ಪಾರ್ಕಿಂಗ್ ಶುಲ್ಕ ಜಾರಿಗೆ ಧೈರ್ಯತೋರದ ಮೇಯರ್ ಕಟ್ಟೆ
ಬೆಂಗಳೂರು, ಸೆಪ್ಟೆಂಬರ್ 24: ರಾಜಧಾನಿಯಲ್ಲಿ ವಾಹನಗಳ ಮೇಲೆ ಪಾರ್ಕಿಂಗ್ ಶುಲ್ಕ ವಿಧಿಸುವ ನಿರ್ಧಾರದಿಂದ ನೂತನ ಮೇಯರ್ ಕಟ್ಟೆ ಸತ್ಯನಾರಾಯಣ ಅವರು ಹಿಂಜರಿದಿದ್ದು, 2014ರ ನಂತರ ಬೇಕಾದರೆ ಅದು ಜಾರಿಯಾಗಲಿ ಎಂದು ಹೇಳಿದ್ದಾರೆ. ಇದರಿಂದ ಸದ್ಯಕ್ಕಂತೂ ವಾಹನ ಸವಾರರು ನಿರಾಳವಾಗಬಹುದು.
ಸದ್ಯದಲ್ಲೇ ದುಬಾರಿ ಪೇ ಅಂಡ್ ಪಾರ್ಕ್ ಯೋಜನೆ ಜಾರಿಗೆ ತರಲು ಬಿಬಿಎಂಪಿ ಜಾರಿಗೆ ತರಲು ಉದ್ದೇಶಿಸಿತ್ತು. ಆದರೆ ತಮ್ಮ ಕಾಲಾವಧಿಯಲ್ಲಿ ಪಾರ್ಕಿಂಗ್ ಶುಲ್ಕ ವಿಧಿಸುವುದಿಲ್ಲ ಎಂದು ಮೇಯರ್ ಸತ್ಯನಾರಾಯಣ ಅವರು ಸ್ಪಷ್ಟಪಡಿಸಿದ್ದಾರೆ.
ಮೂಲಗಳ ಪ್ರಕಾರ ಬಿಬಿಎಂಪಿ ದುಬಾರಿ ಪಾರ್ಕಿಂಗ್ ಶುಲ್ಕ ವಿಧಿಸಿದರೆ ಸಾರ್ವಜನಿಕರಿಂದ ತೀವ್ರ ವಿರೋಧ ಎದುರಿಸಬೇಕಾಗುತ್ತದೆ. ಇದು ಮುಂಬರುವ ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹಾಗಾಗಿ ಸದ್ಯಕ್ಕೆ ದುಬಾರಿ ಶುಲ್ಕ ವಿಧಿಸುವುದು ಬೇಡ ಎಂದು ಬಿಜೆಪಿಯ ಮುಖಂಡರೇ ಸಲಹೆ ನೀಡಿದ್ದಾರೆ. ಹಾಗಾಗಿ ಮೇಯರ್ ಕಟ್ಟೆ ಪಾರ್ಕಿಂಗ್ ಶುಲ್ಕದಿಂದ ವಿಮುಖರಾಗಿದ್ದಾರೆ ಎನ್ನಲಾಗಿದೆ.

ನಗರದಲ್ಲಿ A, B ಮತ್ತು C ಎಂದು ಮೂರು ವರ್ಗ ಮಾಡಿ ದುಬಾರಿ ಪಾರ್ಕಿಂಗ್ ಶುಲ್ಕ ವಿಧಿಸಲು ಬಿಬಿಎಂಪಿಗೆ ಸರ್ಕಾರ ಸೂಚನೆ ನೀಡಿತ್ತು. ಸರ್ಕಾರದ ಆದೇಶವನ್ನು ಪಾಲಿಕೆ ಸಭೆಯಲ್ಲಿ ದಾಖಲಿಸಿ ಅನುಮೋದನೆಯನ್ನು ಸಹ ಪಡೆಯಲಾಗಿತ್ತು. ಈ ಯೋಜನೆ ಯಾವುದೇ ಕ್ಷಣದಲ್ಲಿ ಜಾರಿಯಾಗಬಹುದು ಎಂಬ ಭೀತಿಯೂ ನಾಗರಿಕರನ್ನು ಕಾಡುತ್ತಿತ್ತು.
ಸಂಘ-ಸಂಸ್ಥೆಗಳು, ವಾಹನ ಸವಾರರ ಒಕ್ಕೂಟಗಳು ದುಬಾರಿ ಪಾರ್ಕಿಂಗ್ ಶುಲ್ಕ ನೀತಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಹಾಗಾಗಿ ಸದ್ಯಕ್ಕೆ ದುಬಾರಿ ಪಾರ್ಕಿಂಗ್ ಶುಲ್ಕ ಜಾರಿಯಾಗುತ್ತಿಲ್ಲ. ಮೇಯರ್ ಕಟ್ಟೆ ಸತ್ಯನಾರಾಯಣ ಈ ಬಗ್ಗೆ ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿ, ಸರ್ಕಾರ ಸೂಚಿಸಿದ್ದನ್ನು ನಾವು ಅನುಮೋದನೆ ಮಾಡಿದ್ದೆವು.
ಇದರ ಬಗ್ಗೆ ಚರ್ಚಿಸಿ, ನಿರ್ಣಯಿಸಲು 90 ದಿನಗಳು ಕಾಲಾವಧಿಯಿರುತ್ತದೆ.
ನಂತರ ಪಾಲಿಕೆಯಲ್ಲಿ ಚರ್ಚಿಸಿ ಸಂಘ-ಸಂಸ್ಥೆಗಳು, ಸಾರ್ವಜನಿಕರು, ಪರಿಣಿತರೊಂದಿಗೆ ಮಾತುಕತೆ ನಡೆಸುತ್ತೇವೆ. ದುಬಾರಿ ಶುಲ್ಕ ಕಡಿಮೆಗೊಳಿಸುವಂತೆ ಒಮ್ಮತದ ಅಭಿಪ್ರಾಯ ಬಂದರೆ ಅದರಂತೆ ಹೊಸ ಪಾರ್ಕಿಂಗ್ ನೀತಿ ತರಲಾಗುವುದು. ಸದ್ಯಕ್ಕಂತೂ ಯಾರೂ ದುಬಾರಿ ಪಾರ್ಕಿಂಗ್ ಶುಲ್ಕದ ಬಗ್ಗೆ ಆತಂಕ ಪಡುವುದು ಬೇಡ, ನಿರಾತಂಕವಾಗಿರಿ ಎಂದು ಅಭಯ ನೀಡಿದ್ದಾರೆ.
ಈಗಾಗಲೇ ನಗರದ ಖಾಸಗಿ ಕಟ್ಟಡಗಳು, ಸಂಕೀರ್ಣಗಳಲ್ಲಿ ದುಬಾರಿ ವಾಹನ ಶುಲ್ಕ ವಸೂಲಿ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ನಮಗಾಗಲೀ ಅಥವಾ ಪೊಲೀಸರಿಗೆ ಯಾರೂ ದೂರು ನೀಡುವುದಿಲ್ಲ. ಆದರೆ ಪಾಲಿಕೆ ಶುಲ್ಕ ವಿಧಿಸ ಹೊರಟರೆ ವಿರೋಧ ವ್ಯಕ್ತವಾಗುತ್ತದೆ ಎಂದು ಹೇಳಿದರು. ಒಟ್ಟಾರೆ 90 ದಿನಗಳ ನಂತರ ಚರ್ಚೆ ಮಾಡಿಯೇ ನಾವು ಶುಲ್ಕ ವಿಧಿಸುವ ಕುರಿತು ನಿರ್ಧರಿಸುತ್ತೇವೆ ಎಂದು ತಿಳಿಸಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications