ಬೆಂಗಳೂರು ಹೊಸಪೇಟೆ ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್?
ಬೆಂಗಳೂರು, ಸೆಪ್ಟೆಂಬರ್ 14: ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್ ಎಕ್ಸ್ಪ್ರೆಸ್ ಸಂಚರಿಸುವ ಸಾಧ್ಯತೆ ಇದ್ದು, ಇದು ಬೆಂಗಳೂರು ಹೊಸಪೇಟೆ ನಡುವೆ ಬಳ್ಳಾರಿ ಮಾರ್ಗವಾಗಿ ಸಂಚರಿಸಿಲಿದೆ ಎಂಬ ಮಾಹಿತಿ ಈಗ ತಿಳಿದು ಬಂದಿದೆ.
ನೈರುತ್ಯ ರೈಲ್ವೆ ವಿಭಾಗವು ಬಳ್ಳಾರಿ ಗುಂತಕಲ್ ಮಾರ್ಗವಾಗಿ ಹೊಸಪೇಟೆ - ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ ಆರಂಭಿಸುವ ಬಗ್ಗೆ ಪರಿಶೀಲನೆ ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ.

ವಂದೇ ಭಾರತ್' ಕಾರ್ಯಚರಣೆ ಶುರು ಮಾಡುವ ಕುರಿತಂತೆ ಸಮೀಕ್ಷೆ ನಡೆಸಲು ರೈಲ್ವೆ ಇಲಾಖೆ ನಿರ್ದೇಶನ ನೀಡಿದೆ. ಈ ಭಾಗದಲ್ಲಿ ರೈಲುಗಳು 100 - 130 ಕೆಎಂಪಿಎಚ್ ವೇಗದಲ್ಲಿ ಚಲಿಸಲು ಸಾಧ್ಯವಾಗುವಂತೆ ಹಳಿಗಳಿವೆ. ಬೆಂಗಳೂರು - ಹೊಸಪೇಟೆ ನಡುವೆ ಜೋಡಿ ಮಾರ್ಗವಿದ್ದು, ಸಂಪೂರ್ಣ ವಿದ್ಯುದೀಕರಣವಾಗಿದೆ ಎಂದು ವಿಜಯನಗರ ರೈಲ್ವೆ ಅಭಿವೃದ್ಧಿ ಕ್ರಿಯಾ ಸಮಿತಿ ಅಧ್ಯಕ್ಷ ವೈ.ಯಮುನೇಶ್ ಅವರು ಮಾಹಿತಿ ನೀಡಿದ್ದಾರೆ.
ಸದ್ಯ, ಬೆಂಗಳೂರು - ಹೊಸಪೇಟೆ ನಡುವೆ ಕಾರ್ಯಚರಣೆ ನಡೆಸುತ್ತಿರುವ ಇಂಟರ್ ಸಿಟಿ ಎಕ್ಸ್ಪ್ರೆಸ್, ಬೆಳಗ್ಗೆ 5 ಗಂಟೆಗೆ ಹೊರಟು ಮಾರ್ಗ ಮಧ್ಯೆ ಬರುವ 20ಕ್ಕೂ ಹೆಚ್ಚು ರೈಲು ನಿಲ್ದಾಣಗಳಲ್ಲಿ ನಿಂತು, ಸಂಜೆ 4.25ಕ್ಕೆ ಹೊಸಪೇಟೆ ತಲುಪುತ್ತದೆ. ಅದೇ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ಸಂಚಾರ ಆರಂಭಿಸಿದರೆ, ಪ್ರಯಾಣದ ಅವಧಿಯು ಮತ್ತಷ್ಟು ಕಡಿಮೆಯಾಗಲಿದೆ ಎಂದು ಭಾವಿಸಲಾಗಿದೆ.
ಇದಕ್ಕೂ ಮುಂಚೆ ಬೆಂಗಳೂರು ಹಾಗೂ ಹೈದರಾಬಾದ್ ನಡುವೆ ಶೀಘ್ರವೇ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಕಾರ್ಯಾಚರಣೆ ಆರಂಭವಾಗಲಿದೆ ಎಂದು ವರದಿಗಳು ತಿಳಿಸಿದ್ದವು. ಆದರೆ ಕಾರ್ಯಾಚರಣೆ ದಿನಾಂಕದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಇವರೆಡು ನಗರಗಳ ನಡುವೆ 618 ಕಿಲೋಮೀಟರ್ ಅಂತರವನ್ನು 7 - 8 ಗಂಟೆಗಳಲ್ಲಿ ವಂದೇ ಭಾರತ್ ಕ್ರಮಿಸಲಿದೆ ಎಂದು ಹೇಳಲಾಗಿದೆ.
ಶಿವಮೊಗ್ಗದಿಂದ ಬೆಂಗಳೂರು ನಡುವೆಯೂ ಶೀಘ್ರದಲ್ಲಿಯೇ ವಂದೇ ಭಾರತ್ ಎಕ್ಸ್ಪ್ರೆಸ್ ಓಡಾಟ ಆರಂಭಿಸಲಾಗುತ್ತದೆಯೂ ಎಂದು ಹೇಳಲಾಗುತ್ತಿದೆ. ಅದಕ್ಕಾಗಿ ಎಲ್ಲ ಸಿದ್ಧತೆಗಳು ಪ್ರಾರಂಭವಾಗಿವೆ. ಮಂಗಳೂರು ಬೆಂಗಳೂರು ನಡುವೆಯೂ ಈ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಓಡಿಸಲಾಗುತ್ತದೆ ಎಂದು ವರದಿಗಳು ತಿಳಿಸಿವೆ.
ಪ್ರಸ್ತುತ, ಕರ್ನಾಟಕದಲ್ಲಿ ಎರಡು ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು ಸಂಚರಿಸುತ್ತಿವೆ. ಬೆಂಗಳೂರು - ಹುಬ್ಬಳ್ಳಿ - ಧಾರವಾಡ ನಡುವೆ ಓಡಾಟ ನಡೆಸುವ ರೈಲು ವಾರದ ಎಲ್ಲ ದಿನಗಳಲ್ಲಿ ಮಂಗಳವಾರ ಹೊರತುಪಡಿಸಿ ಕಾರ್ಯಾಚರಣೆ ನಡೆಸುತ್ತಿದೆ. ಇದು 7 ಗಂಟೆ ಪ್ರಯಾಣದ ಅವಧಿಯಾಗಿದೆ. ಇನ್ನೊಂದು ರೈಲು ಚೆನ್ನೈ - ಬೆಂಗಳೂರು - ಮೈಸೂರು ಮಾರ್ಗದಲ್ಲಿ ಸಂಚರಿಸುತ್ತಿದೆ.
ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು ಸೆಮಿ ಹೈಸ್ಟೀಡ್ ರೈಲುಗಳಾಗಿದ್ದು, ಅತ್ಯುಧುನಿಕ ಸೌಕರ್ಯವನ್ನು ಹೊಂದಿವೆ. ಇದರಲ್ಲಿ ಪ್ರತೇಕ ಎಂಜಿನ್ ಇಲ್ಲ. ಸಂಪೂರ್ಣ ಎಸಿಯಿರುವ ಈ ರೈಲಿನ ಸೀಟುಗಳು ಹೆಚ್ಚು ಆರಾಮದಾಯವಾಗಿವೆ. ಸ್ವಯಂ ಚಾಲಿತ ಬಾಗಿಲು, ಜೈವಿಕ ಶೌಚಾಲಯ, ವೈಫೈ, ಅಗ್ನಿ ಸುರಕ್ಷತಾ ಸಾಧನಗಳನ್ನು ಒಳಗೊಂಡಿವೆ.
-
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ












Click it and Unblock the Notifications