ಶತಕದತ್ತ ಟೊಮೆಟೊ ಬೆಲೆ; ಭಾರಿ ಮಳೆಯಿಂದ ಹೆಚ್ಚುತ್ತಲೇ ಇದೆ ತರಕಾರಿ ಬೆಲೆ
ಈಗಾಗಲೇ ಪೆಟ್ರೋಲ್, ಡೀಸೆಲ್ ಅಂತಹ ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನತೆಗೆ ತರಕಾರಿ ಬೆಲೆ ಏರಿಕೆ ಹೊಸ ತಲೆನೋವಾಗಿದೆ. ಕಳೆದ ಕೆಲವು ದಿನಗಳಿಂದ ತರಕಾರಿಬೆಲೆ ಗಗನಕ್ಕೇರುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಸೂಚನೆ ಸಿಕ್ಕಿದೆ.
ಹದಿನೈದು ದಿನಗಳ ಹಿಂದೆ 50-60 ರೂಪಾಯಿ ಇದ್ದ ಟೊಮೆಟೊ ಬೆಲೆ, ಸದ್ಯ 80-90 ರೂಪಾಯಿಗೆ ಏರಿಕೆಯಾಗಿದೆ. ಕಳೆದ ತಿಂಗಳು 30 ರೂಪಾಯಿ ಇದ್ದ ಬೆಂಡೆಕಾಯಿ ಬೆಲೆ ಈಗ 80 ರುಪಾಯಿ ಆಗಿದೆ. ಸೋರೆಕಾಯಿ ಮತ್ತು ಕುಂಬಳಕಾಯಿ ಬೆಲೆ ಕೂಡ 60-80 ರೂಪಾಯಿ ಆಗಿದೆ. ಹೂಕೋಸು, ಕ್ಯಾಪ್ಸಿಕಂ, ಅವರೆಕಾಯಿ, ಸೌತೆಕಾಯಿ ಬೆಲೆ ಕೂಡ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ.

ಭಾರಿ ಮಳೆಯಿಂದಾಗಿ ತರಾಕರಿ ಪೂರೈಕೆಯಲ್ಲಿ ವ್ಯತ್ಯಯವಾಗಿರುವ ಕಾರಣ ಕೆಲವು ರಾಜ್ಯಗಳಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ. ಒಂದೇ ವಾರದಲ್ಲಿ ಮೂರು ನಾಲ್ಕು ಪಟ್ಟು ಹೆಚ್ಚಾಗಿದೆ.
ಮಳೆ ಕಡಿಮೆಯಾಗುವವರೆಗೆ ತರಕಾರಿ ಬೆಲೆ ಇದೇ ರೀತಿ ಇರಲಿದೆ ಎಂದು ಹೇಳಲಾಗಿದೆ. ಮಳೆ ಹೆಚ್ಚಾದರೆ ಬೆಳೆ ಕೂಡ ನಷ್ಟವಾಗಲಿದ್ದು, ಬೆಲೆ ಮತ್ತಷ್ಟು ಹೆಚ್ಚುವ ಆತಂಕ ಕೂಡ ಇದೆ.
ಬೆಲೆ ಏರಿಕೆಗೆ ಕಾರಣಗಳು
ಮುರಾದಾಬಾದ್ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಟೊಮೆಟೊ ಬೆಳೆಗಳು ಹಾನಿಗೊಳಗಾಗಿರುವುದು ಟೊಮೆಟೊ ಬೆಲೆ ಏರಿಕೆಗೆ ಪ್ರಮುಖ ಕಾರಣ ಎಂದು ರೈತರು ಹೇಳಿದ್ದಾರೆ.
ಇದು ಟೊಮೆಟೊ ಕೃಷಿಗೆ ಹೆಸರುವಾಸಿಯಾಗಿದೆ, ಇಲ್ಲಿಂದ ಟೊಮೆಟೊಗಳು ಉತ್ತರ ಪ್ರದೇಶ, ಉತ್ತರಾಖಂಡ, ದೆಹಲಿ ಎನ್ಸಿಆರ್ ಮತ್ತು ಹರಿಯಾಣವನ್ನು ತಲುಪುತ್ತವೆ. ಆದರೆ, ಇತ್ತೀಚೆಗೆ ಮುರಾದಾಬಾದ್ನಲ್ಲಿ ಸುರಿದ ಭಾರಿ ಮಳೆಗೆ ಜಮೀನಿನಲ್ಲಿದ್ದ ಟೊಮೇಟೊ ನಾಶವಾಗಿದೆ.
ಭಾರಿ ಮಳೆಯಿಂದಾಗಿ ಟೊಮೆಟೋ ಬೆಳೆಗಳು ಜಲಾವೃತವಾಗಿದ್ದು, ಟೊಮೆಟೊ ಗಿಡಗಳಲ್ಲೇ ಕೊಳೆಯುತ್ತಿದ್ದು, ಇದರಿಂದ ರೈತರು ತಮ್ಮ ಟೊಮೇಟೊ ಬೆಳೆಗಳನ್ನು ಕಿತ್ತು ಇತರೆ ಬೆಳೆ ಬೆಳೆಯಲು ಮುಂದಾಗಿದ್ದಾರೆ.
ರಾಜ್ಯದಲ್ಲೂ ಬೆಲೆ ಏರಿಕೆ ಬಿಸಿ
ಕರ್ನಾಟಕದಲ್ಲಿ ಕೂಡ ಹಲವು ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು ತರಕಾರಿ ಬೆಲೆ ಹೆಚ್ಚಳವಾಗುವ ಆತಂಕ ಶುರುವಾಗಿದೆ. ಹಲವು ತಿಂಗಳಿನಿಂದ ಬೀನ್ಸ್ ಬೆಲೆ 100 ರೂಪಾಯಿ ಆಸುಪಾಸಿನಲ್ಲೇ ಇದೆ.
ಟೊಮೆಟೊ ಬೆಲೆ ಸದ್ಯ 50-60 ರೂಪಾಯಿ ಇದ್ದು, ವಿವಿಧ ತರಕಾರಿಗಳು 50-60 ರೂಪಾಯಿ ಆಸುಪಾಸಿನಲ್ಲಿ ಮಾರಾಟವಾಗುತ್ತಿವೆ. ಈರುಳ್ಳಿ ಬೆಲೆ ಈಗಾಗಲೇ 40-50 ರೂಪಾಯಿ ಇದ್ದು, ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ.
-
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್











Click it and Unblock the Notifications