Breaking: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ
ಬೆಂಗಳೂರು, ಮೇ 31: ಐಎಎಸ್ ಹಿರಿಯ ಅಧಿಕಾರಿ ವಂದಿತಾ ಶರ್ಮಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಮಂಗಳವಾರ ಸಂಜೆ ಅಧಿಕಾರ ಸ್ವೀಕರಿಸಿದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ. ರವಿಕುಮಾರ್ ಅವರ ವಯೋ ನಿವೃತ್ತಿಯಿಂದ ತೆರವಾದ ಹುದ್ದೆಗೆ ಕರ್ನಾಟಕ ವೃಂದದ ಭಾರತೀಯ ಆಡಳಿತ ಸೇವೆಯ 1986 ನೇ ಸಾಲಿನ ತಂಡದ ವಂದಿತಾ ಶರ್ಮಾ ಉತ್ತರಾಧಿಕಾರಿಯಾಗಿದ್ದಾರೆ.
ವಂದಿತಾ ಶರ್ಮಾ ಅವರು ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುತ್ತಿರುವ ನಾಲ್ಕನೇ ಮಹಿಳೆಯಾಗಿದ್ದಾರೆ. ಅಂತೆಯೇ, ರಾಜ್ಯ ಸರ್ಕಾರದ 39 ನೇ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ.

ಮಹಿಳೆಯರ ದರ್ಬಾರ್ !
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಈ ಹಿಂದೆ 2000 ನೇ ಇಸವಿಯಲ್ಲಿ ತೆರೇಸಾ ಭಟ್ಟಾಚಾರ್ಯ, 2006 ನೇ ಇಸವಿಯಲ್ಲಿ ಮಾಲತಿ ದಾಸ್ ಹಾಗೂ 2017 ನೇ ಇಸವಿಯಲ್ಲಿ ಕೆ. ರತ್ನ ಪ್ರಭ ಅವರೂ ಅಲಂಕರಿಸಿದ್ದರು.
ಕೆ ರತ್ನ ಪ್ರಭ ಅವರ ಅಧಿಕಾರಾವಧಿಯಲ್ಲಿ ರಾಜ್ಯ ಪೋಲಿಸ್ ಮಹಾನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಹುದ್ದೆಯನ್ನು ನೀಲಮಣಿ ಎನ್ ರಾಜು ಅಲಂಕರಿಸಿದಾಗ ಎರಡು ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರೇ ಇದ್ದಾರೆ ಎಂಬುದು ಗಮನಾರ್ಹ ಅಂಶವಾಗಿತ್ತು. ಇದೀಗ ವಂದಿತಾ ಶರ್ಮಾ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸುವುದರೊಂದಿಗೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಇರುವ ಮೂರೂ ಪ್ರಮುಖ ಹುದ್ದೆಗಳನ್ನು ಮಹಿಳೆಯರೇ ಅಲಂಕರಿಸಿದಂತಾಗುತ್ತದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಹಾಗೂ ರಾಜ್ಯ ವಿಧಾನ ಪರಿಷತ್ ಕಾರ್ಯದರ್ಶಿ ಕೆ ಆರ್ ಮಹಾಲಕ್ಷ್ಮಿ ಶಕ್ತಿ ಕೇಂದ್ರದ ಶಕ್ತಿಯಾಗಿ ಹೊಸ ದಾಖಲೆ ಸ್ಥಾಪಿಸಲಿದ್ದಾರೆ.
ವಂದಿತಾ ಶರ್ಮಾ ಅವರ ನೇಮಕಾತಿಯಲ್ಲಿ ರಾಜ್ಯ ಸರ್ಕಾರವು ಎಂದಿನಂತೆ ಸೇವಾ ಹಿರಿತನವನ್ನು ಪುರಸ್ಕರಿಸಿದೆ. ವಂದಿತಾ ಶರ್ಮಾ ಅವರ ಅಧಿಕಾರಾವಧಿ ನವೆಂಬರ್ 30, 2023 ರವರೆಗೆ ಇದೆ.
ವಂದಿತಾ ಶರ್ಮಾ ಅವರ ಪತಿಯೂ ಕೂಡಾ ಭಾರತೀಯ ಆಡಳಿತ ಸೇವೆಯ ಅಧಿಕಾರಿಯಾಗಿ, ಪ್ರಸ್ತುತ ಹಣಕಾಸು ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ. ಅಲ್ಲದೆ, ಇದೇ ದಿನದಿಂದು ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರ ಹುದ್ದೆಯ ಅಧಿಕ ಪ್ರಭಾರವನ್ನೂ ವಹಿಸಿಕೊಂಡಿದ್ದಾರೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications