Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ
ಬೆಂಗಳೂರು: ಭಾರತದ ರೈಲ್ವೆ ಇಲಾಖೆ ವ್ಯಾಪ್ತಿಯಲ್ಲಿ ಕ್ರಾಂತಿಕಾರಕ ಬದಲಾವಣೆ ತಂದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು (Vande Bharat Express Train) ಕರ್ನಾಟಕದಲ್ಲೂ ಸೇವೆ ನೀಡುತ್ತಿವೆ. ದೇಶದ ಅನೇಕ ನಗರಗಳ ಮಧ್ಯ ವೇಗದ ಸಾರಿಗೆ ಸಂಪರ್ಕ ಕೊಂಡಿಯಾಗಿವೆ. ಈ ರೈಲು ಸಾರಿಗೆ ಸೇವೆ ಪ್ರಯಾಣಿಕರಲ್ಲಿ ತ್ವರಿತವಾಗಿ ಜನಪ್ರಿಯತೆ ಪಡೆದಿವೆ. ಇದೀಗ ಕರ್ನಾಟಕದ ವಂದೇ ಭಾರತ್ ಪ್ರಯಾಣಿಕರಿಗೆ ಮಹತ್ವದ ಅಪ್ಡೇಟ್ ನೀಡಲಾಗಿದೆ. ರಾಜ್ಯದ ನಾಲ್ಕು ವಂದೇ ಭಾರತ್ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ ಮಾಡಲಾಗಿದ್ದು, ಹೊಸ ವೇಳಾಪಟ್ಟಿ ಅನ್ವಯ ಪ್ರಯಾಣ ಮಾಡಬೇಕಿದೆ.
ಪರಿಷ್ಕರಣೆ ಗೊಂಡ ನಾಲ್ಕು ವಂದೇ ಭಾರತ್ ರೈಲುಗಳು
1. ಕಾಚೆಗುಡ-ಯಶವಂತಪುರ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (20703)
2. ಯಶವಂತಪುರ-ಕಾಚೆಗುಡ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (20704)
3. ಕಲಬುರಗಿ- ಎಸ್ಎಂವಿಟಿ ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (22231)
4. ಎಸ್ಎಂವಿಟಿ ಬೆಂಗಳೂರು-ಕಲಬುರಗಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (22232)

ರೈಲಿನ ಪರಿಷ್ಕೃತ ಸಮಯಗಳು ಹೀಗಿವೆ
ಕಾಚೆಗುಡ-ಯಶವಂತಪುರ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (20703) ಸದ್ಯ ಮಧ್ಯಾಹ್ನ 3.55 ಕ್ಕೆ ಹಿಂದೂಪುರ ತಲುಪಲಿದೆ. ಮೊದಲು ಮಧ್ಯಾಹ್ನ 3.48 ಗಂಟೆಗೆ ತಲುಪುತ್ತಿತ್ತು.
ಅದೇ ರೀತಿ ಯಶವಂತಪುರ-ಕಾಚೆಗುಡ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (20704) ಹಿಂದೂಪುರವನ್ನು ಮಧ್ಯಾಹ್ನ 12.08 ಕ್ಕೆ ತಲುಪುತ್ತಿತ್ತು. ಪರಿಷ್ಕೃತ ಸಮಯದಲ್ಲಿ ಈ ಎರಡನೇ ರೈಲು ಮಧ್ಯಾಹ್ನ 12.17 ಕ್ಕೆ ತಲುಪುತ್ತದೆ.
ಕಲಬುರಗಿ- ಎಸ್ಎಂವಿಟಿ ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (22231) ರೈಲು ಮಾರ್ಗದ ಎರಡು ನಿಲ್ದಾಣಗಳ ಆಗಮನದ ಸಮಯ ಬದಲಾಗಿದೆ. ರೈಲು ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯವನ್ನು ಬೆಳಿಗ್ಗೆ 11.13 ಕ್ಕೆ ತಲುಪಲಿದೆ, ಈ ಮೊದಲು ಬೆಳಗ್ಗೆ 11.00 ನಿಲ್ದಾಣಕ್ಕೆ ಬರುತ್ತದೆ. ಇನ್ನೂ ಯಲಹಂಕ ನಿಲ್ದಾಣಕ್ಕೆ ಮಧ್ಯಾಹ್ನ 12.28ರ ಬದಲಾಗಿ, ಮಧ್ಯಾಹ್ನ 12.58ಕ್ಕೆ ಆಗಮಿಸಲಿದೆ.
ಎಸ್ಎಂವಿಟಿ ಬೆಂಗಳೂರು-ಕಲಬುರಗಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (22232) ರೈಲು ಗುರುವಾರ ಹೊರತುಪಡಿಸಿ ಎಲ್ಲಾ ದಿನಗಳಲ್ಲಿ ಕಾರ್ಯಾಚರಣೆ ಮಾಡಲಿದೆ. ಪರಿಷ್ಕೃತ ವೇಳಾಪಟ್ಟಿಗಳು ಪ್ರಮುಖ ನಿಲ್ದಾಣಗಳಲ್ಲಿ ಆಗಮಿಸಿ ತೆರಳುತ್ತದೆ.
ವಂದೇ ಭಾರತ್ ರೈಲಿನ ಕುರಿತು
ಪ್ರಯಾಣಿಕರಿಗೆ ಐಷಾರಾಮಿ ಮತ್ತು ಆರಾಮದಾಯಕ ಸೇವೆ, ಅನುಭವ ನೀಡುವ ರೈಲು ಇದಾಗಿದೆ. ಕರ್ನಾಟಕದಲ್ಲಿ ಒಟ್ಟು 12 ರೈಲುಗಳು ಸೇರಿ ಭಾರತಾದ್ಯಂತ ಒಟ್ಟು 164 ವಂದೇ ಭಾರತ್ ರೈಲುಗಳು ನಿತ್ಯ ಸಂಚಾರ ಸೇವೆ ನೀಡುತ್ತಿವೆ. ಅನುಕೂಲತೆ ಆಧಾರತದಲ್ಲಿ ಈ ರೈಲುಗಳ ಬೋಗಿ ಹೆಚ್ಚಳ, ಸಮಯ ಪರಿಷ್ಕರಣೆ ಮಾಡಲಾಗುತ್ತದೆ.
-
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!













Click it and Unblock the Notifications