Get Updates
Get notified of breaking news, exclusive insights, and must-see stories!

ದೆಹಲಿಯಲ್ಲಿ ಅಂಗಡಿ ಸಮಾಧಿ, ರುದ್ರಭೂಮಿಗೆ ತಡೆಗೋಡೆ ನಿರ್ಮಿಸಿ

ಬೆಂಗಳೂರು ಸೆಪ್ಟೆಂಬರ್‌ 30: ಇತ್ತೀಚೆಗೆ ನಿಧನರಾದ ಕೇಂದ್ರ ರಾಜ್ಯ ಖಾತೆ ರೈಲ್ವೆ ಸಚಿವರಾಗಿದ್ದ ದಿವಂಗತ ಸುರೇಶ್‌ ಅಂಗಡಿ ಅವರ ಅಂತ್ಯಕ್ರಿಯೆಯನ್ನು ದೆಹಲಿಯಲ್ಲಿ ನಡೆಸಲಾಯಿತು. ದೆಹಲಿಯ ವೀರಶೈವ ಲಿಂಗಾಯತ ರುದ್ರಭೂಮಿಗೆ ತಡೆಗೋಡೆ ಹಾಗೂ ಸಮಾಧಿ ನಿರ್ಮಾಣದ ವಿಷಯವಾಗಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪನವರಿಗೆ ಇಂದು‌ ದಿವಂಗತ ಸುರೇಶ್‌ ಅಂಗಡಿ ಅವರ ಅಳಿಯಂದಿರಾದ ಸಂಕಲ್ಪ ಶೆಟ್ಟರ್‌ ಹಾಗೂ ಡಾ ರಾಹುಲ್‌ ಪಾಟೀಲ್‌ ಮನವಿಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮಧ್ಯಮ ಮತ್ತು ಬೃಹತ್‌ ಕೈಗಾರಿಕಾ ಸಚಿವರಾದ ಜಗದೀಶ್‌ ಶೆಟ್ಟರ್‌ ಉಪಸ್ಥಿತರಿದ್ದರು.

ಕೊರೊನಾ ರೋಗಕ್ಕೆ ತುತ್ತಾಗಿ ಸೆಪ್ಟೆಂಬರ್‌ 23 ರಂದು ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಕೇಂದ್ರ ಸಚಿವ ಸುರೇಶ್‌ ಅಂಗಡಿ ಅವರು ನಿಧನರಾಗಿದ್ದರು. ಕರೋನಾ ಹಿನ್ನಲೆಯಲ್ಲಿ ಅವರ ಪಾರ್ಥಿವ ಶರೀರವನ್ನು ದೆಹಲಿಯ ದ್ವಾರಕಾದಲ್ಲಿರುವ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆಯನ್ನು ನಡೆಸಲಾಗಿತ್ತು.

Veerashaiva Lingayat Burial Ground In Delhi Need Barrier Compound Wall

ಈ ಸ್ಥಳದಲ್ಲಿ ದಿವಂಗತರ ಘನತೆಗೆ ತಕ್ಕುದಾದಂತಹ ಸಮಾಧಿಯನ್ನು ನಿರ್ಮಿಸುವ ಮೂಲಕ ಗೌರವ ಸಲ್ಲಿಸಬೇಕಾಗಿದೆ. ಈ ಹಿನ್ನಲೆಯಲ್ಲಿ ದೆಹಲಿಯ ದ್ವಾರಕದಲ್ಲಿರುವ ವೀರಶೈವ ಲಿಂಗಾಯತ ರುದ್ರಭೂಮಿಗೆ ಕಾಂಪೋಂಡ್‌ ಹಾಗೂ ಸಮಾಧಿಯನ್ನು ನಿರ್ಮಿಸಲು ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಮನವಿಯನ್ನು ಸಲ್ಲಿಸಲಾಯಿತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+