ಗಾಂಧೀಜಿ, ಶಾಸ್ತ್ರಿಯವರ ಮೌಲ್ಯಗಳು ನಮಗೆ ದಾರಿದೀಪ: ಸಿದ್ದರಾಮಯ್ಯ
ಮೈಸೂರು, ಅಕ್ಟೋಬರ್ 02: ಗಾಂಧೀಜಿ ಹಾಗೂ ಶಾಸ್ತ್ರಿಯವರ ಬದುಕು ಹಾಗೂ ಮೌಲ್ಯಗಳು ನಮಗೆ ದಾರಿದೀಪ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವ154 ನೇ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಯವರ 119 ನೇ ಜನ್ಮದಿನದ ಅಂಗವಾಗಿ ಅವರ ವಿಧಾನಸೌದಾದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.

ದೇಶಾದ್ಯಂತ ಗಾಂಧೀಜಿ ಹಾಗೂ ಶಾಸ್ತ್ರಿಯವರ ಜಯಂತಿಯನ್ನು ಆಚರಿಸಲಾಗುತ್ತಿದೆ. ಮಹಾತ್ಮಾ ಗಾಂಧೀಜಿಯವರಿಗೆ ನಾವು ನಮನ ಸಲ್ಲಿಸಿ, ಅವರ ಹೋರಾಟದ ಬದುಕು ನಮ್ಮೆಲ್ಲರಿಗೂ ಸ್ಪೂರ್ತಿ ಯಾಗಲಿ ಎಂದು ಹೇಳಿದರು.
ಲಾಲ್ ಬಹದ್ದೂರ್ ಶಾಸ್ತ್ರಿಯವರು ದೇಶ ಕಂಡ ಅತ್ಯಂತ ಪ್ರಾಮಾಣಿಕ ಪ್ರಧಾನಿ. ಜೀವನದ್ದುದ್ದಕ್ಕೂ ಪ್ರಾಮಾಣಿಕವಾಗಿ ಬದುಕಿದವರು. ಅವರು ಬದುಕಿನಲ್ಲಿ ಅಳವಡಿಸಿಕೊಂಡಿದ್ದ ಮೌಲ್ಯ ನಮ್ಮೆಲ್ಲರಿಗೂ ದಾರಿದೀಪ. ಗಾಂಧೀಜಿಯವರು ಸರಳ ಜೀವನ ನಡೆಸಿದವರು. ಅಹಿಂಸಾ ಮಾರ್ಗ ಅನುಸರಿಸಿ, ಅಹಿಂಸಾತ್ಮಕ ಹೋರಾಟದಿಂದಲೇ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟರು.
ಸಮಾಜದ ಅತ್ಯಂತ ಕಟ್ಟಕಡೆಯ ವ್ಯಕ್ತಿ ಬದುಕಿದಂತೆ ಬದುಕಲು ಪ್ರಯತ್ನಿಸಿದರು. ಮೂರನೇ ದರ್ಜೆ ಬೋಗಿಯಲ್ಲಿ ಯಾವಾಗಲೂ ಪ್ರಯಾಣಿಸುತ್ತಿದ್ದರು. ಅವರನ್ನು ಈ ಬಗ್ಗೆ ಪ್ರಶ್ನಿಸಿದಾಗ 3 ನೇ ದರ್ಜೆಗಿಂತಲೂ ಕೆಳ ದರ್ಜೆಯದ್ದು ಇಲ್ಲವಾದ್ದರಿಂದ 3 ನೇ ದರ್ಜೆಯಲ್ಲಿ ಪ್ರಯಾಣಿಸುವುದಾಗಿ ಉತ್ತರಿಸಿದರು.
ಅಷ್ಟರ ಮಟ್ಟಿಗೆ ಸತ್ಯ, ಅಹಿಂಸೆಯನ್ನು ಬದುಕಿನುದ್ದಕ್ಕೂ ಅಳವಡಿಸಿಕೊಂಡವರು. ದಕ್ಷಿಣ ಆಫ್ರಿಕಾ ದಲ್ಲಿದ್ದಾಗಲೂ ಸೆರೆಮನೆ ವಾಸ ಅನುಭವಿಸಿದ್ದರು. ಭಾರತದಲ್ಲಿಯೂ ಸೆರೆಮನೆಯ ವಾಸ ಅನುಭವಿಸಿ ದೇಶಕ್ಕೆ ಅವರ ನೇತೃತ್ವದಲ್ಲಿ ಅನೇಕ ಜನರು ತ್ಯಾಗ, ಬಲಿದಾನಗಳನ್ನು ಅರ್ಪಿಸಿದರು. ಮತಾಂಧ ನಾಥೂರಾಮ್ ಗೋಡ್ಸೆ ಗುಂಡಿಗೆ ಬಲಿಯಾದರು ಎಂದು ಸ್ಮರಿಸಿದರು.
ವಿಶ್ವನಾಯಕ ಗಾಂಧಿ:
ಸಮಾಜದಲ್ಲಿ ಎಲ್ಲ ಜನರೂ ಶಾಂತಿ, ನೆಮ್ಮದಿಯಿಂದ ಇರಬೇಕು. ಜಾತಿ, ಧರ್ಮ ಎಂದು ಹೊಡೆದಾಡಬಾರದು. ದೇಶ ಇಬ್ಭಾಗವಾಗಬಾರದು ಎಂದು ಹೋರಾಡಿದರು. ಜವಾಹರಲಾಲ್ ನೆಹರೂ ಅವರು ಸ್ವಾತಂತ್ರ್ಯ ನಂತರ ಮೊದಲ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಕಲ್ಕತ್ತಾದಲ್ಲಿ ಸತ್ಯಾಗ್ರಹ ಮಾಡುತ್ತಿದ್ದರು. ಅಷ್ಟು ಹೊತ್ತಿಗೆ ದೇಶ ವಿಭಜನೆಯಾಗಿ ಬೆಂಕಿ ಹೊತ್ತಿಕೊಂಡಿತ್ತು. ಅದನ್ನು ಬಗೆಹರಿಸಲು ಸತ್ಯಾಗ್ರಹ ಮಾಡಿದರು. ಜಗತ್ತಿನ 148 ದೇಶಗಳಲ್ಲಿ ಅವರ ಪ್ರತಿಮೆಗಳಿವೆ
ಅವರು ಕೇವಲ ಭಾರತದ ನಾಯಕರಾಗಿರಲಿಲ್ಲ. ಜಗತ್ತಿನಲ್ಲಿಯೇ ಗೌರವಕ್ಕೆ ಪ್ರಾತ್ರರಾದ ವಿಶ್ವನಾಯಕರು. ಅಂಥವರ ಜನ್ಮದಿನವನ್ನು ಆಚರಣೆ ಮಾಡುತ್ತಿದ್ದೇವೆ. ಅವರ ಹೋರಾಟ, ಸತ್ಯ, ಧರ್ಮನಿಷ್ಠೆ ಎಲ್ಲವೂ ನಮಗೆ ದಾರಿದೀಪವಾಗಲಿ ಹಾಗೂ ಸ್ಪೂರ್ತಿ ನೀಡಲಿ ಎಂದರು. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications