ಬಸ್ ಪ್ರಯಾಣಿಕರೇ ಗಮನಿಸಿ: ವಿಶೇಷ ಬಸ್ಗಳ ಓಡಾಟದ ಮಾಹಿತಿ ಇಲ್ಲಿದೆ!
ಬಸವ ಜಯಂತಿ ಹಿನ್ನೆಲೆ & ರಜೆ, ಮದುವೆ, ಮತ್ತಿತರ ಶುಭ ಕಾರ್ಯಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಮೇ 10 ರಿಂದ 12 ರವರೆಗೆ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ವಿಶೇಷ ಬಸ್ ವ್ಯವಸ್ಥೆ ಕುರಿತು ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಮಾಹಿತಿ ನೀಡಿದ್ದಾರೆ. ಹಾಗಾದರೆ ಯಾವ ಯಾವ ಜಿಲ್ಲೆಗಳಿಗೆ ಈ ಸ್ಪೆಷಲ್ ಬಸ್ ಓಡಾಡಲಿವೆ ಗೊತ್ತಾ? ಮುಂದೆ ಓದಿ.
ಮೇ 10 ರಂದು ಶುಕ್ರವಾರ ಬಸವ ಜಯಂತಿ & ಅಕ್ಷಯ ತೃತೀಯ, 11 ರಂದು ಎರಡನೇ ಶನಿವಾರ ಹಾಗೂ 12 ರಂದು ರವಿವಾರ ಸಾರ್ವಜನಿಕ ರಜೆ ಇರುತ್ತದೆ.ಈ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮದುವೆ ಸೇರಿ ಗೃಹ ಪ್ರವೇಶ ಮತ್ತಿತರ ಶುಭಕಾರ್ಯಗಳು ನಡೆಯಲಿವೆ. ಈ ಕಾರಣಕ್ಕಾಗಿ, ಇದೇ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರ ಓಡಾಟ ನಿರೀಕ್ಷಿಸಲಾಗಿದೆ. ಹೀಗೆ ಪ್ರಯಾಣಿಕರ ಅನುಕೂಲಕ್ಕೆ ಮೇ10ರಿಂದ 12ರವರೆಗೆ ಜಿಲ್ಲೆಯೊಳಗೆ ವಿವಿಧ ಸ್ಥಳಗಳು & ಅಕ್ಕಪಕ್ಕದ ಜಿಲ್ಲೆಗಳ ನಡುವೆಯೂ ಪ್ರಯಾಣಿಕರ ಹೆಚ್ಚಳಕ್ಕೆ ತಕ್ಕಂತೆ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಹೊರ ರಾಜ್ಯಗಳಿಗೂ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ಬೆಂಗಳೂರು, ಪುಣೆ, ಗೋವಾ...
ಅದೇ ರೀತಿ ರಜೆ ಮುಗಿಸಿಕೊಂಡು ತಮ್ಮ ಕಾರ್ಯ ಕ್ಷೇತ್ರಗಳಿಗೆ ಹಿಂದಿರುಗುವವರ ಅನುಕೂಲಕ್ಕಾಗಿ, ಮೇ 12 ರಂದು ಭಾನುವಾರ ಹುಬ್ಬಳ್ಳಿಯಿಂದ ಬೆಂಗಳೂರು, ಪುಣೆ, ಗೋವಾ, ಮಂಗಳೂರು, ವಿಜಯಪುರ, ಬಾಗಲಕೋಟೆ ಮತ್ತಿತರ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ವಿಶೇಷ ಬಸ್ಸುಗಳನ್ನು ಓಡಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ ಅಧಿಕಾರಿಗಳು. ಹಾಗೇ ಇದರ ಜೊತೆಗೆ ಮುಂಗಡ ಬುಕಿಂಗ್ ಮಾಡಲು ರಿಯಾಯಿತಿ ಘೋಷಣೆ ಮಾಡಲಾಗಿದೆ.
ಸಾರಿಗೆ ವೆಬ್ಸೈಟ್ ವಿಳಾಸ
https://www.ksrtc.in ಅಥವಾ KSRTC Mobile App & ಬಸ್ ನಿಲ್ದಾಣಗಳಲ್ಲಿ ಮುಂಗಡ ಬುಕ್ಕಿಂಗ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ಒಂದೇ ಟಿಕೆಟ್ ಅಡಿಯಲ್ಲಿ 4 ಅಥವಾ ಹೆಚ್ಚಿನ ಸೀಟು ಕಾಯ್ದಿರಿಸಿದ್ರೆ ಪ್ರಯಾಣ ದರದಲ್ಲಿ ಶೇಕಡಾ 5 ರಷ್ಟು ರಿಯಾಯಿತಿ ನೀಡಲಾಗುತ್ತಿದ್ದು. ಹೋಗುವ ಮತ್ತು ಹಿಂದಿರುಗುವ ಪ್ರಯಾಣಕ್ಕೆ ಒಂದೇ ಟಿಕೆಟ್ ಪಡೆದರೆ ಹಿಂದಿರುಗುವ ಪ್ರಯಾಣ ದರದಲ್ಲಿ ಶೇಕಡಾ 10 ರಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ಮಾಹಿತಿ ನೀಡಲಾಗಿದೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್












Click it and Unblock the Notifications