Get Updates
Get notified of breaking news, exclusive insights, and must-see stories!

ನರೇಂದ್ರ ಮೋದಿ 11 ದಿನ ಉಪವಾಸ ಮಾಡಿದ್ದೇ ಅನುಮಾನ: ಮಾಜಿ ಸಿಎಂ

ಚಿಕ್ಕಬಳ್ಳಾಪುರ, ಜನವರಿ 23: ಮೋದಿ ಉಪವಾಸ ಮಾಡಿಲ್ಲ. ಏಳನೀರು ಮಾತ್ರ ಕುಡಿದು ಉಪವಾಸ ಮಾಡಿದ್ರೆ ಒಂದೆರೆಡು ದಿನದಲ್ಲಿ ಮನುಷ್ಯ ಬೀಳುತ್ತಾನೆ. 11 ದಿನಗಳ ಉಪವಾಸ ಮಾಡಿದ್ರೆ ಮನುಷ್ಯ ಬದುಕಲು ಸಾಧ್ಯವಿಲ್ಲ. ಈ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಉಪವಾಸ ವ್ರತದ ಮೇಲೆ ಅನುಮಾನವನ್ನ ಮಾಜಿ ಸಿಎಂ ವೀರಪ್ಪ ಮೊಯ್ಲಿ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಗುಜರಾತ್‌ನ ಹತ್ಯಾಕಾಂಡದ ವೇಳೆ ಅಂದಿನ ಮುಖ್ಯಮಂತ್ರಿ ಆಗಿದ್ದ ಮೋದಿ ರಾಜಧರ್ಮ, ಕಾನೂನು ಪರಿಪಾಲನೆ ಮಾಡಲಿಲ್ಲ. ಅಂತಹ ಮೋದಿ ಅವರಿಂದ ಅಯೋಧ್ಯೆ ರಾಮಲಲ್ಲಾ ಪ್ರತಿಷ್ಠಾಪನೆ ಮಾಡಿಸಿದ್ದು ಎಷ್ಟು ಸರಿ.? ಮೋದಿಯಿಂದ ದೇವಾಲಯಕ್ಕೆ ಎಷ್ಟು ಪಾವಿತ್ರತ್ಯತೆ ಬರಲಿದೆ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Veerappa moily doubts on narendra modi 11 days fasting over ram lalla pran pratishtha

ಮೋದಿ ಉಪವಾಸ ಮಾಡಿದ್ದ ಬಗ್ಗೆ ನನಗೆ ಅನುಮಾನವಿದೆ. ಉಪವಾಸ ಮಾಡದೇ ಗರ್ಭಗುಡಿಗೆ ಹೋಗಿದ್ದರೆ ಅಪವಿತ್ರವಾಗುತ್ತದೆ, ಗರ್ಭಗುಡಿಗೆ ಹೋಗಿ ಪೂಜೆ ಮಾಡಿದ್ದರೆ ಆ ಸ್ಥಳ ಅಪವಿತ್ರವಾಗುತ್ತದೆ. ಅಪವಿತ್ರವಾಗಿ ಆ ಸ್ಥಳದಲ್ಲಿ ಯಾವುದೇ ಶಕ್ತಿ ಇರಲ್ಲ. ರಾಮಮಂದಿರ ಹೆಸರೇಳಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಇನ್ಮುಂದೆ ಬಿಜೆಪಿಗೆ ಮಾತಾಡಲು ಬೇರೆ ವಿಚಾರವಿಲ್ಲ ಎಂದು ಹೇಳಿದರು.

ನರೇಂದ್ರ ಮೋದಿ ಗರ್ಭಗುಡಿಗೆ ಪ್ರವೇಶ ಮಾಡಿದೆ ತಪ್ಪು, ಪ್ರಾಣ ಪ್ರತಿಷ್ಠಾಪನೆ ಮಾಡಿದ್ದು ಸಹ ತಪ್ಪು, ನಿಜವಾದ ಸ್ವಾಮೀಜಿಗಳು, ಬ್ರಾಹ್ಮಣರು ಆಗಿದ್ರೆ ನರೇಂದ್ರ ಮೋದಿ ಅವರನ್ನು ಗರ್ಭಗುಡಿ ಒಳಗೆ ಬಿಡಬಾರದಿತ್ತು. ಯೋಧ್ಯೆ ರಾಮಮಂದಿರ ಲೋಕಾರ್ಪಣೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಗರ್ಭಗುಡಿಗೆ ಬಿಡಬಾರದಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಮಮಂದಿರ ಅಪೂರ್ಣ ಮಂದಿರ. ಕೇವಲ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಮಾಡಿದ್ರೆ ಸಾಲದು. ಅಲ್ಲಿ ರಾಮ ಲಕ್ಷಣ, ಸೀತಾ ಹಾಗೂ ಆಂಜನೇಯನ ವಿಗ್ರಹಗಳು ಇರಬೇಕು ಆಗಲೇ ರಾಮಮಂದಿರ ಪೂರ್ಣ ಆಗೋದು ಎಂದರು.

ಆಯೋಧ್ಯೆಯಲ್ಲಿ ಭವ್ಯ ಶ್ರೀರಾಮ ಮಂದಿರ ಲೋಕಾರ್ಪಣೆಗೊಂಡಿದೆ. ಪ್ರಧಾನಿ ಮೋದಿ ಅಮೃತ ರಾಮಲಲ್ಲಾ ಪ್ರಾಣಪ್ರತಿಷ್ಠೆ ನೆರವೇರಿಸಿದ್ದಾರೆ. ರಾಮ ಮಂದಿರ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಮ್ಮ 11 ದಿನಗಳ ಕಠಿಣ ಉಪವಾಸ ವೃತ ಅಂತ್ಯಗೊಳಿಸಿದ್ದಾರೆ.

ಮೊಯ್ಲಿಯವರ ಕೊಳಕು ಮನಸ್ಸು ತೋರಿಸಿದ ಹೇಳಿಕೆ: ರಘು ಕೌಟಿಲ್ಯ

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅವರ ಇವತ್ತಿನ ಹೇಳಿಕೆ ಅವರ ಕೊಳಕು ಮನಸ್ಸನ್ನು ತೋರಿಸುತ್ತದೆ ಎಂದು ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ರಘು ಕೌಟಿಲ್ಯ ಅವರು ತಿಳಿಸಿದರು.

ಒಬ್ಬ ಹಿಂದುಳಿದ ವರ್ಗದ ಪ್ರಮುಖರಾಗಿ, ವೈಚಾರಿಕವಾಗಿ ಒಂದಷ್ಟು, ಸಾಹಿತ್ಯಕವಾಗಿ ಒಂದಷ್ಟು ಹಿನ್ನೆಲೆಯಿರುವ ಮೊಯಿಲಿಯವರಿಂದ ಇಂಥ ಕೊಳಕು ಹೇಳಿಕೆಯನ್ನು ಜನರು ನಿರೀಕ್ಷಿಸಿರಲಿಲ್ಲ ಎಂದು ತಿಳಿಸಿದರು.

ಸನಾತನ ಹಿಂದೂ ಧರ್ಮದಲ್ಲಿ ಬಹುದೊಡ್ಡ ಪ್ರಮಾಣದಲ್ಲಿ ಸುಧಾರಣೆಯ ಕ್ರಾಂತಿ ಆಗುತ್ತಿದೆ. ಸಮಾನತೆ, ನಾವೆಲ್ಲರೂ ಒಂದು, ನಾವೆಲ್ಲರೂ ಹಿಂದುಗಳು ಎಂಬ ಭಾವನೆ ಗಟ್ಟಿಗೊಳ್ಳುತ್ತಿದೆ. ಅಯೋಧ್ಯೆಯಲ್ಲಿ ಬಾಲರಾಮನ ವಿಗ್ರಹ ಪ್ರತಿಷ್ಠಾಪನೆ ಮಾಡಿರುವುದು ಹಿಂದೂ ಧರ್ಮದ ಸಮಾನತೆಯ ಸಂಕೇತವಾಗಿದೆ ಎಂದು ವಿವರಿಸಿದರು.

ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಾಲರಾಮನ ಪ್ರತಿಷ್ಠೆ ಮಾಡಿದ್ದು, ಇಡೀ ವಿಶ್ವದ ಹಿಂದೂಗಳ ಪಾಲಿಗೆ ಅತ್ಯಂತ ಸಂಭ್ರಮದ ವಿಷಯವಾಗಿದೆ. ಇದನ್ನು ಕಂಡು ವೀರಪ್ಪ ಮೊಯಿಲಿಯವರು ಪ್ರಶಂಸೆ ಮಾಡಬೇಕಿತ್ತು ಎಂದರು.

ಸನಾತನ ಹಿಂದೂ ಧರ್ಮದಲ್ಲಿ ಭಗವಂತನನ್ನು ಅಪ್ಪಿಕೊಳ್ಳಲು, ಅಪ್ಪಿಕೊಳ್ಳಲು, ಆರಾಧಿಸಲು ಅವಕಾಶ ಆಗಿದೆ. ಆದರೆ, ವೀರಪ್ಪ ಮೊಯಿಲಿ ಅವರ ಹತಾಶೆಯ ಈ ಹೇಳಿಕೆಯ ಮೂಲಕ ಅವರ ಘನತೆಯನ್ನು ತಗ್ಗಿಸಿಕೊಂಡಿದ್ದಾರೆ ಅವರ ಸಂಸ್ಕಾರದಲ್ಲಿ ಕಪ್ಪುಚುಕ್ಕಿಯನ್ನು ಅವರೇ ಬಳಿದುಕೊಂಡಿದ್ದಾರೆ ಎಂದು ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+