ನರೇಂದ್ರ ಮೋದಿ 11 ದಿನ ಉಪವಾಸ ಮಾಡಿದ್ದೇ ಅನುಮಾನ: ಮಾಜಿ ಸಿಎಂ
ಚಿಕ್ಕಬಳ್ಳಾಪುರ, ಜನವರಿ 23: ಮೋದಿ ಉಪವಾಸ ಮಾಡಿಲ್ಲ. ಏಳನೀರು ಮಾತ್ರ ಕುಡಿದು ಉಪವಾಸ ಮಾಡಿದ್ರೆ ಒಂದೆರೆಡು ದಿನದಲ್ಲಿ ಮನುಷ್ಯ ಬೀಳುತ್ತಾನೆ. 11 ದಿನಗಳ ಉಪವಾಸ ಮಾಡಿದ್ರೆ ಮನುಷ್ಯ ಬದುಕಲು ಸಾಧ್ಯವಿಲ್ಲ. ಈ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಉಪವಾಸ ವ್ರತದ ಮೇಲೆ ಅನುಮಾನವನ್ನ ಮಾಜಿ ಸಿಎಂ ವೀರಪ್ಪ ಮೊಯ್ಲಿ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಗುಜರಾತ್ನ ಹತ್ಯಾಕಾಂಡದ ವೇಳೆ ಅಂದಿನ ಮುಖ್ಯಮಂತ್ರಿ ಆಗಿದ್ದ ಮೋದಿ ರಾಜಧರ್ಮ, ಕಾನೂನು ಪರಿಪಾಲನೆ ಮಾಡಲಿಲ್ಲ. ಅಂತಹ ಮೋದಿ ಅವರಿಂದ ಅಯೋಧ್ಯೆ ರಾಮಲಲ್ಲಾ ಪ್ರತಿಷ್ಠಾಪನೆ ಮಾಡಿಸಿದ್ದು ಎಷ್ಟು ಸರಿ.? ಮೋದಿಯಿಂದ ದೇವಾಲಯಕ್ಕೆ ಎಷ್ಟು ಪಾವಿತ್ರತ್ಯತೆ ಬರಲಿದೆ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೋದಿ ಉಪವಾಸ ಮಾಡಿದ್ದ ಬಗ್ಗೆ ನನಗೆ ಅನುಮಾನವಿದೆ. ಉಪವಾಸ ಮಾಡದೇ ಗರ್ಭಗುಡಿಗೆ ಹೋಗಿದ್ದರೆ ಅಪವಿತ್ರವಾಗುತ್ತದೆ, ಗರ್ಭಗುಡಿಗೆ ಹೋಗಿ ಪೂಜೆ ಮಾಡಿದ್ದರೆ ಆ ಸ್ಥಳ ಅಪವಿತ್ರವಾಗುತ್ತದೆ. ಅಪವಿತ್ರವಾಗಿ ಆ ಸ್ಥಳದಲ್ಲಿ ಯಾವುದೇ ಶಕ್ತಿ ಇರಲ್ಲ. ರಾಮಮಂದಿರ ಹೆಸರೇಳಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಇನ್ಮುಂದೆ ಬಿಜೆಪಿಗೆ ಮಾತಾಡಲು ಬೇರೆ ವಿಚಾರವಿಲ್ಲ ಎಂದು ಹೇಳಿದರು.
ನರೇಂದ್ರ ಮೋದಿ ಗರ್ಭಗುಡಿಗೆ ಪ್ರವೇಶ ಮಾಡಿದೆ ತಪ್ಪು, ಪ್ರಾಣ ಪ್ರತಿಷ್ಠಾಪನೆ ಮಾಡಿದ್ದು ಸಹ ತಪ್ಪು, ನಿಜವಾದ ಸ್ವಾಮೀಜಿಗಳು, ಬ್ರಾಹ್ಮಣರು ಆಗಿದ್ರೆ ನರೇಂದ್ರ ಮೋದಿ ಅವರನ್ನು ಗರ್ಭಗುಡಿ ಒಳಗೆ ಬಿಡಬಾರದಿತ್ತು. ಯೋಧ್ಯೆ ರಾಮಮಂದಿರ ಲೋಕಾರ್ಪಣೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಗರ್ಭಗುಡಿಗೆ ಬಿಡಬಾರದಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಮಮಂದಿರ ಅಪೂರ್ಣ ಮಂದಿರ. ಕೇವಲ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಮಾಡಿದ್ರೆ ಸಾಲದು. ಅಲ್ಲಿ ರಾಮ ಲಕ್ಷಣ, ಸೀತಾ ಹಾಗೂ ಆಂಜನೇಯನ ವಿಗ್ರಹಗಳು ಇರಬೇಕು ಆಗಲೇ ರಾಮಮಂದಿರ ಪೂರ್ಣ ಆಗೋದು ಎಂದರು.
ಆಯೋಧ್ಯೆಯಲ್ಲಿ ಭವ್ಯ ಶ್ರೀರಾಮ ಮಂದಿರ ಲೋಕಾರ್ಪಣೆಗೊಂಡಿದೆ. ಪ್ರಧಾನಿ ಮೋದಿ ಅಮೃತ ರಾಮಲಲ್ಲಾ ಪ್ರಾಣಪ್ರತಿಷ್ಠೆ ನೆರವೇರಿಸಿದ್ದಾರೆ. ರಾಮ ಮಂದಿರ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಮ್ಮ 11 ದಿನಗಳ ಕಠಿಣ ಉಪವಾಸ ವೃತ ಅಂತ್ಯಗೊಳಿಸಿದ್ದಾರೆ.
ಮೊಯ್ಲಿಯವರ ಕೊಳಕು ಮನಸ್ಸು ತೋರಿಸಿದ ಹೇಳಿಕೆ: ರಘು ಕೌಟಿಲ್ಯ
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅವರ ಇವತ್ತಿನ ಹೇಳಿಕೆ ಅವರ ಕೊಳಕು ಮನಸ್ಸನ್ನು ತೋರಿಸುತ್ತದೆ ಎಂದು ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ರಘು ಕೌಟಿಲ್ಯ ಅವರು ತಿಳಿಸಿದರು.
ಒಬ್ಬ ಹಿಂದುಳಿದ ವರ್ಗದ ಪ್ರಮುಖರಾಗಿ, ವೈಚಾರಿಕವಾಗಿ ಒಂದಷ್ಟು, ಸಾಹಿತ್ಯಕವಾಗಿ ಒಂದಷ್ಟು ಹಿನ್ನೆಲೆಯಿರುವ ಮೊಯಿಲಿಯವರಿಂದ ಇಂಥ ಕೊಳಕು ಹೇಳಿಕೆಯನ್ನು ಜನರು ನಿರೀಕ್ಷಿಸಿರಲಿಲ್ಲ ಎಂದು ತಿಳಿಸಿದರು.
ಸನಾತನ ಹಿಂದೂ ಧರ್ಮದಲ್ಲಿ ಬಹುದೊಡ್ಡ ಪ್ರಮಾಣದಲ್ಲಿ ಸುಧಾರಣೆಯ ಕ್ರಾಂತಿ ಆಗುತ್ತಿದೆ. ಸಮಾನತೆ, ನಾವೆಲ್ಲರೂ ಒಂದು, ನಾವೆಲ್ಲರೂ ಹಿಂದುಗಳು ಎಂಬ ಭಾವನೆ ಗಟ್ಟಿಗೊಳ್ಳುತ್ತಿದೆ. ಅಯೋಧ್ಯೆಯಲ್ಲಿ ಬಾಲರಾಮನ ವಿಗ್ರಹ ಪ್ರತಿಷ್ಠಾಪನೆ ಮಾಡಿರುವುದು ಹಿಂದೂ ಧರ್ಮದ ಸಮಾನತೆಯ ಸಂಕೇತವಾಗಿದೆ ಎಂದು ವಿವರಿಸಿದರು.
ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಾಲರಾಮನ ಪ್ರತಿಷ್ಠೆ ಮಾಡಿದ್ದು, ಇಡೀ ವಿಶ್ವದ ಹಿಂದೂಗಳ ಪಾಲಿಗೆ ಅತ್ಯಂತ ಸಂಭ್ರಮದ ವಿಷಯವಾಗಿದೆ. ಇದನ್ನು ಕಂಡು ವೀರಪ್ಪ ಮೊಯಿಲಿಯವರು ಪ್ರಶಂಸೆ ಮಾಡಬೇಕಿತ್ತು ಎಂದರು.
ಸನಾತನ ಹಿಂದೂ ಧರ್ಮದಲ್ಲಿ ಭಗವಂತನನ್ನು ಅಪ್ಪಿಕೊಳ್ಳಲು, ಅಪ್ಪಿಕೊಳ್ಳಲು, ಆರಾಧಿಸಲು ಅವಕಾಶ ಆಗಿದೆ. ಆದರೆ, ವೀರಪ್ಪ ಮೊಯಿಲಿ ಅವರ ಹತಾಶೆಯ ಈ ಹೇಳಿಕೆಯ ಮೂಲಕ ಅವರ ಘನತೆಯನ್ನು ತಗ್ಗಿಸಿಕೊಂಡಿದ್ದಾರೆ ಅವರ ಸಂಸ್ಕಾರದಲ್ಲಿ ಕಪ್ಪುಚುಕ್ಕಿಯನ್ನು ಅವರೇ ಬಳಿದುಕೊಂಡಿದ್ದಾರೆ ಎಂದು ತಿಳಿಸಿದರು.
-
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ












Click it and Unblock the Notifications