ವಾರಾಹಿ ಯೋಜನೆ ಮೇ 30ರಂದು ಲೋಕಾರ್ಪಣೆ
ಉಡುಪಿ, ಮೇ 26 : ವಾರಾಹಿ ನೀರಾವರಿ ಯೋಜನೆಯ ಪ್ರಥಮ ಹಂತದ ಉದ್ಘಾಟನೆ ಮತ್ತು ಎರಡನೇ ಹಂತದ ಕಾಮಗಾರಿಗೆ ಮೇ 30ರಂದು ಚಾಲನೆ ನೀಡಲಾಗುತ್ತದೆ ಎಂದು ನಗರಾಭಿವೃದ್ಧಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ. ಕುಂದಾಪುರದ 33 ಮತ್ತು ಉಡುಪಿ ತಾಲ್ಲೂಕಿನ 37 ಗ್ರಾಮಗಳಿಗೆ ನೀರು ಒದಗಿಸುವ ಯೋಜನೆಯನ್ನು 75 ಕೋಟಿ ವೆಚ್ಚದಲ್ಲಿ ಪೂರ್ಣಗೊಳಿಸಲಾಗಿದೆ.
ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಚಿವ ವಿನಯ್ ಕುಮಾರ ಸೊರಕೆ, ಕುಂದಾಪುರದ 33 ಮತ್ತು ಉಡುಪಿ ತಾಲ್ಲೂಕಿನ 37 ಗ್ರಾಮಗಳ ಒಟ್ಟು 15,702 ಹೆಕ್ಟೇರ್ ಜಮೀನಿಗೆ ನೀರು ಒದಗಿಸುವ ವಾರಾಹಿ ಯೋಜನೆಯನ್ನು 75 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. 42.73 ಕಿ.ಮೀ ಕಾಲುವೆ ಕಾಮಗಾರಿ ಪೂರ್ಣಗೊಂಡಿದ್ದು ಮೇ 30ರಂದು ಇದನ್ನು ಉದ್ಘಾಟಿಸಲಾಗುತ್ತದೆ ಎಂದರು.

ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಹಾಗೂ ಪರಿಸರ ಮತ್ತು ಅರಣ್ಯ ಸಚಿವ ಬಿ.ರಮಾನಾಥ ರೈ ಅವರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದರು. ಮೇ 30ರಂದು ಎರಡನೇ ಹಂತದ ಯೋಜನೆಯ ಕಾಮಗಾರಿಯನ್ನು ಆರಂಭಿಸಲಾಗುವುದು ಎಂದು ಹೇಳಿದರು.
ಎರಡನೇ ಹಂತದ ಯೋಜನೆಯಡಿ ಸಾಲಿಗ್ರಾಮ ಪಟ್ಟಣ ಪಂಚಾಯಿತಿ, ಬ್ರಹ್ಮಾವರ ಗ್ರಾಮಾಂತರ ಪ್ರದೇಶದಲ್ಲಿ ಕುಡಿಯುವ ನೀರಿನ ಯೋಜನೆ ಮತ್ತು ಉಡುಪಿ ನಗರಸಭೆಗೆ ನೀರು ಪೂರೈಕೆ ಮಾಡಲು ಪ್ರಸ್ತಾವನೆ ಸಿದ್ದಪಡಿಸಲಾಗಿದೆ. ಉದ್ಯಾವರ, ಕೊರಂಗ್ರಪಾಡಿ, ಅಲೆವೂರು, ಕಡೆಕಾರು, ಅಂಬಲಪಾಡಿ ಗ್ರಾಮಗಳನ್ನು ಉಡುಪಿ ನಗರಸಭೆಗೆ ಸೇರ್ಪಡೆ ಮಾಡಲು ಪ್ರಸ್ತಾವನೆಯಲ್ಲಿ ಶಿಫಾರಸು ಮಾಡಲಾಗಿದೆ ಎಂದು ಸಚಿವರು ಹೇಳಿದರು.
ಕರ್ನಾಟಕ ಸರ್ಕಾರ ಹೆಜಮಾಡಿ, ಕೊಡೇರಿ, ಮಲ್ಪೆ ಬಂದರುಗಳ ಅಭಿವೃದ್ಧಿಗೆ 43.55 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಹೆಜಮಾಡಿ ಬಂದರು ನಿರ್ಮಾಣಕ್ಕೆ 123 ಕೋಟಿ ಕ್ರಿಯಾಯೋಜನೆ ಸಿದ್ದಪಡಿಸಿ ತಾತ್ವಿಕ ಒಪ್ಪಿಗೆ ಪಡೆಯಲಾಗಿದೆ. ಮೀನುಗಾರಿಕಾ ದೋಣಿಗಳ ಡೀಸೆಲ್ ಮೇಲಿನ ಮಾರಾಟಕರ ವಿನಾಯಿತಿಗಾಗಿ 47.32 ಕೋಟಿ, ಹೂಳೆತ್ತುವ ಕಾಮಗಾರಿಗೆ 4.80 ಕೋಟಿ ವಿನಿಯೋಗಿಸಲಾಗಿದೆ ಎಂದರು.
ವಿವಿ ಪಿಜಿ ಸೆಂಟರ್ : ಬೆಳಪು ಗ್ರಾಮದಲ್ಲಿ 5 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಪಿಜಿ ಸೆಂಟರ್ ಆರಂಭಿಸಲು ಸಿದ್ಧತೆ ನಡೆಯುತ್ತಿದೆ. ಉಡುಪಿಯ ತೆಂಕನಿಡಿಯೂರಿನಲ್ಲಿ ಮಂಗಳೂರು ವಿವಿಯ ಉಪಕೇಂದ್ರ ಮತ್ತು ಬೆಳಪು ಗ್ರಾಮಕ್ಕೆ ಪ್ರಾದೇಶಿಕ ವಿಜ್ಞಾನ ಸಂಶೋಧನಾ ಕೇಂದ್ರ ಮಂಜೂರಾಗಿದೆ ಎಂದು ಸಚಿವರು ಹೇಳಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications