬಳಿಕ ಅವರು ಶಾ ಅವರೊಂದಿಗೆ ಮಾತುಕತೆಯಿಂದ ನನಗೆ ಸಮಾಧಾನವಾಗಿದೆ. ನನಗೆ ಚುನಾವಣಾ ಕೆಲಸದಲ್ಲಿ ತೊಡಗಿಸಿಕೊಳ್ಳಲು ಸೂಚಿಸಿದ್ದಾರೆ. ತಾವು ಯಾರ ಬಗ್ಗೆಯೂ ಟೀಕೆ ಟಿಪ್ಪಣಿ ಮಾಡದೆ ವರಿಷ್ಠರ ಸೂಚನೆಯಂತೆ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ.

ಯಡಿಯೂರಪ್ಪನವರಿಗೆ ಯಡಿಯೂರಪ್ಪನವರೇ ಸಾಟಿ, ನನಗೆ ನಾನೇ ಸಾಟಿ, ವಿಜಯೇಂದ್ರ ನೀಡಿರುವ ಹೇಳಿಕೆಗಳ ಬಗ್ಗೆ ನನಗೇನು ಗೊತ್ತಿಲ್ಲ, ಅವರಿನ್ನೂ ಯುವಕ ಬೆಳೆಯಬೇಕಾದವನು. ನನ್ನ ಮಗ ಅರುಣ್‌ ರಾಜಕೀಯ ಭವಿಷ್ಯದ ಬಗ್ಗೆ ಪಕ್ಷದ ನಾಯಕರಿಗೆ ಬಿಟ್ಟಿದ್ದೇನೆ. ನನ್ನ ಮಗ ಯಾವದಕ್ಕೂ ಆಸೆ ವ್ಯಕ್ತಪಡಿಸಿದವನಲ್ಲ, ನಾನು ಪಕ್ಷ ಬಿಡುತ್ತೇನೆ ಎಂದು ಹೇಳಿಲ್ಲ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+