ಉಳ್ಳಾಲದಲ್ಲಿ ವೀರರಾಣಿ ಅಬ್ಬಕ್ಕ ಥೀಮ್ ಪಾರ್ಕ್ ಶೀಘ್ರ
ಉಳ್ಳಾಲದಲ್ಲಿ ಅಬ್ಬಕ್ಕ ಭವನ ನಿರ್ಮಾಣಕ್ಕೆ ಜಿಲ್ಲಾಡಳಿತ 10 ಎಕರೆ ಜಾಗವನ್ನು ಮೀಸಲಿಟ್ಟಿದೆ. ಅಬ್ಬಕ್ಕ ಭಾವನ ಮಾತ್ರ ಸಾಕಾಗುವುದಿಲ್ಲ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ನವದೆಹಲಿ, ಫೆಬ್ರವರಿ 6: ಪೋರ್ಚುಗೀಸರ ವಿರುದ್ಧ ಹೋರಾಡಿದ ವೀರರಾಣಿ ಅಬ್ಬಕ್ಕನ ಕುರಿತು ಜಾಗೃತಿ ಮೂಡಿಸಲು ಉಳ್ಳಾಲದಲ್ಲಿ ಥೀಮ್ ಪಾರ್ಕ್ ಸ್ಥಾಪಿಸಬೇಕು ಎಂಬ ಆಗ್ರಹಗಳು ಹೆಚ್ಚಾಗುತ್ತಿದೆ.
ಹೀಗಾಗಿ ಇತ್ತೀಚೆಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಥೀಮ್ ಪಾರ್ಕ್ನ ಅಗತ್ಯತ್ಯೆಯನ್ನು ಪ್ರಸ್ತಾಪಿಸಿದ್ದಾರೆ. ಉಳ್ಳಾಲದ ಮಹಾತ್ಮಗಾಂಧಿ ರಂಗಮಂದಿರದಲ್ಲಿಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಆಯೋಜಿಸಿದ್ದ ವೀರರಾಣಿ ಅಬ್ಬಕ್ಕ ಉತ್ಸವದಲ್ಲಿ ಮಾತನಾಡಿದ ಅವರು, ಅಬ್ಬಕ್ಕ ಭವನ ನಿರ್ಮಾಣಕ್ಕೆ ಜಿಲ್ಲಾಡಳಿತ 10 ಎಕರೆ ಜಾಗವನ್ನು ಮೀಸಲಿಟ್ಟಿದೆ. ಅಬ್ಬಕ್ಕ ಭಾವನ ಮಾತ್ರ ಸಾಕಾಗುವುದಿಲ್ಲ ಎಂದಿದ್ದಾರೆ.
ಉಳ್ಳಾಲಕ್ಕೆ ಆಗಮಿಸುವವರಲ್ಲಿ ಅಬ್ಬಕ್ಕನ ಕುರಿತು ಜಾಗೃತಿ ಮೂಡಿಸಲು ಥೀಮ್ ಪಾರ್ಕ್ ಅಗತ್ಯವಾಗಿದೆ. ಉಳ್ಳಾಲಕ್ಕೆ ಭೇಟಿ ನೀಡುವವರು ಅಬ್ಬಕ್ಕನ ಬಗ್ಗೆ ಸ್ಫೂರ್ತಿದಾಯಕ ಕಥೆಯೊಂದಿಗೆ ತಮ್ಮ ಮನೆಗೆ ಮರಳಬೇಕು. ಈ ಬಗ್ಗೆ ಸರ್ಕಾರಕ್ಕೂ ಪತ್ರ ಬರೆಯುತ್ತೇನೆ ಎಂದು ಹೇಳಿದ್ದಾರೆ. ರಾಣಿ ಅಬ್ಬಕ್ಕ ಉತ್ಸವವನ್ನು ರಾಜ್ಯಮಟ್ಟದ ಉತ್ಸವವನ್ನಾಗಿ ಮಾಡಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಪತ್ರ ಬರೆಯುತ್ತೇನೆ. ರಾಣಿ ಅಬ್ಬಕ್ಕ ಕೇವಲ ಉಳ್ಳಾಲಕ್ಕೆ ಸೀಮಿತವಾದ ಮಹಿಳಾ ರಾಣಿ ಅಲ್ಲ. ಆಕೆ ಇಡೀ ದೇಶಕ್ಕೆ ಸ್ಪೂರ್ತಿ. ಆದಾಗ್ಯೂ, ಪೋರ್ಚುಗೀಸರ ವಿರುದ್ಧ ರಾಣಿ ಅಬ್ಬಕ್ಕ ನಡೆಸಿದ ಕೆಚ್ಚೆದೆಯ ಹೋರಾಟದ ಬಗ್ಗೆ ಅನೇಕ ಮಕ್ಕಳಿಗೆ ತಿಳಿದಿಲ್ಲ ಎಂದು ಅವರು ಹೇಳಿದರು.

'ಅಬ್ಬಕ್ಕ ಭವನಕ್ಕೆ 5 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಭವನಕ್ಕೆ ಆಂಪಿಥಿಯೇಟರ್ ಕೂಡ ಇರಬೇಕು. ಮಂಗಳೂರು ವಿಮಾನ ನಿಲ್ದಾಣಕ್ಕೆ ವೀರರಾಣಿ ಅಬ್ಬಕ್ಕನ ಹೆಸರಿಡುವಂತೆ ಪ್ರಧಾನಿ ನರೇಂದ್ರ ಮೋದಿ, ನಾಗರಿಕ ವಿಮಾನಯಾನ ಸಚಿವರು, ಡಿಜಿಸಿಎ ಅವರಿಗೆ ಪತ್ರ ಬರೆಯುವುದಾಗಿ ಕರಂದ್ಲಾಜೆ ಹೇಳಿದ್ದಾರೆ.
ಕಿತ್ತೂರು ರಾಣಿ ಚೆನ್ನಮ್ಮ, ಒನಕೆ ಓಬವ್ವ, ವೀರ ರಾಣಿ ಅಬ್ಬಕ್ಕ ಮುಂತಾದ ಸ್ವಾತಂತ್ರ್ಯ ಹೋರಾಟಗಾರರು ಮಹಿಳೆಯರಿಗೆ ಮಾರ್ಗದರ್ಶಕ ಶಕ್ತಿಯಾಗಿದ್ದಾರೆ. ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಬಗ್ಗೆ ಪಠ್ಯಪುಸ್ತಕಗಳು ಕಡಿಮೆ ಸತ್ಯಗಳನ್ನು ಹೇಳುತ್ತವೆ. ರಾಣಿ ಅಬ್ಬಕ್ಕನ ಇತಿಹಾಸವನ್ನು ಶಾಲೆಗಳಲ್ಲಿ ಮಕ್ಕಳಿಗೆ ಕಲಿಸಬೇಕಾಗಿದೆ. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಸಮಾಜದಲ್ಲಿ ಜಾತಿ, ಧರ್ಮಗಳ ಆಧಾರದಲ್ಲಿ ಬಿರುಕು ಇರಲಿಲ್ಲ. ಸ್ವಾತಂತ್ರ್ಯದ ನಂತರವೇ ದೇಶವು ಕೋಮು ವಿಭಜನೆಗೆ ಸಾಕ್ಷಿಯಾಗಲು ಪ್ರಾರಂಭಿಸಿತು ಎಂದು ಕರಂದ್ಲಾಜೆ ಹೇಳಿದರು.











Click it and Unblock the Notifications