ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ಬಿಕ್ಕಟ್ಟು: ಕೇಂದ್ರ ಗೃಹ ಇಲಾಖೆಗೆ ರಾಜ್ಯಪಾಲರ ವರದಿ

|
Google Oneindia Kannada News

ಬೆಂಗಳೂರು, ಜುಲೈ 19: ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಕೇಂದ್ರ ಗೃಹ ಸಚಿವಾಲಯಕ್ಕೆ ರಾಜ್ಯಪಾಲ ವಜುಭಾಯಿ ವಾಲ ಅವರು ತುರ್ತು ವರದಿಯನ್ನು ಸಲ್ಲಿಕೆ ಮಾಡಿದ್ದಾರೆ.

ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅವರಿಗೆ ಶುಕ್ರವಾರ ಮಧ್ಯಾಹ್ನ 1.30ರೊಳಗೆ ವಿಶ್ವಾಸಮತ ಯಾಚನೆಗೆ ಗಡುವು ನೀಡಿ ರಾಜ್ಯಪಾಲರು ಸಂದೇಶ ಕಳುಹಿಸಿದ್ದರು.

Governor Vajubhai Vala sends an interim report on today’s development to Home Secretary.

ಈ ಬಗ್ಗೆ ಸದನದಲ್ಲಿ ಉತ್ತರಿಸಿದ ಸಿಎಂ ಕುಮಾರಸ್ವಾಮಿ, "1.30ಕ್ಕೆ ವಿಶ್ವಾಸಮತ ಯಾಚನೆ ಸಾಧ್ಯವಿಲ್ಲ, ಸಂವಿಧಾನ, ರಾಜ್ಯಪಾಲರ ಬಗ್ಗೆ ಗೌರವವಿದೆ, ಆದರೆ ಅವರ ಸಂದೇಶದ ಪ್ರಕಾರ ನಡೆದುಕೊಳ್ಳಲಾಗುತ್ತಿಲ್ಲ, ನನ್ನದೇ ಆದ ಮಿತಿಯಿದೆ" ಎಂದರು.

'ಆಯಾ ರಾಮ್, ಗಯಾ ರಾಮ್' ಪಕ್ಷಾಂತರ ನಿಷೇಧ ಕಾಯ್ದೆ ಹೇಗೆ? 'ಆಯಾ ರಾಮ್, ಗಯಾ ರಾಮ್' ಪಕ್ಷಾಂತರ ನಿಷೇಧ ಕಾಯ್ದೆ ಹೇಗೆ?

ಮೊದಲು ನೀಡಿದ್ದ ಗಡುವು ತಿರಸ್ಕರಿಸಿದ ಹಿನ್ನೆಲೆಯಲ್ಲಿ ರಾಜ್ಯಪಾಲರು, ಕಾನೂನು ತಜ್ಞರ ಜೊತೆ ಚರ್ಚಿಸಿ, ಸದನ ಕಲಾಪದ ಬಗ್ಗೆ ಮಾಹಿತಿ ಪಡೆದು, ಕೇಂದ್ರ ಗೃಹ ಇಲಾಖೆಗೆ ತುರ್ತು ವರದಿಯನ್ನು ಸಲ್ಲಿಸಿದ್ದಾರೆ, ಈ ವರದಿ ಆಧಾರದ ಮೇಲೆ ಕೇಂದ್ರ ಸರ್ಕಾರ ಮುಂದಿನ ತೀರ್ಮಾನ ಕೈಗೊಳ್ಳಬಹುದು.

ರಾಜ್ಯಪಾಲರಿಗೆ ನನ್ನ ನಮನಗಳು, 1.30ಕ್ಕೆ 'trust vote' ಅಸಾಧ್ಯರಾಜ್ಯಪಾಲರಿಗೆ ನನ್ನ ನಮನಗಳು, 1.30ಕ್ಕೆ 'trust vote' ಅಸಾಧ್ಯ

ಕರ್ನಾಟಕದಲ್ಲಿನ ಸದ್ಯದ ರಾಜಕೀಯ ಪರಿಸ್ಥಿತಿಯಿಂದ ಸಾಂವಿಧಾನಿಕ ಬಿಕ್ಕಟ್ಟು ಉದ್ಭವಿಸಿದೆ ಎಂದರೆ ಗೃಹ ಇಲಾಖೆಯೂ ರಾಜ್ಯಪಾಲರ ವರದಿ ಆಧಾರಿಸಿ, ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಬಹುದು.

ಸದ್ಯಕ್ಕೆ ರಾಜ್ಯಪಾಲರು ಸಂಜೆ 6 ಗಂಟೆಯೊಳಗೆ ವಿಶ್ವಾಸಮತ ಯಾಚನೆ ಮಾಡುವಂತೆ ಮತ್ತೊಂದು ಗಡುವು ನೀಡಿದ್ದು, ಈ ಗಡುವಿನಲ್ಲಿ ಯಾವುದೇ ಫಲಿತಾಂಶ ಬರದಿದ್ದರೆ, ವಿಧಾನಸಭೆ ವಿಸರ್ಜನೆ, ರಾಷ್ಟ್ರಪತಿ ಆಡಳಿತ ಹೇರಿಕೆ ಅಸ್ತ್ರವನ್ನು ಕೇಂದ್ರದ ಬಿಜೆಪಿ ಸರ್ಕಾರವು ಪ್ರಯೋಗಿಸುವ ಸಾಧ್ಯತೆಯಿದೆ.

English summary
Governor Vajubhai Vala sends an interim report on today’s development to Home Secretary. A delegation of the BJP will meet with the Governor and complain that the floor test was not taken despite a directive to conduct it by 1.30 pm.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X