Cauvery Water: ಕಾವೇರಿಗೆ ಗಂಗಾ ಮಾದರಿಯಲ್ಲಿ ಆರತಿ: ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ
ಮಂಡ್ಯ: ಕಾವೇರಿ ನದಿಗೆ ವಾರಾಣಸಿಯಲ್ಲಿನ ಗಂಗಾ ನದಿಗೆ ಮಾಡಲಾಗುವ ಗಂಗಾ ಆರತಿಯ ಮಾದರಿಯಲ್ಲಿ ಆರತಿ ಕಾರ್ಯಕ್ರಮ ಆಯೋಜಿಸಲು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಪ್ಪಿಗೆ ಸೂಚಿಸಿದ್ದಾರೆ. ಅಲ್ಲದೆ, ಇದಕ್ಕೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಶಾಸಕರು, ಅಧಿಕಾರಿಗಳ ಸಮಿತಿಯನ್ನು ರವಿಸುವುದಾಗಿಯೂ ಘೋಷಿಸಿದ್ದಾರೆ. ಈ ಸಂಬಂಧ ಶಾಸಕ ದಿನೇಶ್ ಗೂಳಿಗೌಡ ಅವರು ಮನವಿ ಮಾಡಿದ್ದನ್ನು ಸಹ ಡಿಸಿಎಂ ಪ್ರಸ್ತಾಪ ಮಾಡಿದ್ದು, ಕೂಡಲೇ ಸ್ಪಂದಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಕಾವೇರಿ ನೀರಾವರಿ ನಿಗಮದ ವತಿಯಿಂದ ಸೋಮವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಈ ಘೋಷಣೆ ಮಾಡಿದ್ದು, ಗಂಗಾ ಆರತಿಯ ಅಧ್ಯಯನಕ್ಕೆ ತಂಡ ರಚಿಸುವುದಾಗಿ ಘೋಷಿಸಿದರು.

ಡಿಸಿಎಂಗೆ ಮನವಿ ಮಾಡಿದ ಶಾಸಕ ದಿನೇಶ್ ಗೂಳಿಗೌಡ
ದೇಶದ ಪವಿತ್ರ ನದಿಗಳಲ್ಲಿ ಕಾವೇರಿ ಕೂಡ ಒಂದು. ಭಾಗಮಂಡಲದಲ್ಲಿ ಉದಯವಾಗಿ ತಮಿಳುನಾಡಿನ ಮಾಯಿಲಾಡುತುರೈ ಜಿಲ್ಲೆಯ ಪುಂಪುರಃ ಎಂಬಲ್ಲಿ ಬಂಗಾಳಕೊಲ್ಲಿ ಸೇರುತ್ತದೆ. ನದಿಯು ರಾಜ್ಯದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ವ್ಯವಸಾಯ ಮಾಡಲು ಅನುಕೂಲವಾಗುತ್ತಿದೆ. ಕಾವೇರಿಯಿಂದ ಬೆಂಗಳೂರು, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಸೇರಿ ಸುತ್ತಮುತ್ತಲಿನ ಜಿಲ್ಲೆಗಳ ಕೋಟ್ಯಂತರ ಜನರಿಗೆ ಕುಡಿಯುವ ನೀರು ಕೂಡ ಸಿಗುತ್ತಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ 1657 ಕೆರೆಗಳಿವೆ. ಅದರ ಜತೆಗೆ ತಮಿಳುನಾಡು, ಕೇರಳ ಹಾಗೂ ಪಾಂಡಿಚೇರಿ ರಾಜ್ಯಗಳಿಗೂ ಅನುಕೂಲವಾಗಿದೆ. ಉತ್ತರ ಪ್ರದೇಶದ ವಾರಣಾಸಿಯ ಪಕ್ಕ ಕಾಶಿಯ ವಿಶ್ವನಾಥ ದೇವಾಲಯದ ಪಕ್ಕ ಗಂಗಾ ಆರತಿ ಮಾಡಲಾಗುತ್ತದೆ. ಅದೇ ಮಾದರಿಯಲ್ಲಿ ನಮ್ಮ ಪವಿತ್ರ ಕಾವೇರಿ ನದಿಗೂ ಆರತಿ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಡಿಸಿಎಂ, ಕೂಡಲೇ ಒಪ್ಪಿಗೆ ಸೂಚಿಸಿದ್ದಲ್ಲದೆ, ಸಮಿತಿ ರಚನೆಗೂ ಕ್ರಮವಹಿಸುವುದಾಗಿ ಹೇಳಿದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕರಾದ ದಿನೇಶ್ ಗೂಳಿಗೌಡ ಅವರು, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು, ನನ್ನ ಮನವಿಗೆ ಓಗೊಟ್ಟು, ಕಾವೇರಿ ಪೂಜೆ ಮಾಡುವ ನಿಟ್ಟಿನಲ್ಲಿ ಅಧ್ಯಯನ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮೈಸೂರು, ಮಡಿಕೇರಿ, ಮಂಡ್ಯ ಜಿಲ್ಲೆಗಳ ಹಿರಿಯ ಶಾಸಕರು, ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳ ತಂಡವನ್ನು ವಾರಾಣಸಿಗೆ ಕಳಿಸುವುದಾಗಿ ತಿಳಿಸಿದ್ದಾರೆ.
ಈ ತಂಡವು ಅಧ್ಯಯನ ಮಾಡಿ ವರದಿ ಕೊಡಲು ಸೂಚಿಸಿದ್ದಾರೆ. ಜೊತೆಗೆ ಅಲ್ಲಿಂದ ಒಂದು ತಂಡವನ್ನು ಕರೆದುಕೊಂಡು ಬಂದು ಯಾವ ಜಾಗದಲ್ಲಿ ಕಾವೇರಿ ಆರತಿ ನಡೆಸಬಹುದು ಎಂದು ಜಾಗ ಗುರುತಿಸಲಾಗುವುದು. ಒಂದು ತಿಂಗಳ ಒಳಗಾಗಿ ಈ ಕಾರ್ಯಕ್ರಮ ಮಾಡಲಾಗುವುದು. ಧಾರ್ಮಿಕ ದತ್ತಿ ಇಲಾಖೆ, ಕಾವೇರಿ ನೀರಾವರಿ ನಿಗಮ ಹಾಗೂ ಇತರೇ ಇಲಾಖೆಗಳು ಜಂಟಿಯಾಗಿ ಈ ಕಾರ್ಯಕ್ರಮ ರೂಪಿಸುತ್ತವೆ ಎಂದು ಡಿಸಿಎಂ ತಿಳಿಸಿರುವುದು ನಿಜಕ್ಕೂ ಸಂತೋಷದ ವಿಷಯ ಎಂದು ತಿಳಿಸಿದರು.
ಡಿಸಿಎಂ, ಉಸ್ತುವಾರಿ ಸಚಿವರು, ಶಾಸಕರಿಗೆ ಅಭಿನಂದನೆ
ನನ್ನ ಮನವಿಗೆ ಸ್ಪಂದಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯ ಸ್ವಾಮಿ ಅವರು ಹಾಗೂ ಶ್ರೀರಂಗಪಟ್ಟಣ ಶಾಸಕ ರಮೇಶ ಬಂಡಿಸಿದ್ದೇಗೌಡರಿಗೆ ಕಾವೇರಿ ಕೊಳ್ಳದ ಜನತೆಯ ಪರವಾಗಿ, ಮಂಡ್ಯ, ಬೆಂಗಳೂರು ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ದಿನೇಶ ಗೂಳಿಗೌಡ ತಿಳಿಸಿದ್ದಾರೆ.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications