ಕರ್ನಾಟಕದ ಎಲ್ಲ ರಾಜಕೀಯ ಪಕ್ಷಗಳು ತಮಿಳರ ಪರವಾಗಿವೆ: ವಾಟಾಳ್ ನಾಗರಾಜ್!
ಬೆಂಗಳೂರು, ಜು. 13: ಕೋಲಾರದಲ್ಲಿ ಹಾಕಿರುವ ತಮಿಳು ನಾಮಫಲಕಗಳನ್ನು ತೆರವುಗೊಳಿಸಬೇಕೆಂದು ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಪಿ. ರವಿಕುಮಾರ್ ಅವರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಆಗ್ರಹಿಸಿದ್ದಾರೆ. "ರಾಜಕೀಯ ಲಾಭದ ಆಸೆಯಿಂದ ಎಲ್ಲ ರಾಜ್ಯದ ಎಲ್ಲ ರಾಜಕೀಯ ಪಕ್ಷಗಳು ತಮಿಳರ ಪರವಾಗಿ ನಿಂತಿವೆ" ಎಂದು ಗಂಭೀರ ಆರೋಪವನ್ನು ವಾಟಾಳ್ ನಾಗರಾಜ ಮಾಡಿದ್ದಾರೆ. ವಿಧಾನಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.
"ಕೋಲಾರ ಚಿನ್ನದ ನಾಡು, ಗಂಡುಮೆಟ್ಟಿದ ನಾಡು. ಆದರೆ ಅದು ಈಗ ತಮಿಳು ರಾಜ್ಯವಾಗಿದೆ. ತಮಿಳರ ಕೋಟೆಯಾಗಿದೆ , ತಮಿಳೇ ಅಲ್ಲಿ ಪ್ರಭುತ್ವವಾಗಿದೆ. ಇಷ್ಟೇ ಅಲ್ಲ ಅಲ್ಲಿನ ಬಹುತೇಕ ಶಾಸಕರು ಕೂಡ ತಮಿಳರೇ ಆಗಿದ್ದಾರೆ. ಬಹಳ ವರ್ಷದ ಹಿಂದೆ ನಾವು ಅಲ್ಲಿಗೆ ಹೋಗಿದ್ದೇವು. ತಮಿಳು ನಾಮಫಲಕ ಕಿತ್ತೊಗೆದಿದ್ದೆವು. ಈಗ ಮತ್ತೆ ಅಲ್ಲಿ ತಮಿಳು ನಾಮಫಲಕ ಹಾಕಿದ್ದಾರೆ" ಎಂದು ವಾಟಾಳ್ ನಾಗರಾಜ್ ಆರೋಪಿಸಿದ್ದಾರೆ.
"ಕೋಲಾರದಲ್ಲಿ ಪುರಸಭೆ ಅಧ್ಯಕ್ಷರು ಸೇರಿ ತಮಿಳರು ಹಾಕಿಸಿದ್ದಾರೆ. ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರನ್ನು ಭೇಟಿ ಮಾಡಿದ್ದೇನೆ. ಅವರಿಗೆ ಮನವಿ ಸಲ್ಲಿಸಿದ್ದೇನೆ. ಇದು ಕನ್ನಡಿಗರ ಭೂಮಿ, ತಮಿಳರ ಭೂಮಿಯಲ್ಲ. ಇಲ್ಲಿ ಕನ್ನಡವೇ ಇರಬೇಕು, ಕನ್ನಡ ಬಿಟ್ಟು ಬೇರೆ ಭಾಷೆ ಬೇಡ. ನಮ್ಮ ಸರ್ಕಾರದ ನೀತಿ ಕನ್ನಡ ಭಾಷೆ. ಹೀಗಾಗಿ ರಾಜ್ಯ ಭಾಷೆ ಕನ್ನಡದಲ್ಲೇ ನಾಮಫಲಕ ಇರಬೇಕು. ಈ ಕೂಡಲೇ ಸರ್ಕಾರ ಅಲ್ಲಿನ ವರದಿ ತರಿಸಬೇಕು. ಅಲ್ಲಿನ ತಮಿಳು ನಾಮಫಲಕ ತೆರವುಗೊಳಿಸಲು ಮುಖ್ಯಕಾರ್ಯದರ್ಶಿಗೆ ಮನವಿ ಮಾಡಿದ್ದೇವೆ" ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.

Recommended Video
"ನಮ್ಮ ಮನವಿಗೆ ಸ್ಪಂಧಿಸಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕೋಲಾರ ಜಿಲ್ಲಾಧಿಕಾರಿಯಿಂದ ವರದಿ ತರಿಸುವೆ ಎಂದಿದ್ದಾರೆ. ತಮಿಳು ಮತಗಳಿಗಾಗಿ ಎಲ್ಲಾ ಪಕ್ಷ ನಿಂತಿವೆ. ಹೀಗಾಗಿ ರಾಜ್ಯವನ್ನೇ ಅವರಿಗೆ ಮಾರಾಟ ಮಾಡುತ್ತಿದ್ದಾರೆ. ನಾನು ಇದನ್ನು ತೀವ್ರವಾಗಿ ವಿರೋಧಿಸುತ್ತೇನೆ" ಎಂದು ವಿಧಾನಸೌಧದಲ್ಲಿ ವಾಟಾಳ್ ನಾಗರಾಜ್ ಹೇಳಿಕೆ ನೀಡಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications