ಜೀವನಪಾಠ ಕಲಿಸುವ ವಚನ ಮಹಾಸಂಪುಟ ಮಾರಾಟ
ಕೊಪ್ಪಳ ಆ. 29 : ಬೆಂಗಳೂರು ಕನ್ನಡ ಪುಸ್ತಕ ಪ್ರಾಧಿಕಾರದಿಂದ ಬಸವಯುಗದ ವಚನಗಳ ಮಹಾಸಂಪುಟ ಹಾಗೂ ಬಸವೋತ್ತರ ಯುಗದ ವಚನ ಮಹಾ ಸಂಪುಟಗಳನ್ನು ಮುದ್ರಿಸಿ, ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಯಲ್ಲಿ ಮಾರಾಟ ಮಾಡಲಾಗುತ್ತಿದೆ.
ಜಗಜ್ಯೋತಿ ಬಸವೇಶ್ವರ ಸೇರಿದಂತೆ ಕನ್ನಡದ ಹಲವಾರು ಮಹನೀಯರು ರಚಿಸಿರುವ, ಜೀವನಮೌಲ್ಯ, ಸ್ಫೂರ್ತಿ, ಆದರ್ಶ ತುಂಬಿರುವ, ಕನ್ನಡ ಸಾಹಿತ್ಯ ಶ್ರೀಮಂತಿಕೆಯ ವಚನಗಳಿಗೆ ಯಾವುದೇ ಜಾತಿ, ಧರ್ಮದ ಹಂಗಿಲ್ಲ. ಹೀಗಾಗಿ ಯಾರು ಬೇಕಾದರೂ ಅವನ್ನು ಕೊಂಡು ಓದಿ, ಜೀವನದಲ್ಲಿ ಅಳವಡಿಸಿಕೊಳ್ಳಬಹುದಾಗಿದೆ.

ಕನ್ನಡ ನಾಡಿನ ಪ್ರಥಮ ಪ್ರಜಾ ಸಾಹಿತ್ಯವಾಗಿರುವ ವಚನಗಳು ನಮ್ಮ ಪರಂಪರೆಯ ಅಪೂರ್ವ ಆಸ್ತಿ. ಪ್ರಸ್ತುತ ಕನ್ನಡ ಸಾಹಿತ್ಯ ಲೋಕದಲ್ಲಿ ಹತ್ತಾರು ವಚನಗಳು ಲಭ್ಯವಿದೆ. ವಚನಗಳು ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಹಾಗೂ ಸಾಮಾಜಿಕ ಮೌಲ್ಯಗಳನ್ನು ಎತ್ತಿ ಹಿಡಿಯುವಂತಹವುಗಳಾಗಿದ್ದು, ಸಮಾಜಕ್ಕೆ ಅತ್ಯಂತ ಪ್ರಸ್ತುತ ಸಾಹಿತ್ಯವಾಗಿದೆ.
ಇಂತಹ ಸಾವಿರಾರು ವಚನಗಳನ್ನು ಒಟ್ಟುಗೂಡಿಸಿ, ಕನ್ನಡ ಪುಸ್ತಕ ಪ್ರಾಧಿಕಾರವು ಬಸವಯುಗದ ವಚನ ಮಹಾಸಂಪುಟ-1952 ಪುಟಗಳು ಹಾಗೂ ಬಸವೋತ್ತರ ಯುಗದ ವಚನ ಮಹಾ ಸಂಪುಟ-1536 ಪುಟಗಳನ್ನು ಹೊಂದಿದಂತೆ 3ನೇಯ ಮುದ್ರಣವಾಗಿ ಎರಡು ಮಹಾ ಸಂಪುಟಗಳನ್ನು ಮುದ್ರಣ ಮಾಡಿಸಿ ಬಿಡುಗಡೆ ಮಾಡಿದೆ.
ಬಸವಯುಗದ ಹಾಗೂ ಬಸವೋತ್ತರ ಯುಗದ ವಚನಗಳ ಈ ಎರಡು ಸಂಪುಟಗಳ ಒಟ್ಟಾರೆ ಖರೀದಿ ಮೌಲ್ಯ ರೂ. 600 ಗಳು. ಈ ಸಂಪುಟಗಳು ರಾಜ್ಯದ ಎಲ್ಲ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಜಿಲ್ಲಾ ಕಚೇರಿಗಳಲ್ಲಿ ಮಾರಾಟಕ್ಕೆ ಲಭ್ಯವಿದೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications