Gruha Lakshmi scheme: ವರಮಹಾಲಕ್ಷ್ಮಿ ಹಬ್ಬಕ್ಕೆ ಗೃಹಲಕ್ಷ್ಮಿ ಹಣ- ಸರ್ಕಾರದಿಂದ ಸಿಹಿ ಸುದ್ದಿ
ಬೆಂಗಳೂರು ಆಗಸ್ಟ್ 6: ರಾಜ್ಯದಲ್ಲಿ ವರಮಹಾಲಕ್ಷ್ಮಿ ಹಬ್ಬದ ತಯಾರಿಯಲ್ಲಿ ಗೃಹಿಣಿಯರು ನಿರತರಾಗಿದ್ದಾರೆ. ಹಬ್ಬ ಸಮೀಸುತ್ತಿದ್ದಂತೆ ಖರ್ಚು ವೆಚ್ಚಗಳು ಅಧಿಕವಾಗಿವೆ. ಹಾಗಂತ ಹಬ್ಬ ಆಚರಣೆ ಮಾಡದೇ ಇರಲು ಸಾಧ್ಯವಿಲ್ಲ. ಈ ವೇಳೆ ರಾಜ್ಯ ಸರ್ಕಾರ ಗೃಹಿಣಿಯರಿಗೆ ಸಿಹಿ ಸುದ್ದಿ ನೀಡಲು ನಿರ್ಧರಿಸಿದೆ.
ಹೌದು... ಕಳೆದ ಎರಡು ತಿಂಗಳಿನಿಂದ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣ ಜಮಾ ಆಗಿಲ್ಲ. ಹೀಗಾಗಿ ಮಹಿಳೆಯರು ಈ ಹಣಕ್ಕಾಗಿ ಎದುರು ನೋಡುತ್ತಿದ್ದಾರೆ. ಜೂನ್ ತಿಂಗಳ ಹಣ ಇಂದು ಅಥವಾ ನಾಳೆ ಖಾತೆ ಸೇರುವ ಸೂಚನೆ ಸಿಕ್ಕಿದೆ. ಇದರಿಂದಾಗಿ ಹಬ್ಬದ ತಯಾರಿಯಲ್ಲಿರುವ ಮಹಿಳೆಯರು ಸಂತೋಷಗೊಂಡಿದ್ದಾರೆ.

ಈಗಾಗಲೇ ಜೂನ್ ತಿಂಗಳ ಹಣ ಬಿಡುಗಡೆ ಪ್ರಕ್ರಿಯೆ ಆರಂಭವಾಗಿದ್ದು, ನಾಳೆಯೊಳಗೆ 26.65 ಲಕ್ಷ ಅರ್ಹ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ ಎನ್ನಲಾಗುತ್ತಿದೆ. ಒಂದು ವೇಳೆ ಹಣ ಬಿಡುಗಡೆಯಾದರೆ ಹಬ್ಬದ ತಯಾರಿಯಲ್ಲಿರುವ ಮಹಿಳೆಯರಿಗೆ ವರಮಹಾಲಕ್ಷ್ಮಿ ಹಬ್ಬದ ಸಡಗರ ಮತ್ತಷ್ಟು ಸಂತೋಷ ಹೆಚ್ಚಿಸುವುದರಲ್ಲಿ ಅನುಮಾನವಿಲ್ಲ.
ಬೆಂಗಳೂರು, ಕೋಲಾರ, ಹಾವೇರಿ, ರಾಯಚೂರು, ಕೊಪ್ಪಳ, ಗದಗ, ವಿಜಯಪುರ, ಬೀದರ್, ಬೆಳಗಾವಿ, ಕಲಬುರ್ಗಿ, ಬಾಗಲಕೋಟೆ, ಚಿತ್ರದುರ್ಗ, ಯಾದಗಿರಿ ಜಿಲ್ಲೆಗಳ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ಮೊದಲ ಹಂತದಲ್ಲಿ 533 ಕೋಟಿ ರೂಪಾಯಿ ಪಾವತಿಯಾಗಲಿದೆ. ಹೀಗಾಗಿ ಈ ಬಾರಿ ವರಮಹಾಲಕ್ಷ್ಮಿ ಹಬ್ಬ ಮತ್ತಷ್ಟು ಮೆರಗು ಪಡೆದುಕೊಳ್ಳಲಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಮಹಿಳೆಯರಿಗೆ ತಿಂಗಳಿಗೆ 2000 ರೂಪಾಯಿ ಹಣ ನೀಡುವ ಗೃಹಲಕ್ಷ್ಮೀ ಯೋಜನೆ ಇದಾಗಿದೆ. ಆದರೆ ಕಳೆದ ಎರಡ್ಮೂರು ತಿಂಗಳುಗಳಿಂದ ಸರ್ಕಾರ ಮಹಿಳೆಯರ ಖಾತೆಗೆ ಹಣ ಹಾಕದೇ ಇರೋದು ಮಹಿಳೆಯರಿಗೆ ಕೊಂಚ ಬೇಸರಗೊಳಿಸಿತ್ತು. ಇದೀಗ ಸಾಲು ಸಾಲು ಹಬ್ಬಗಳ ಮಧ್ಯೆ ಮಹಿಳೆಯರಿಗೆ ರಾಜ್ಯ ಸರ್ಕಾರ ಗುಡ್ನ್ಯೂಸ್ ನೀಡಲು ಮುಂದಾಗಿದೆ.
ಆಗಸ್ಟ್ ತಿಂಗಳಿನಿಂದ ವರಮಹಾಲಕ್ಷ್ಮೀ, ನಾಗರ ಪಂಚಮಿ, ಶ್ರೀ ಕೃಷ್ಣ ಜನ್ಮಾಷ್ಟಮಿ ಹೀಗೆ ಸಾಲು ಸಾಲು ಹಬ್ಬಗಳು ಬರುತ್ತವೆ. ಈ ವೇಳೆ ಒಂದಿಷ್ಟು ಅಗತ್ಯ ವಸ್ತುಗಳನ್ನು ಖರೀದಿ ಮಾಡಲು ಹಣದ ಅವಶ್ಯಕತೆ ಇರುತ್ತದೆ. ರಾಜ್ಯದ ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರು ಗೃಹಲಕ್ಷ್ಮೀ ಯೋಜನೆ ಬಂದ ಬಳಿಕ ಅಗತ್ಯ ವಸ್ತುಗಳ ಖರೀದಿಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ನೆಚ್ಚಿಕೊಂಡಿದ್ದಾರೆ.
ಹೀಗಾಗಿ ಮುಂದಿನ ದಿನಗಳಲ್ಲಿ ಬರುವ ಸಾಲು ಸಾಲು ಹಬ್ಬಗಳಿಗೆ ಕೊಡುಗೆಯಾಗಿ ಸಿಎಂ ಸಿದ್ದರಾಮಯ್ಯ ಸರ್ಕಾರ ಮಹಿಳೆಯರಿಗೆ ಸಿಹಿ ಸುದ್ದಿ ನೀಡಲು ಮುಂದಾಗಿದ್ದು, ಜೂನ್ ತಿಂಗಳ ಗೃಹಲಕ್ಷ್ಮಿ ಹಣವನ್ನು ನೀಡಲು ತಯಾರಿ ನಡೆಸಿದೆ. ಇದರಿಂದಾಗಿ ಈ ಹಬ್ಬದ ಸಂತಸ ಹೆಚ್ಚಾಗಲಿದೆ. ಒಟ್ಟಿನಲ್ಲಿ ಗೃಹಲಕ್ಷ್ಮಿ ಹಣ ಕೆಲ ದಿನಗಳಲ್ಲಿ ಮಹಿಳೆಯರ ಖಾತೆಗೆ ಜಮಾ ಆಗಲಿದ್ದು, ಸಿದ್ದರಾಮಯ್ಯ ಸರ್ಕಾರದ ಈ ಯೋಜನೆಯ ಬಗ್ಗೆ ಮಹಿಳಾ ಮಣಿಗಳು ಸಾಕಷ್ಟು ಸಂತೋಷಗೊಂಡಿದ್ದಾರೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications