ವಾಲ್ಮೀಕಿ ನಿಗಮದ ಹಗರಣ: ಹರೀಶ್ ಬಂಧನ, ಮಾಜಿ ಸಚಿವರಿಗೆ ಶುರುವಾಯಿತು ಡವಡವ
ವಾಲ್ಮೀಕಿ ನಿಗಮದಲ್ಲಿ ನಡೆದ ನೂರಾರು ಕೋಟಿ ರೂಪಾಯಿ ಹಗರಣದ ತನಿಖೆಗೆ ಮಹತ್ವದ ತಿರುವು ಸಿಕ್ಕಿದೆ. ಬುಧವಾರ ಜಾರಿ ನಿರ್ದೇಶನಾಲಯ ತಂಡದ ಅಧಿಕಾರಿಗಳು ದಾಳಿ ಮಾಡಿದ್ದು, ಆರೋಪಿಗಳಿಗೆ ಡವಡವ ಆರಂಭವಾಗಿದೆ. ರಾಜ್ಯದ 18 ಕಡೆಗಳಲ್ಲಿ ದಾಳಿ ನಡೆದಿದ್ದು, ಇದೇ ವೇಳೆ ಮಾಜಿ ಸಚಿವ ಬಿ.ನಾಗೇಂದ್ರ ಅವರ ಪಿಎ ಅವರನ್ನು ಬಂಧಿಸಲಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದ 18 ಕಡೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇದೇ ವೇಳೆ ಮಾಜಿ ಸಚಿವ ನಾಗೇಂದ್ರ ಅವರ ಫ್ಲ್ಯಾಟ್ ಮೇಲೂ ದಾಳಿ ನಡೆಸಿದ್ದು ಪರಿಶೀಲನೆ ನಡೆದಿದೆ. ತಮ್ಮ ಆಪ್ತ ಹರೀಶ್ ಅವರ ಬಂಧನ ಆಗುತ್ತಿದ್ದಂತೆ ಮಾಜಿ ಸಚಿವರಿಗೆ ಹೆದರಿಕೆ ಶುರುವಾಗಿದೆ. ನಾಗೇಂದ್ರ ಇಂದು ಬಂಧನವಾಗುವ ಸಾಧ್ಯತೆ ದಟ್ಟವಾಗಿದೆ.

ಹರೀಶ್ ಬಂಧಿಸಿದ್ದು ಏಕೆ?
ವಾಲ್ಮಿಕಿ ನಿಗಮದ ಹಗರಣವನ್ನು ಅಧಿಕಾರಿಗಳು ಎಳೆ ಎಳೆಯಾಗಿ ಬಿಚ್ಚುತ್ತಿದ್ದಾರೆ. ಹೀಗಾಗಿ ಪಿಎ ಹರೀಶ್ ಅವರ ಪಾತ್ರದ ಸುಳಿವು ಸಿಕ್ಕಿದೆ. ನಿಗಮದ ಅಧ್ಯಕ್ಷ ನಾಗೇಂದ್ರ ಅವರ ಪಿಎ ಅವರಿಗೆ ಎಂಡಿ ಪದ್ಮನಾಭ್ ಹಣ ವರ್ಗಾವಣೆ ಮಾಡಲಾಗಿದೆ. ಹರೀಶ್ ಅವರ ಖಾತೆಗೆ 25 ಲಕ್ಷ ಬಂದಿದೆ. ಅಲ್ಲದೆ ಇನ್ನು ಹರೀಶ್ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ವಿಚಾರಣೆಗೆ ಬಂಧಿಸಿದ್ದಾರೆ.
ಈ ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಾಕ್ಷ ಬಿವೈ ವಿಜಯೇಂದ್ರ ಮಾತನಾಡಿ, ವಾಲ್ಮೀಕಿ ನಿಗಮದ ಬಹುಕೋಟಿ ಅವ್ಯವಹಾರ ರಾಜ್ಯದ ಇತಿಹಾಸದಲ್ಲೇ ಕಂಡು ಕೇಳರಿಯದ ಭ್ರಷ್ಟಾಚಾರವಾಗಿದೆ. ದಲಿತರ ಹಣವನ್ನು ಬೇರೆ ರಾಜ್ಯಗಳ ಚುನಾವಣೆಗೆ ಬಳಸಿಕೊಂಡಿರುವುದು ಜಗಜ್ಜಾಹೀರಾಗಿದೆ ಎಂದಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications