Breaking: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕ
ಬೆಂಗಳೂರು, ಮೇ 27: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನಾಗಿ ಹಿರಿಯ ಐಎಎಸ್ ಅಧಿಕಾರಿ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ.
ಸದ್ಯ ಮುಖ್ಯ ಕಾರ್ಯದರ್ಶಿ ಆಗಿರುವ ಪಿ. ರವಿಕುಮಾರ್ ಅವರು ಮೇ 31ಕ್ಕೆ ನಿವೃತ್ತಿ ಆಗಲಿದ್ದಾರೆ. ಈ ಹಿನ್ನೆಲೆಯಲ್ಲಿ ವಂದಿತಾ ಶರ್ಮಾ ಅವರನ್ನು ಮೇ 31ರಿಂದ ಅನ್ವಯ ಆಗುವಂತೆ ಮುಖ್ಯ ಕಾರ್ಯದರ್ಶಿ ಹುದ್ದೆಗೆ ನೇಮಿಸಲಾಗಿದೆ.

ವಂದಿತಾ ಶರ್ಮಾ ಅವರು ಸದ್ಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತೆ ಹುದ್ದೆಯಲ್ಲಿದ್ದಾರೆ. ವಂದಿತಾ ಶರ್ಮಾ 1986ನೇ ಬ್ಯಾಚ್ನ ಐಎಎಸ್ ಅಧಿಕಾರಿ ಆಗಿದ್ದಾರೆ. ಇವರ ಪತಿ ಐಎಸ್ಎನ್ ಪ್ರಸಾದ್ ಸಹ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಹಣಕಾಸು) ಹುದ್ದೆಯಲ್ಲಿದ್ದಾರೆ.
ಸಿಎಸ್ ಆಗುತ್ತಿರುವ 4ನೇ ಮಹಿಳೆ:
ವಂದಿತಾ ಶರ್ಮಾ ಅವರು ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುತ್ತಿರುವ ನಾಲ್ಕನೇ ಮಹಿಳೆಯಾಗಿದ್ದಾರೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಈ ಹಿಂದೆ 2000 ನೇ ಇಸವಿಯಲ್ಲಿ ತೆರೇಸಾ ಭಟ್ಟಾಚಾರ್ಯ, 2006 ನೇ ಇಸವಿಯಲ್ಲಿ ಮಾಲತಿ ದಾಸ್ ಹಾಗೂ 2017 ನೇ ಇಸವಿಯಲ್ಲಿ ಕೆ. ರತ್ನ ಪ್ರಭ ಅವರೂ ಅಲಂಕರಿಸಿದ್ದರು.
ಕೆ ರತ್ನ ಪ್ರಭ ಅವರ ಅಧಿಕಾರಾವಧಿಯಲ್ಲಿ ರಾಜ್ಯ ಪೋಲಿಸ್ ಮಹಾನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಹುದ್ದೆಯನ್ನು ನೀಲಮಣಿ ಎನ್ ರಾಜು ಅಲಂಕರಿಸಿದಾಗ ಎರಡು ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರೇ ಇದ್ದಾರೆ ಎಂಬುದು ಗಮನಾರ್ಹ ಅಂಶವಾಗಿತ್ತು.
ಇದೀಗ ವಂದಿತಾ ಶರ್ಮಾ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದೊಡನೆಯೇ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಇರುವ ಮೂರೂ ಪ್ರಮುಖ ಹುದ್ದೆಗಳನ್ನು ಮಹಿಳೆಯರೇ ಅಲಂಕರಿಸಿದಂತಾಗುತ್ತದೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಹಾಗೂ ರಾಜ್ಯ ವಿಧಾನ ಪರಿಷತ್ ಕಾರ್ಯದರ್ಶಿ ಕೆ ಆರ್ ಮಹಾಲಕ್ಷ್ಮಿ ಶಕ್ತಿ ಕೇಂದ್ರದ ಶಕ್ತಿಯಾಗಿ ಹೊಸ ದಾಖಲೆ ಸ್ಥಾಪಿಸಲಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications