Vande Bharat Express: ರಾಮನಗರದಲ್ಲಿ ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ, ಕಿಟಕಿ ಗಾಜುಗಳು ಪುಡಿಪುಡಿ
ರಾಮನಗರ, ಜುಲೈ 26: ಮೈಸೂರಿನಿಂದ ಚೆನ್ನೈಗೆ ತೆರಳುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ರಾಮನಗರದ ಹೊರವಲಯದಲ್ಲಿ ಕಲ್ಲು ತೂರಾಟ ನಡೆದಿದೆ. ದುಷ್ಕರ್ಮಿಗಳು ಬುಧವಾರ ಕಲ್ಲು ತೂರಾಟ ನಡೆಸಿದ್ದು, ಘಟನೆಯಲ್ಲಿ ರೈಲುಗಳ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ. ಆದರೆ ರೈಲ್ವೇ ಇಲಾಖೆಯಿಂದ ಅಧಿಕೃತ ಹೇಳಿಕೆ ಇನ್ನೂ ಹೊರಬರಬೇಕಿದೆ.
ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಘಟನೆ ಕುರಿತು ಸ್ಥಳೀಯರನ್ನು ವಿಚಾರಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಜುಲೈ 8ರಂದು ರಾಮನಗರ ತಾಲೂಕಿನ ವಡೇರಹಳ್ಳಿಯಲ್ಲಿ ಇಂತಹದ್ದೇ ಘಟನೆ ನಡೆದಿದ್ದು, ಮಂಡ್ಯ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವೆಂಬರ್ 2022 ರಲ್ಲಿ ಪ್ರಾರಂಭವಾದಾಗಿನಿಂದ, ಮೈಸೂರು-ಚೆನ್ನೈ ವಂದೇ ಭಾರತ್ ರೈಲಿನ ಮೇಲೆ ಕನಿಷ್ಠ ಮೂರು ಬಾರಿ ಕಲ್ಲು ತೂರಾಟ ನಡೆಸಲಾಗಿದೆ. ಈ ಘಟನೆಗಳಲ್ಲಿ ರೈಲಿನ ಕಿಟಕಿ ಗಾಜುಗಳು ಪುಡಿಪುಡಿಯಾಗಿರುವ ಬಗ್ಗೆ ವರದಿಯಾಗಿದೆ.
ಈ ಮಧ್ಯೆ, ರಾಮನಗರದಲ್ಲಿ ರೈಲ್ವೆ ರಕ್ಷಣಾ ಪಡೆ ಮತ್ತು ರೈಲ್ವೆ ಪೊಲೀಸರು ಬುಧವಾರ ಜಾಗೃತಿ ಕಾರ್ಯಕ್ರಮ ನಡೆಸಿದರು. ಕಲ್ಲು ತೂರಾಟದ ತೀವ್ರ ಪರಿಣಾಮಗಳ ಕುರಿತು ಪ್ರಯಾಣಿಕರಿಗೆ ಅರಿವು ಮೂಡಿಸಿದರು.
ಬೆಂಗಳೂರು-ಧಾರವಾಡ ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ಮೇಲೆಯೂ ಕಲ್ಲು ತೂರಾಟ ನಡೆಸಲಾಗಿತ್ತು. ಕಳೆದ ಕೆಲವು ವಾರಗಳಲ್ಲಿ ಕಲ್ಲು ತೂರಾಟದ ಹಲವಾರು ಘಟನೆಗಳು ವರದಿಯಾಗಿವೆ.

ಧಾರವಾಡ- ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್
ಧಾರವಾಡ ಹಾಗೂ ಬೆಂಗಳೂರು ಮಾರ್ಗದಲ್ಲಿ ವಂದೇ ಭಾರತ್ ರೈಲು ಸಂಚರಿಸುತ್ತಿದೆ. ಇದು ಕೆಎಸ್ಆರ್ ಬೆಂಗಳೂರು ನಿಲ್ದಾಣದಿಂದ ಬೆಳಿಗ್ಗೆ 5.45 ಕ್ಕೆ ಹೊರಡಲಿದ್ದು, ಮಧ್ಯಾಹ್ನ 12.10 ಕ್ಕೆ ಧಾರವಾಡ ತಲುಪಲಿದೆ. ಧಾರವಾಡದಿಂದ ಮಧ್ಯಾಹ್ನ 1.15ಕ್ಕೆ ಆರಂಭವಾಗಲಿದ್ದು, ರಾತ್ರಿ 7.45ಕ್ಕೆ ಬೆಂಗಳೂರು ತಲುಪಲಿದೆ. ಬೆಂಗಳೂರು ಮತ್ತು ಹುಬ್ಬಳ್ಳಿ-ಧಾರವಾಡ ನಡುವಿನ ಪ್ರಯಾಣದ ಸಮಯ ಸರಿಸುಮಾರು 6 ಗಂಟೆ 30 ನಿಮಿಷಗಳಾಗಿವೆ. ಇದು ಮಂಗಳವಾರ ಹೊರತುಪಡಿಸಿ ಎಲ್ಲಾ ದಿನಗಳಲ್ಲಿ ಕಾರ್ಯನಿರ್ವಹಿಸುತ್ತದೆ.
ಈ ರೈಲು ಎಕ್ಸಿಕ್ಯೂಟಿವ್ ಚೇರ್ (EC) ಮತ್ತು AC ಚೇರ್ ಕಾರ್ (CC) ಎಂಬ ಎರಡು ವಿಭಾಗಗಳನ್ನು ಒಳಗೊಂಡಿದೆ. ಬೆಂಗಳೂರಿನಿಂದ ಧಾರವಾಡಕ್ಕೆ ಇಸಿ ಟಿಕೆಟ್ ದರ ರೂ. 2010 ಮತ್ತು CC ಟಿಕೆಟ್ ಬೆಲೆ ರೂ. 1165. ಧಾರವಾಡದಿಂದ ಬೆಂಗಳೂರಿಗೆ ಇಸಿ ಟಿಕೆಟ್ ದರ ರೂ. 2440 ಮತ್ತು ಸಿಸಿ ಟಿಕೆಟ್ ದರ ರೂ. 1330. ಧಾರವಾಡ - ಬೆಂಗಳೂರು ಟಿಕೆಟ್ ದರ ಹೆಚ್ಚಾಗಿರುತ್ತದೆ. ಏಕೆಂದರೆ ಪ್ರಯಾಣಿಕರು ತಮ್ಮ ಪ್ರಯಾಣದ ಸಮಯದಲ್ಲಿ ತಿಂಡಿ ಹಾಗೂ ಊಟವನ್ನು ಪಡೆಯುತ್ತಾರೆ. ಆದರೆ ಬೆಂಗಳೂರು - ಧಾರವಾಡ ಪ್ರಯಾಣಿಕರಿಗೆ ಉಪಹಾರ ಮತ್ತು ತಿಂಡಿ ಮಾತ್ರ ಸಿಗುತ್ತದೆ.
ಈ ವಂದೇ ಭಾರತ್ ಎಕ್ಸ್ಪ್ರೆಸ್ ಯಶವಂತಪುರ, ದಾವಣಗೆರೆ ಮತ್ತು ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣಗಳಲ್ಲಿ ನಿಲ್ಲುತ್ತದೆ. ಬೆಂಗಳೂರು ಮತ್ತು ಧಾರವಾಡ ನಡುವಿನ ರೈಲು ಮಾರ್ಗದ ಅಂತರವು 489 ಕಿಲೋಮೀಟರ್ಗಳು. ಇದು ಸರಾಸರಿ 70 ಕಿಮೀ ವೇಗದಲ್ಲಿ ಚಲಿಸುತ್ತದೆ.
-
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications