ಲೋಕಸಭಾ ಟಿಕೆಟ್ ಗಾಗಿ ಕೈ ಪಾಳಯದಲ್ಲಿ ಪೈಪೋಟಿ; ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕಣಕ್ಕಿಳಿಯಲು ಮಾಜಿ ಸಿಎಂ ಪ್ಲಾನ್!
ಚಿಕ್ಕಬಳ್ಳಾಪುರ,ಸೆಪ್ಟೆಂಬರ್ 05: ರಾಜ್ಯ ಕಾಂಗ್ರೆಸ್ 2024 ರ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ಮೂಲಕ ರಾಜ್ಯ ಬಿಜೆಪಿಗೆ ಠಕ್ಕರ್ ಕೊಡಲು ಭರ್ಜರಿ ಪ್ಲಾನ್ ನಡೆಸುತ್ತಿದ್ದು, ಈ ಬಾರೀ ಅಳೆದು ತೂಗಿ ಟಿಕೆಟ್ ನೀಡಲು ಕೈ ಪಡೆ ಚಿಂತನೆ ನಡೆಸಿದೆ.
ಹೌದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಗಾಗಿ ಕಾಂಗ್ರೆಸ್ ಪಾಳಯದಲ್ಲಿ ಆಕಾಂಕ್ಷಿಗಳು ಹೆಚ್ಚಾಗುತ್ತಿದ್ದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿಈಗಾಗಲೇ ಕೆಲ ಅಭ್ಯರ್ಥಿಗಳು ಚುನಾವಣಾ ತಯಾರಿ ನಡೆಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸದ್ಯ ಬಿಜೆಪಿಯ ವಶದಲ್ಲಿದ್ದು, ಈ ಬಾರೀಯ ಲೋಕಸಭಾ ಚುನಾವಣೆಯಲ್ಲಿ ಶತಾಯುಗತಾಯ ಈ ಕ್ಷೇತ್ರವನ್ನ ಕೈ ವಶ ಮಾಡಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯ್ಲಿ ಸಿದ್ದತೆ ಮಾಡಿಕೊಂಡಿದ್ದಾರೆ.

2009, 2014 ರಲ್ಲಿ ಗೆಲುವು ಸಾಧಿಸಿದ್ದ ಮಾಜಿ ಸಂಸದ ಎಂ.ವೀರಪ್ಪ ಮೊಯ್ಲಿಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧಿಸಲು ಭರ್ಜರಿ ತಯಾರಿ ನಡೆಸಿಕೊಂಡಿದ್ದಾರೆ ಎನ್ನಲಾಗಿದೆ. ಈಗಾಗಲೇ ಬಿಜೆಪಿ ತೆಕ್ಕೆಯಲ್ಲಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಈ ಬಾರಿ ಶತಾಯಗತಾಯ ಕೈ ವಶ ಮಾಡಿಕೊಳ್ಳಬೇಕೆನ್ನುವ ತವಕದಲ್ಲಿ ಎಂ ವೀರಪ್ಪ ಮೊಯ್ಲಿ ಇದ್ದಾರೆ ಎಂದು ಹೇಳಲಾಗಿದೆ.
2009, 2014 ರಲ್ಲಿ ಕಾಂಗ್ರೆಸ್ ನಿಂದ ಎಂ ವೀರಪ್ಪ ಮೊಯ್ಲಿ ಗೆಲುವು ಸಾಧಿಸಿದ್ರು. ಆಗ ಬಿಜೆಪಿ ಎರಡನೇ ಹಾಗೂ ಜೆಡಿಎಸ್ ಮೂರನೇ ಸ್ಥಾನ ವನ್ನ ಪಡೆದಿತ್ತು. 2014ರಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸಿದ್ದರು. ಇನ್ನೂ 2019ರಲ್ಲಿ ಬಿಜೆಪಿಯಿಂದ ಬಿ.ಎನ್.ಬಚ್ಚೇಗೌಡ ಗೆಲುವು ಸಾಧಿಸಿದ್ರು. ಆದರೆ, ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿ.ಎನ್.ಬಚ್ಚೇಗೌಡ ಅನುಮಾನವಾಗಿದೆ. ಹೀಗಾಗಿ ಈ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ ಸೋತ ಮಾಜಿ ಸಚಿವ ಡಾ. ಕೆ ಸುಧಾಕರ್ ಸ್ಪರ್ಧೆ ಮಾಡಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ.
ಅಲ್ಲದೇ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಲಿವೆ ಎನ್ನುವ ಮಾತು ಕೇಳಿ ಬಂದಿದ್ದು, ಸದ್ಯ ಮೈತ್ರಿ ಮಾತುಕತೆ ಜೀವಂತವಾಗಿದೆ. ಒಂದು ವೇಳೆ ಕಮಲ-ದಳ ಮೈತ್ರಿಯಾದ್ರೆ ಈ ಕ್ಷೇತ್ರವನ್ನ ಬಿಜೆಪಿಗೆ ಬಿಟ್ಟು ಕೊಡುವ ಸಾಧ್ಯತೆ ಇದ್ದು, ಜೆಡಿಎಸ್ ಹಾಗೂ ಬಿಜೆಪಿಯ ನಡೆ ಸದ್ಯ ಕುತೂಹಲ ಮೂಡಿಸಿದೆ. ಇನ್ನೂ ಕಾಂಗ್ರೆಸ್ ಪಾಳಯದಲ್ಲಿ ಈ ಬಾರೀ ಅಭ್ಯರ್ಥಿಗಳ ಆಯ್ಕೆ ವಿಚಾರ ದೊಡ್ಡ ತಲೆನೋವಾಗಿದ್ದು, ಕಾಂಗ್ರೆಸ್ನಲ್ಲಿ ಅಭ್ಯರ್ಥಿಗಳ ವಿಷಯದಲ್ಲಿ ಕುತೂಹಲ ಸೃಷ್ಟಿಯಾಗಿದೆ. ಮಾಜಿ ಸಿಎಂ ಹಾಗೂ ಮಾಜಿ ಸಂಸದ ವೀರಪ್ಪ ಮೊಯ್ಲಿ ಅವರು ಸದ್ಯ ಕ್ಷೇತ್ರದಲ್ಲಿ ಚುನಾವಣಾ ತಯಾರಿ ನಡೆಸುತ್ತಿದ್ದು, ಚಿಕ್ಕಬಳ್ಳಾಪುರ ಟಿಕೆಟ್ ಗಾಗಿ ನಾನಾ ಅಭ್ಯರ್ಥಿಗಳು ರೇಸ್ ನಲ್ಲಿದ್ದಾರೆ ಎನ್ನಲಾಗಿದೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಾಗೇಪಲ್ಲಿ, ಗೌರಿಬಿದನೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಹೊಸಕೋಟೆ, ದೇವನಹಳ್ಳಿ, ನೆಲಮಂಗಲ ಮತ್ತು ಯಲಹಂಕ ವಿಧಾನಸಭಾ ಕ್ಷೇತ್ರಗಳಿವೆ. ಅಲ್ಲದೇ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲೂ ಈ ಹಿಂದೆ ಕಾಂಗ್ರೆಸ್ ಗಟ್ಟಿಗೊಂಡಿತ್ತು. ಮಾಜಿ ಸಚಿವ ಡಾ.ಕೆ.ಸುಧಾಕರ್ ಕಾಂಗ್ರೆಸ್ನಿಂದ ಬಿಜೆಪಿಗೆ ಬಂದ ಹಿನ್ನೆಲೆ ಕ್ಷೇತ್ರದಲ್ಲಿ ಕಮಲ ಅರಳುವಂತಾಗಿತ್ತು. ಆದರೆ, 2023 ರ ವಿಧಾನಸಭಾ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್ ಗೆಲುವಿನಿಂದಾಗಿ ಮತ್ತೊಮ್ಮೆ ಕಾಂಗ್ರೆಸ್ ಕೈಗೆ ಸಿಕ್ಕಿದೆ.
ಇನ್ನೂ ಉಳಿದ ವಿಧಾನಸಭಾ ಕ್ಷೇತ್ರಗಳಾದ ಗೌರಿಬಿದನೂರು, ಬಾಗೇಪಲ್ಲಿ, ಹೊಸಕೋಟೆ, ದೇವನಹಳ್ಳಿ, ನೆಲಮಂಗಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ನವರೇ ಶಾಸಕರಾಗಿದ್ದಾರೆ. ದೊಡ್ಡಬಳ್ಳಾಪುರ ಮತ್ತು ಯಲಹಂಕ ಮಾತ್ರ ಬಿಜೆಪಿ ಶಾಸಕರು ಗೆಲುವು ಸಾಧಿದ್ದು, ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲೂ ಕಾರ್ಯಕರ್ತರನ್ನು ಗಟ್ಟಿಗೊಳಿಸುವ ಪಯತ್ನವನ್ನ ಕಾಂಗ್ರೆಸ್ ಆರಂಭಿಸಿದೆ ಎಂದು ಹೇಳಲಾಗಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications