ಮೈಸೂರು- ಬೆಂಗಳೂರು ನಡುವೆ ನವೆಂಬರ್ 10ರಿಂದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ
ಬೆಂಗಳೂರು, ಅಕ್ಟೋಬರ್ 14: ಸ್ವದೇಶಿ ನಿರ್ಮಿತ ಸೆಮಿ ಹೈಸ್ಪೀಡ್ ವಂದೇ ಭಾರತ್ ಎಕ್ಸ್ಪ್ರೆಸ್ನ ಐದನೇ ರೈಲು ಮುಂದಿನ ತಿಂಗಳು ನವೆಂಬರ್ 10 ರಂದು ಚೆನ್ನೈ- ಬೆಂಗಳೂರು- ಮೈಸೂರು ಮಾರ್ಗಗಳಲ್ಲಿ ಸಂಚರಿಸಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ನಾಲ್ಕನೇ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಸೇವೆಗಳಿಗೆ ಚಾಲನೆ ನೀಡಿದರು. ನಂತರ ಹಿಮಾಚಲ ಪ್ರದೇಶ ಮತ್ತು ಹರಿಯಾಣ ಎರಡು ರಾಜ್ಯಗಳ ಮುಖ್ಯಮಂತ್ರಿಗಳಾದ ಜೈರಾಮ್ ಠಾಕೂರ್ ಮತ್ತು ಮನೋಹರ್ ಲಾಲ್ ಖಟ್ಟರ್ ಹೈಸ್ಪೀಡ್ ರೈಲಿನಲ್ಲಿ ಸವಾರಿ ಮಾಡಿದರು.
ಮುಂದಿನ ವಾರದಿಂದ ದೆಹಲಿ ಮತ್ತು ಚಂಡೀಗಢ ನಡುವಿನ ಪ್ರಯಾಣದ ಸಮಯವನ್ನು ಮೂರು ಗಂಟೆಗಳವರೆಗೆ ತರಲು ರೈಲು ಸಿದ್ಧವಾಗಿದೆ. ಉನಾದಿಂದ ನವದೆಹಲಿಗೆ ಪ್ರಯಾಣದ ಸಮಯವನ್ನು ಎರಡು ಗಂಟೆಗಳಷ್ಟು ಕಡಿಮೆಗೊಳಿಸಲಾಗುವುದು ಎಂದು ಸರ್ಕಾರದ ಹೇಳಿಕೆ ತಿಳಿಸಿದೆ. ವಂದೇ ಭಾರತ್ 2.0 ಕೇವಲ 52 ಸೆಕೆಂಡುಗಳಲ್ಲಿ ಗಂಟೆಗೆ 0 ರಿಂದ 100 ಕಿಲೋಮೀಟರ್ ವೇಗವನ್ನು ಮತ್ತು ಗಂಟೆಗೆ 180 ಕಿಲೋಮೀಟರ್ ವರೆಗೆ ಗರಿಷ್ಠ ವೇಗವನ್ನು ತಲುಪುವಂತಹ ಸುಧಾರಿತ ವೈಶಿಷ್ಟ್ಯಗಳೊಂದಿಗೆ ಸಜ್ಜುಗೊಂಡಿದೆ. ಸುಧಾರಿತ ವಂದೇ ಭಾರತ್ ಎಕ್ಸ್ಪ್ರೆಸ್ 430 ಟನ್ಗಳ ಹಿಂದಿನ ಆವೃತ್ತಿಗೆ ಹೋಲಿಸಿದರೆ 392 ಟನ್ ತೂಕವನ್ನು ಹೊಂದಿರುತ್ತದೆ.
ಇದು ಬೇಡಿಕೆಯ ಮೇರೆಗೆ ವೈಫೈ ಸೇವೆಯನ್ನು ಸಹ ಹೊಂದಿರುತ್ತದೆ. ಇದು ವಿಮಾನದಂತಹ ಪ್ರಯಾಣದ ಅನುಭವಗಳು ಮತ್ತು ದೇಶೀಯವಾಗಿ ಅಭಿವೃದ್ಧಿಪಡಿಸಿದ ಕವಾಚ್ ಸುರಕ್ಷತಾ ಕ್ರಮ ಸೇರಿದಂತೆ ಅತ್ಯಾಧುನಿಕ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ ಎಂದು ಪ್ರಧಾನ ಮಂತ್ರಿ ಕಚೇರಿಯ ಹೇಳಿಕೆ ನೀಡಿದೆ. ಮೂರನೇ ವಂದೇ ಭಾರತ್ ರೈಲನ್ನು ಈ ತಿಂಗಳ ಆರಂಭದಲ್ಲಿ ಪ್ರಧಾನಿ ಮೋದಿ ಅವರು ಗುಜರಾತ್ನಲ್ಲಿ ಚಾಲನೆ ನೀಡಿದ್ದರು.

ಕೆಲವೇ ದಿನಗಳಲ್ಲಿ ಮೂರನೇ ಲೋಪ
ಆದಾಗ್ಯೂ ಈ ಹೈಸ್ಪೀಡ್ ರೈಲಿಗೆ ಸಂಬಂಧಿಸಿದ ಕೆಲವು ಘಟನೆಗಳು ವರದಿಯಾಗಿವೆ. ಅವುಗಳೆಂದರೆ ಕಳೆದ ವಾರ ನವದೆಹಲಿ-ವಾರಣಾಸಿ ಸೆಮಿ-ಹೈ ಸ್ಪೀಡ್ ರೈಲು ತಾಂತ್ರಿಕ ದೋಷ ಕಂಡ ಪರಿಣಾಮವಾಗಿ ಪ್ರಯಾಣಿಕರಿಗೆ ವಿಳಂಬವಾಯಿತು. ಇದು ಕೆಲವೇ ದಿನಗಳಲ್ಲಿ ಮೂರನೇ ಲೋಪವಾಗಿತ್ತು. ಈ ಹಿಂದೆ ಗುಜರಾತ್ನಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಮರುದಿನ ಮೂರು ಎಮ್ಮೆ ಮತ್ತು ಹಸುವಿಗೆ ಡಿಕ್ಕಿ ಹೊಡೆದಿತ್ತು.

ಎಂಟು ಫ್ಲಾಟ್ಫಾರ್ಮ್ ಸೈಡ್ ಕ್ಯಾಮೆರಾ
ರೈಲು ಮಾರ್ಗಗಳ ಮೂಲಕ ಸರಕು ಸಾಗಣೆಯನ್ನು ಸಮಯೋಚಿತವಾಗಿ ತಲುಪಿಸಲು ಅನುಕೂಲವಾಗುವಂತೆ ಭಾರತೀಯ ರೈಲ್ವೇಯು ವಂದೇ ಭಾರತ್ ಪ್ಲಾಟ್ಫಾರ್ಮ್ಗಳಲ್ಲಿ ಹೆಚ್ಚಿನ ವೇಗದ ಸರಕು ಸಾಗಣೆ ರೈಲುಗಳನ್ನು ಪ್ರಾರಂಭಿಸಲು ಸಿದ್ಧವಾಗಿದೆ. ರೈಲಿನ ಹೊರಭಾಗವು ಎಂಟು ಫ್ಲಾಟ್ಫಾರ್ಮ್ ಸೈಡ್ ಕ್ಯಾಮೆರಾಗಳನ್ನು ಹೊಂದಿದ್ದು, ನಾಲ್ಕು ಕೋಚ್ಗಳಲ್ಲಿ ಪ್ರಯಾಣಿಕರ ಗಾರ್ಡ್ ಸಂವಹನ ಸೌಲಭ್ಯವೂ ಇದೆ. ಇದು ಸ್ವಯಂಚಾಲಿತ ಧ್ವನಿ ರೆಕಾರ್ಡಿಂಗ್ ವೈಶಿಷ್ಟ್ಯವನ್ನು ಒಳಗೊಂಡಿರುತ್ತದೆ.

ಕಡಿಮೆ ಅವಧಿಯಲ್ಲಿ ಹೆಚ್ಚಿನ ವೇಗ
ಹೊಸ ವಂದೇ ಭಾರತ್ ರೈಲು ಹಿಂದಿನ ರೈಲುಗಳಿಗೆ ಹೋಲಿಸಿದರೆ ಇದು ಸುಧಾರಿತ ಆವೃತ್ತಿಯಾಗಿದೆ. ಇದು ಹೆಚ್ಚು ಹಗುರವಾಗಿಮತ್ತು ಕಡಿಮೆ ಅವಧಿಯಲ್ಲಿ ಹೆಚ್ಚಿನ ವೇಗವನ್ನು ತಲುಪುವ ಸಾಮರ್ಥ್ಯವನ್ನು ಹೊಂದಿದೆ. ವಂದೇ ಭಾರತ್ 2.0 ರೈಲುಗಳು ಕವಾಚ್ ಎಂಬ ರೈಲು ಘರ್ಷಣೆ ತಪ್ಪಿಸುವ ವ್ಯವಸ್ಥೆಯನ್ನು ಹೊಂದಿದ್ದು, ಮೂರು ಗಂಟೆಗಳ ಬ್ಯಾಟರಿ ಬ್ಯಾಕಪ್ನೊಂದಿಗೆ ಕೋಚ್ಗಳು ಡಿಸಾಸ್ಟರ್ ಲೈಟ್ಗಳನ್ನು ಹೊಂದಿವೆ.

ವಾರದಲ್ಲಿ ಆರು ದಿನ ಓಡಾಟ
ಉನಾದಿಂದ ನವದೆಹಲಿಗೆ ಪ್ರಯಾಣದ ಸಮಯವು ಎರಡು ಗಂಟೆಗಳಷ್ಟು ಕಡಿಮೆಯಾಗುತ್ತದೆ. ರೈಲು ಗುಡ್ಡಗಾಡು ರಾಜ್ಯದ ಅಂಬ್ ಅಂಡೌರಾದಿಂದ ನವದೆಹಲಿಗೆ ವಾರದಲ್ಲಿ ಬುಧವಾರ ಹೊರತುಪಡಿಸಿ ಆರು ದಿನಗಳು ಚಲಿಸುತ್ತದೆ. ಅಂಬಾಲಾ, ಚಂಡೀಗಢ, ಆನಂದಪುರ ಸಾಹಿಬ್ ಮತ್ತು ಉನಾದಲ್ಲಿ ನಿಲುಗಡೆ ಇರುತ್ತದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications