ಬಿಜೆಪಿ ವಿರುದ್ಧ ಸಿಡಿದೆದ್ದ ಸೋಮಣ್ಣ, ಯತ್ನಾಳ್: ಮಾಜಿ ಡಿಸಿಎಂ ಹೇಳಿದ್ದೇನು?
ಕಲಬುರಗಿ, ನವೆಂಬರ್25: ರಾಜ್ಯ ವಿಧಾನಸಭಾ ಚುಣಾವಣೆಯ ಸೋಲಿನ ಬಳಿಕ ಬಿಜೆಪಿ ಪಾಳಯದಲ್ಲಿ ಅಸಮಾಧಾನ ಭುಗಿಲೆದಿದ್ದು, ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದ ಬಳಿಕ ಮಾಜಿ ವಿ ಸೋಮಣ್ಣ ಹಾಗೂ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಬಹಿರಂಗವಾಗಿ ಅಸಮಾಧಾನಗೊಂಡಿದ್ದು, ಈ ಕುರಿತು ಮಾಜಿ ಡಿಸಿಎಂ ಅಶ್ವಥ್ ನಾರಾಯಣ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾಜಿ ಡಿಸಿಎಂ ಅಶ್ವಥ್ ನಾರಾಯಣ ಮಾತನಾಡಿ, ಪಕ್ಷ ಅಂದ ಮೇಲೆ ಕೆಲವು ವೈಯಕ್ತಿಕ ವ್ಯತ್ಯಾಸಗಳು ಬಂದೇ ಬರುತ್ತವೆ. ಇದೆಲ್ಲವನ್ನು ಅರಗಿಸಿಕೊಂಡು ಮುಂದೆ ಹೋಗುವ ಶಕ್ತಿ ಬಿಜೆಪಿಗೆ ಇದೆ. ಬಸವನಗೌಡ ಪಾಟೀಲ್ ಯತ್ನಾಳ್ ಯಾವತ್ತೂ ಪಕ್ಷದ ಪರ ಬದ್ಧವಾಗಿರುವ ವ್ಯಕ್ತಿ. ಪ್ರಜಾಪ್ರಭುತ್ವಕ್ಕೆ ಅತೀ ಹೆಚ್ಚು ಗೌರವ ಕೊಡುವ ಏಕೈಕ ಪಕ್ಷ ನಮ್ಮದು. ಒಳ್ಳೆಯತನಕ್ಕೆ ಯಾವತ್ತು ಅವಕಾಶ ಕೊಡುವಂತಹ ಪಕ್ಷ ನಮ್ಮ ಬಿಜೆಪಿ. ನಾನಾಗಲಿ ಯತ್ನಾಳ್ ಅವರಾಗಲಿ ಸೋಮಣ್ಣ ಅವರಾಗಲಿ ಎಲ್ಲರೂ ಪಕ್ಷಕ್ಕಾಗಿ ದುಡಿಯುತ್ತೇವೆ ಎಂದು ಹೇಳಿದರು.

ಮಾಜಿ ಸಚಿವ ವಿ ಸೋಮಣ್ಣ ಅವರು ಪಕ್ಷದ ವಿರುದ್ಧ ಅಸಮಾಧಾನಗೊಂಡಿರುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ವಿ.ಸೋಮಣ್ಣ ನಮ್ಮ ಪಕ್ಷದ ಹಿರಿಯ ನಾಯಕರು. ನಮ್ಮ ಪಕ್ಷದಲ್ಲಿ ಅವರಿಗೆ ಸಂಪೂರ್ಣ ಗೌರವ ಇದೆ, ಅವರನ್ನು ವಿಶ್ವಾಸದಿಂದ ಕೈ ಹಿಡಿದುಕೊಂಡು ಕರೆದುಕೊಂಡು ಹೋಗುವ ಕೆಲಸ ಬಿಜೆಪಿಯಿಂದ ಆಗುತ್ತದೆ. ಚುನಾವಣೆ ಅಂದ ಮೇಲೆ ಸೋಲು ಗೆಲುವು ಸಹಜ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಸೋಮಣ್ಣ ಅವರು ಪದೇ ಪದೇ ಹೇಳುತ್ತಿದ್ದಾರೆ.
ಸೋಮಣ್ಣ ಇಂದು, ಮುಂದು ಎಂದೆಂವಿದೂ ನಮ್ಮ ಜೊತೆಯೇ ಇರುತ್ತಾರೆ. ಅವರ ನೋವು, ಅವರ ಅಳಲು ದೂರ ಮಾಡುವ ಕೆಲಸ ಬಿಜೆಪಿ ಮಾಡುತ್ತದೆ. ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿ ಆಗಿಲ್ಲ. ಅದು ಜನಪರ ಗಣತಿ ಅಲ್ಲ. ರಾಜಕೀಯ ಪ್ರೇರಿತವಾದ ಸಮೀಕ್ಷೆಯಾಗಿದೆ. ಸಮಾಜದಲ್ಲಿ ಗೊಂದಲ ನಿರ್ಮಾಣ ಮಾಡುವುದಕ್ಕಾಗಿಯೇ ಸಿದ್ದರಾಮಯ್ಯ ರಾಜಕೀಯ ಪ್ರೇರಿತವಾಗಿ ಈ ಸಮೀಕ್ಷೆ ನಡೆಸಿದ್ದಾರೆ. ಸಮಾಜ ಈ ಸಮೀಕ್ಷೆಯನ್ನು ಖಂಡಿಸಬೇಕು ಎಂದರು ಜಾತಿ ಗಣತಿಗೆ ವಿರೋಧ ವ್ಯಕ್ತಪಡಿಸಿದರು.
ಪಕ್ಷ ಅಂದಮೇಲೆ, ಭಿನ್ನಾಭಿಪ್ರಾಯ, ಅಸಮಾಧಾನ ಇದ್ದೆ ಇರುತ್ತೆ, ಎಲ್ಲವನ್ನು ಸರಿಪಡಿಸಿಕೊಂಡು ಹೋಗುತ್ತೇವೆ ಎಂದು ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ. ಬಸನಗೌಡ ಪಾಟೀಲ್, ವಿ ಸೋಮಣ್ಣ ಪಕ್ಷದ ಹಿರಿಯ ನಾಯಕರು ಒಳ್ಳೆಯತನಕ್ಕೆ ಯಾವತ್ತು ಅವಕಾಶ ಕೊಡುವಂತಹ ಪಕ್ಷ ನಮ್ಮ ಬಿಜೆಪಿ. ನಾನಾಗಲಿ ಯತ್ನಾಳ್ ಅವರಾಗಲಿ ಸೋಮಣ್ಣ ಅವರಾಗಲಿ ಎಲ್ಲರೂ ಪಕ್ಷಕ್ಕಾಗಿ ದುಡಿಯುತ್ತೇವೆ ಎಂದರು.
ವಿ.ಸೋಮಣ್ಣ ಅವರಿಗೆ ಸಂಪೂರ್ಣ ಗೌರವ ಇದೆ, ಅವರನ್ನು ವಿಶ್ವಾಸದಿಂದ ಕೈ ಹಿಡಿದುಕೊಂಡು ಕರೆದುಕೊಂಡು ಹೋಗುವ ಕೆಲಸ ಬಿಜೆಪಿಯಿಂದ ಆಗುತ್ತದೆ. ಚುನಾವಣೆ ಅಂದ ಮೇಲೆ ಸೋಲು ಗೆಲುವು ಸಹಜ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಸೋಮಣ್ಣ ಪದೇ ಪದೇ ಹೇಳುತ್ತಿದ್ದಾರೆ. ಸೋಮಣ್ಣ ಇಂದು, ಮುಂದು ಎಂದೆಂದೂ ನಮ್ಮ ಜೊತೆಯೇ ಇರುತ್ತಾರೆ. ಅವರ ನೋವು, ಅವರ ಅಳಲು ದೂರ ಮಾಡುವ ಕೆಲಸ ಬಿಜೆಪಿ ಮಾಡುತ್ತೆ ಎಂದು ಹೇಳಿದರು
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications