ವೈಕುಂಠ ಏಕಾದಶಿ 2023: ವಿಷ್ಣುವಿನ ಕೃಪೆಗೆ ಪಾತ್ರರಾಗಲು ವೃತಾಚರಣೆ ಮಾಡುವುದು ಹೇಗೆ..?
ಬೆಂಗಳೂರು, ಜನವರಿ,2: ಹೊಸವರ್ಷ ಆರಂಭದಲ್ಲೇ ಶುಭಾರಂಭವೆನ್ನುವಂತೆ ಸೋಮವಾರ ವೈಕುಂಠ ಏಕಾದಶಿ ಬಂದಿದ್ದು, ಎಲ್ಲೆಡೆ ವಿಷ್ಣುವಿನ ಆರಾಧಾನೆ ಆರಂಭವಾಗಿದೆ.
ವಿಷ್ಣುವಿನ ಆರಾಧನೆ ಹಾಗೂ ಉಪವಾಸಕ್ಕೆ ಪ್ರಸಿದ್ಧಿಯಾಗಿರುವ ವೈಕುಂಠ ಏಕಾದಶಿ ಆಚರಣೆ, ಜನವರಿ, 2, 2023ರಂದು ಬಂದಿದ್ದು, ಈ ದಿನ ಭಕ್ತರು ಶ್ರದ್ಧೆ ಹಾಗೂ ಭಕ್ತಿಯಿಂದ ವಿಷ್ಣುವಿನ ಆರಾಧನೆ ಮಾಡುತ್ತಾರೆ. ಇದರಿಂದ ಇಷ್ಟಾರ್ಥಗಳೆಲ್ಲವೂ ಈಡೇರುತ್ತದೆ ಎನ್ನುವುದು ಜನರ ನಂಬಿಕೆಯಾಗಿದೆ.
ವೈಕುಂಠ ಏಕಾದಶಿಯನ್ನು ಪೌಷ ಪುತ್ರದಾ ಏಕಾದಶಿ, ಮುಕ್ಕೋಟಿ ಏಕಾದಶಿ, ಭೀಷ್ಮ ಏಕಾದಶಿ ಎಂದೂ ಸಹ ಕರೆಯುತ್ತಾರೆ. ಈ ದಿನ ವಿಷ್ಣು ಹಾಗೂ ವಿಷ್ಣುವಿನ ಅವತಾರದ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆಯಲ್ಲಿ ಭಾಗಿಯಾಗುವುದರಿಂದ ಪುಣ್ಯ ಪ್ರಾಪ್ತಿಯಾಗುತ್ತದೆ ಎನ್ನುವುದು ಜನರ ನಂಬಿಕೆ.

ವೈಕುಂಠ ಏಕಾದಶಿಯ ದಿನ ಹೆಚ್ಚಿನ ವಿಷ್ಣು ದೇವಾಲಯಗಳಲ್ಲಿ ವೈಕುಂಠ ದ್ವಾರ ಎಂಬ ವಿಶೇಷ ಪ್ರವೇಶವನ್ನು ನಿರ್ಮಿಸಲಾಗುತ್ತದೆ. ಈ ಮಂಗಳಕರ ದಿನದಂದು ಈ ದ್ವಾರವನ್ನು ಹಾದು ಹೋಗುವವರು ವೈಕುಂಠವನ್ನು ತಲುಪುತ್ತಾರೆ ಎಂದು ಸಹ ಹೇಳಲಾಗುತ್ತದೆ.
2023ರ ಜನವರಿ 1 ರಂದು ಸಂಜೆ 7:11 ರಿಂದ ಏಕಾದಶಿ ತಿಥಿ ಪ್ರಾರಂಭವಾಗಲಿದ್ದು, 2023 ರ ಜನವರಿ 2 ರಂದು ರಾತ್ರಿ 8:23 ಕ್ಕೆ ಮುಕ್ತಾಯಗೊಳ್ಳುತ್ತದೆ. ಉದಯ ತಿಥಿಯ ಪ್ರಕಾರ, ಜನವರಿ 2, 2023 ರಂದು ವೈಕುಂಠ ಏಕಾದಶಿ ವ್ರತವನ್ನು ಆಚರಿಸಲಾಗುತ್ತಿದೆ.
ವೈಕುಂಠ ಏಕಾದಶಿ ವೃತಾಚರಣೆ ಮಾಡುವುದು ಹೇಗೆ..?
ವೈಕುಂಠ ಏಕಾದಶಿ ವೃತವನ್ನು ಮಾಡುವವರು ಬೆಳಗ್ಗೆ ಬೇಗನೆ ಎದ್ದು ಪುಣ್ಯ ಸ್ನಾನ ಮಾಡಿ ಉಪವಾಸ ಮಾಡುವ ಸಂಕಲ್ಪ ಮಾಡುತ್ತಾರೆ. ಈ ಏಕಾದಶಿ ವ್ರತವನ್ನು ಆಚರಿಸುವರು, ಧೂಪ ಮಾಡಿ ದೀಪ ಬೆಳಗಿಸಿ, ನೈವೇದ್ಯ ಮಾಡಿ ಬಳಿಕ ಹದಿನಾರು ಪದಾರ್ಥಗಳಿಂದ ವಿಷ್ಣುವನ್ನು ವಿಶೇಷವಾಗಿ ಪೂಜಿಸುತ್ತಾರೆ. ಬಳಿಕ ವಿಷ್ಣು ಅಥವಾ ಆತನ ಅವತಾರದ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಮಹಾವಿಷ್ಣುವಿಗೆ ಹೂವಿನ ಹಾರ, ನೈವೇದ್ಯ ಮತ್ತು ಬಾಳೆಹಣ್ಣು ಅರ್ಪಿಸುತ್ತಾರೆ. ವೃತ ಆಚರಿಸುವವರು ಕೊನೆಯಲ್ಲಿ ರಾತ್ರಿ ದೀಪದಾನ ಮಾಡುವುದು ಕೂಡ ಶ್ರೇಷ್ಠವಾಗಿದೆ. ವೃತದ ವೇಳೆ ಮಹಾವಿಷ್ಣುವಿನ ಮಂತ್ರ, ಶ್ರೀ ಹರಿ ಸ್ತೋತ್ರಂ, ವಿಷ್ಣು ಸಹಸ್ತ್ರನಾಮ ಮತ್ತು ಏಕಾದಶಿ ವ್ರತ ಕಥೆಯನ್ನು ಪಠಿಸುವುದರಿಂದ ವೃತ ಪೂರ್ಣಗೊಳ್ಳುತ್ತದೆ.
ವೈಕುಂಠ ಏಕಾದಶಿಯ ಮಹತ್ವ
ಹಿಂದೂ ಪುರಾಣಗಳ ಪ್ರಕಾರ, ವೈಕುಂಠ ಏಕಾದಶಿಯ ದಿನದಂದು ಸಾಗರ ಮಂಥನವನ್ನು ನಡೆಸಲಾಯಿತು ಎನ್ನುವುದು ಪ್ರತೀತಿ. ಈ ಸಾಗರ ಮಂಥನದ ಸಮಯದಲ್ಲಿ, ಕ್ಷೀರ ಸಾಗರದಿಂದ ದೈವಿಕ ಅಮೃತವು ಹೊರಹೊಮ್ಮಿತು, ದೇವರುಗಳಿಗೆ ವಿತರಿಸಲಾಯಿತು. ಆದ್ದರಿಂದ ಈ ಮಂಗಳಕರ ದಿನದಂದು ಸಾಯುವ ಜನರು ಜನನ ಮತ್ತು ಮರಣ ಚಕ್ರದಿಂದ ಮುಕ್ತರಾಗುತ್ತಾರೆ ಮತ್ತು ಭಗವಾನ್ ವಿಷ್ಣುವಿನ ನಿವಾಸ ಅಥವಾ ವೈಕುಂಠವನ್ನು ಸೇರುತ್ತಾರೆ ಎನ್ನುವುದು ಜನರ ನಂಬಿಕೆಯಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications