Get Updates
Get notified of breaking news, exclusive insights, and must-see stories!

'ಸಾವರ್ಕರ್ ಬ್ರಿಟೀಷರ ಪರವಾಗಿ ಕೆಲಸ ಮಾಡಲು ಬಯಸಿದ್ದಾರೆ' ಎಂದು ಗಾಂಧಿ ಹೇಳಿದ್ದರು: ಪ್ರಿಯಾಂಕ್ ಖರ್ಗೆ

ಬೆಂಗಳೂರು, ಆ. 25: ಬಿಜೆಪಿಯವರು ಹೇಳುವಂತೆ ಸಾವರ್ಕರ್ ಸ್ವಾತಂತ್ರ್ಯ ಸೇನಾನಿಯಾಗಿದ್ದರೆ ಭಾರತಕ್ಕೆ ಬರಲು ನಿರಾಕರಿಸಿದ್ದೇಕೆ? ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಕೂ ಮಾಡಿರುವ ಪ್ರಿಯಾಂಕ್ ಖರ್ಗೆ, ಬಿಜೆಪಿಯರು ಹೇಳುವಂತೆ ವೀರ್ ಸಾವರ್ಕರ್ ಸ್ವತಂತ್ರ್ಯ ಸೇನಾನಿ ಎಂಬುದು ಸುಳ್ಳು ಎಂದಿದ್ದಾರೆ.

ಸಾವರ್ಕರ್ ಬ್ರಿಟನ್‌ನಲ್ಲಿದ್ದಾಗ ಪ್ರತೀಕಾರದ ಕಾರಣಕ್ಕೆ ಜಾಕ್ಸನ್ ಎಂಬ ಬ್ರಿಟಿಷ್ ಅಧಿಕಾರಿಯ ಹತ್ಯೆ ನಡೆಯುತ್ತದೆ. ಈ ಪ್ರಕರಣದಲ್ಲಿ ಬಂಧಿತರಾದಾಗ ವಿಚಾರಣೆ ಎದುರಿಸಲು ಭಾರತಕ್ಕೆ ಬರಲು ಅವರು ನಿರಾಕರಿಸುತ್ತಾರೆ. ಬಿಜೆಪಿಯವರು ಹೇಳುವಂತೆ ಸಾವರ್ಕರ್ ಸ್ವಾತಂತ್ರ್ಯ ಸೇನಾನಿಯಾಗಿದ್ದರೆ ಭಾರತಕ್ಕೆ ಬರಲು ನಿರಾಕರಿಸಿದ್ದೇಕೆ ಎಂದು ಪ್ರಶ್ನಿಸಿದ್ದಾರೆ.

VD Savarkar is not a Freedom Fighter: Priyank Kharge slams BJP

ದೇಶ ವಿಭಜನೆಗೆ ನೆಹರೂ-ಗಾಂಧಿ ಕಾರಣ ಎನ್ನುವ ಬಿಜೆಪಿಗರು ಇತಿಹಾಸ ಓದಲಿ. ಧರ್ಮದ ಆಧಾರದ ಮೇಲೆ ದೇಶ ವಿಭಜನೆ ಆಗಬೇಕು ಎಂದು ಮೊದಲು ಧ್ವನಿ ಎತ್ತಿದ್ದೇ ಸಾವರ್ಕರ್! 'ಜಿನ್ನಾ ಅವರ ದೇಶ ವಿಭಜನೆಯ ಅಭಿಪ್ರಾಯವನ್ನು ನಾನು ಸಂಪೂರ್ಣ ಒಪ್ಪುತ್ತೇನೆ' ಎಂದಿದ್ದರು ಸಾವರ್ಕರ್.

ಇಡೀ ದೇಶ 'ಸಂಪೂರ್ಣ ಸ್ವರಾಜ್ಯ'ಕ್ಕೆ ಅಗ್ರಹಿಸುತ್ತಿದ್ದಾಗ ಸಾರ್ವಕರ್ ಹಿಂದೂ ಮಹಾಸಭಾ ಮೂಲಕ ಬ್ರಿಟೀಷರಿಗೆ ಬೆಂಬಲ ನೀಡಿದ್ದು ಯಾಕೆ? ಸಾವರ್ಕರ್ ಅವರು ಕ್ವಿಟ್ ಇಂಡಿಯಾ ಚಳುವಳಿಗೆ ಸಹಕಾರ ನೀಡಲಿಲ್ಲ ಯಾಕೆ? ದೇಶದ ವಿವಿಧ ಪ್ರಾಂತ್ಯಗಳಲ್ಲಿ ಮುಸ್ಲಿಂ ಲೀಗ್ ಜೊತೆ ಸರ್ಕಾರ ಮಾಡಿದ್ದು ಯಾಕೆ ಎಂದು ಪ್ರಿಯಾಂಕ ಖರ್ಗೆ ಹಲವು ಪ್ರಶ್ನೆ ಮುಂದಿಟ್ಟಿದ್ದಾರೆ.

VD Savarkar is not a Freedom Fighter: Priyank Kharge slams BJP

2ನೇ ವಿಶ್ವ ಯುದ್ಧದ ಸಂದರ್ಭದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಸೈನ್ಯ ಕಟ್ಟಲು ಮುಂದಾದರು. ಆ ಸಮಯದಲ್ಲೇ ಸಾವರ್ಕರ್ ಬ್ರಿಟೀಷರ ಸೇನೆಗೆ ಲಕ್ಷಾಂತರ ಭಾರತೀಯರನ್ನು ಸೇರಿಸಿದರು. ಬ್ರಿಟೀಷ್ ಸೇನೆಗೆ ಸೇರಿದ ಈ ಭಾರತೀಯರು ಕೊಂದಿದ್ದು ಇದೇ ನಾತಾಜಿ ಅವರ ಅಜಾದ್ ಹಿಂದ್ ಫೌಜ್ ಯೋಧರನ್ನು. ಮಹಾತ್ಮ ಗಾಂಧಿ ಅವರೇ ಸಾರ್ವಕರ್ ಅವರಿಗೆ ಕ್ಷಮಾಪಣಾ ಪತ್ರ ಬರೆಯುವಂತೆ ತಿಳಿಸಿದ್ದರು ಎಂಬ ಬಿಜೆಪಿಗರ ವಾದ ಶುದ್ಧ ಸುಳ್ಳು. ಗಾಂಧೀಜಿ ಅವರೇ ತಮ್ಮ ಲೇಖನದಲ್ಲಿ, 'ಸಾರ್ವಕರ್ ಅವರು ಇನ್ನು ಮುಂದೆ ಬ್ರಿಟೀಷರ ವಿರುದ್ಧ ಯಾವುದೇ ಹೋರಾಟ ಮಾಡುವುದಿಲ್ಲ, ಅವರು ಬ್ರಿಟೀಷರ ಪರವಾಗಿ ಕೆಲಸ ಮಾಡಲು ಬಯಸಿದ್ದಾರೆ' ಎಂದು ಬರೆದಿದ್ದರು.

ಅಂಡಮಾನ್ ಜೈಲಿನಲ್ಲಿ ಸಾವರ್ಕರ್ ಜೊತೆಗೆ ಕಾಲಾಪಾನಿ ಶಿಕ್ಷೆಗೊಳಗಾದ 700ಕ್ಕೂ ಹೆಚ್ಚು ಖೈದಿಗಳಿದ್ದರು. ಬ್ರಿಟಿಷರಿಗೆ ಆಪ್ತವಾಗಿದ್ದ ಸಾವರ್ಕರ್ ಹೊರತುಪಡಿಸಿ ಉಳಿದ ಎಲ್ಲಾ ಖೈದಿಗಳಿಗೆ ಕಠಿಣ ಶಿಕ್ಷೆಯನ್ನು ನೀಡುತ್ತಿದ್ದರು. ಹೀಗಿದ್ದರೂ, ಬ್ರಿಟಿಷರಿಗೆ ಅತಿ ಹೆಚ್ಚು ಬಾರಿ ಕ್ಷಮಾಪಣೆ ಪತ್ರ ಬರೆದಿದ್ದು ಸಾವರ್ಕರ್ ಮಾತ್ರ. ಈ ಬಗ್ಗೆ ಇತಿಹಾಸ ಓದಿ ಬಿಜೆಪಿಯವರು ಸತ್ಯ ಅರಿಯಲಿ ಎಂದಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+