Valmiki case: ವಾಲ್ಮೀಕಿ ನಿಗಮ ಪ್ರಕರಣದ ಇಡಿ ತನಿಖೆಯಲ್ಲಿ ಷಡ್ಯಂತ್ರ- ಕೇಂದ್ರದ ವಿರುದ್ಧ ಪ್ರಿಯಾಂಕ ಖರ್ಗೆ ಕಿಡಿ
ಬೆಂಗಳೂರು ಜುಲೈ 18: ವಾಲ್ಮೀಕಿ ನಿಗಮ ಪ್ರಕರಣದ ಇಡಿ ತನಿಖೆಯಲ್ಲಿ ಕೇಂದ್ರ ಸರ್ಕಾರದಿಂದ ಷಡ್ಯಂತ್ರ ನಡೆದಿದೆ ಎಂದು ಸಚಿವ ಪ್ರಿಯಾಂಕ ಖರ್ಗೆ ಆರೋಪ ಮಾಡಿದ್ದಾರೆ.
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಹಲವರನ್ನು ಬಂಧಿಸಿ ಇಡಿ ತನಿಖೆ ನಡೆಸುತ್ತಿದೆ. ವಾಲ್ಮೀಕಿ ನಿಗಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷದ ಇನ್ನಿತರ ಸದಸ್ಯರ ಕೈವಾಡವಿದೆ ಎಂದು ಹೇಳುವಂತೆ ಬಂಧಿತರಿಗೆ ಒತ್ತಾಯಿಸಲಾಗುತ್ತಿದೆ ಎಂದು ಪ್ರಿಯಾಂಕ ಖರ್ಗೆ ದೂರಿದ್ದಾರೆ.

ವಾಲ್ಮೀಕಿ ನಿಗಮ ಹಗರಣಕ್ಕೆ ಸಿಎಂ, ಡಿಸಿಎಂ ಕಾರಣ ಎಂದು ಹೇಳಲು ಬಲವಂತ ಮಾಡಲಾಗುತ್ತಿದೆ. ಅಲ್ಲದೆ ಮಾಲ್ಮೀಕಿ ನಿಗಮ ಹಣವನ್ನು ಬಳ್ಳಾರಿ ಚುನಾವಣೆಗೆ ಬಳಕೆ ಮಾಡಲಾಗಿದೆ ಅಂತ ಹೇಳಲು ಬಂಧಿತರಿಗೆ ಒತ್ತಡ ಹಾಕಲಾಗುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ದೂರಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಿಯಾಂಕ ಖರ್ಗೆ ಅವರು, 'ಕೆಐಎಡಿಬಿ ದುಡ್ಡು ಸೇಲಂಗೆ ಹೋಗಿದೆ, ಬೋವಿ ನಿಗಮದಲ್ಲಿ 120 ಕೋಟಿ ಹಗರಣ ಆಗಿದೆ, ದೇವರ ಅರಸು ಟ್ರಕ್ ಟರ್ಮಿನಲ್ ಪ್ರಕರಣದಲ್ಲಿ ಹಣ ದುರ್ಬಳಕೆಯಾಗಿದೆ ಇದರ ಬಗ್ಗೆ ಯಾಕೆ ಇಡಿ ಯಾಕೆ ಕಾಳಜಿ ವಹಿಸಿಲ್ಲ?' ಎಂದು ವಾಗ್ದಾಳಿ ಮಾಡಿದ್ದಾರೆ.

ಇದು ಬಿಜೆಪಿ ಷಡ್ಯಂತ್ರ. ಬಿಜೆಪಿಯವರ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸಿಜರ್ ಇದು. ಕಳೆದ ಹತ್ತು ವರ್ಷಗಳಲ್ಲಿ ಎಷ್ಟು ಸರ್ಕಾರಗಳನ್ನು ಬಿಜೆಪಿಯವರು ಬೀಳಿಸಿದ್ದಾರೆ ನೋಡಿ. 2016ರಲ್ಲಿ ಉತ್ತರಖಂಡ, 2019ರಲ್ಲಿ ಕರ್ನಾಟಕ, ಗುಜರಾತ್ನಲ್ಲಿ ನಮ್ಮ ಎಂಎಲ್ಎಗಳ ಖರೀದಿ ಮಾಡಿದ್ರು. ಸಿಕ್ಕಿಂನಲ್ಲಿ ಎಂಎಲ್ಎಗಳ ಖರೀದಿ ಮಾಡಿದ್ರು. 2014 ರಿಂದ 444 ಎಂಎಲ್ಎಗಳನ್ನು ಖರೀದಿ ಮಾಡಲಾಗಿದೆ. ಮೆಜಾರಿಟಿ ಇದ್ರೂ ಕೂಡ ಕೇಂದ್ರದ ಏಜೆನ್ಸಿಗಳನ್ನು ಬಳಸಿಕೊಂಡು ಸರ್ಕಾರಗಳನ್ನು ಕೆಡವಲಾಗುತ್ತಿದೆ ಎಂದು ಖರ್ಗೆ ಹರಿಹಾಯ್ದಿದ್ದಾರೆ.
ಯಾವ ಶಾಸಕರು ತಮ್ಮ ಪಕ್ಷಕ್ಕೆ ಸೇರುವುದಿಲ್ಲ ಅವರ ಮೇಲೆ ಹೆಚ್ಚು ಒತ್ತಡ ತರುವುದು. 60 ಬಾರಿ ಮಣಿಪುರ, ಹಿಮಾಚಲ ಪ್ರದೆಶ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರದಲ್ಲಿ ಶಾಸಕರ ಖರೀದಿ ನಡೆದಿದೆ. ಮಾಜಿ ಸಿಎಂ ಯಡಿಯೂರಪ್ಪ ಮೇಲೂ ಕೇಸ್ ಇದೆ. ಅವರ ವಿಚಾರಣೆ ಯಾಕೆ ಆಗುತ್ತಿಲ್ಲ. ರೆಡ್ಡಿ ಬ್ರದರ್ಸ್ ಮೇಲೆ ಐಟಿ ಕೇಸ್ ಇತ್ತು. ಆದರೆ ಅವರು ಪಕ್ಷ ಸೇರಿದ ಬಳಿಕೆ ಅವರ ವಿಚಾರಣೆ ಇಲ್ಲ. ಬಿಜೆಪಿ ಸೇರಿದರೆ ಸಾಥ್ ಖೂನ್ ಮಾಫ್ ಎಂದು ಆಕ್ರೋಶಗೊಂಡರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications