Traffic Advisory: ಬೆಂಗಳೂರಿನ ಈ ರಸ್ತೆಯಲ್ಲಿ ಒಂದು ತಿಂಗಳು ವಾಹನ ಸಂಚಾರ ಬಂದ್: ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು, ಸೆಪ್ಟೆಂಬರ್ 27: ಬೃಹತ್ ಬೆಂಗಳೂರು ಮಹಾನಗರ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು 110 ಹಳ್ಳಿಗಳಿಗೆ ಕುಡಿಯುವ ನೀರು ತಲುಪಿಸಲು ಬಿಡಬ್ಲ್ಯೂಎಸ್ಎಸ್ಬಿ ವತಿಯಿಂದ 1900 ಎಂ.ಎಂ ಡಯಾ ಪೈಪ್ ಲೈನ್ಗಳನ್ನು ಅಳವಡಿಸುವ ಕಾಮಗಾರಿ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಈ ರಸ್ತೆಯಲ್ಲಿ ಸಂಪೂರ್ಣವಾಗಿ ವಾಹಸ ಸಂಚಾರವನ್ನ ನಿರ್ಬಂಧಿಸಲಾಗಿದೆ.
ಕೆಲ ದಿನಗಳ ಹಿಂದೆಯಷ್ಟೇ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ನಗರ ಪ್ರದಕ್ಷಣೆಯನ್ನ ನಡೆಸಿದ್ದು, ಕಾಮಗಾರಿಗಳು ಬೇಗ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆಯನ್ನ ನೀಡಿದ್ದರು. 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಕಾವೇರಿ ಐದನೇ ಹಂತದ ಯೋಜನೆಯ ಕಾಮಗಾರಿ ನಡೆಯುತ್ತಿದೆ.

ಬೃಹತ್ ಬೆಂಗಳೂರು ಮಹಾನಗರ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ತಲುಪಿಸಲು ಉತ್ತರಹಳ್ಳಿ ರಸ್ತೆಯಲ್ಲಿ ಬಿಡಬ್ಲ್ಯೂಎಸ್ಎಸ್ಬಿ ವತಿಯಿಂದ 1900 ಎಂ.ಎಂ ಡಯಾ ಪೈಪ್ ಲೈನ್ಗಳನ್ನು ಅಳವಡಿಸುವ ಕಾಮಗಾರಿ ನಡೆಯುತ್ತಿದೆ. ಕಾಮಗಾರಿಯಿಂದ ಉತ್ತರಹಳ್ಳಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಹೀಗಾಗಿ ಸುಗಮ ಸಂಚಾರ ದೃಷ್ಟಿಯಿಂದ "ಬಿಜಿಎಸ್ ಜಂಕ್ಷನ್ ಕಡೆಯಿಂದ ಮಧು ಪೆಟ್ರೋಲ್ ಬಂಕ್ ಜಂಕ್ಷನ್ (ಪೂರ್ವದಿಂದ ಪಶ್ಚಿಮಕ್ಕೆ)" ವರೆಗಿನ ರಸ್ತೆಯಲ್ಲಿ ಇಂದಿನಿಂದ (ಸೆಪ್ಟೆಂಬರ್ 27) ಒಂದು ತಿಂಗಳ ಕಾಲ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ಮಾದ್ಯಮ ಪ್ರಕಟಣೆ ಹೊರಡಿಸಿದ್ದಾರೆ.
"ಸಂಚಾರ ಸಲಹೆ/Traffic advisory" pic.twitter.com/0SbMrGdylv
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) September 26, 2024
ಪರ್ಯಾಯ ಮಾರ್ಗಗಳು
* ಬಿಜಿಎಸ್ ಜಂಕ್ಷನ್ ಕಡೆಯಿಂದ ಮಧು ಪೆಟ್ರೋಲ್ ಬಂಕ್ ಜಂಕ್ಷನ್ (ಮೈಸೂರು ರಸ್ತೆ) ಕಡೆಗೆ ಸಂಚರಿಸುವ ವಾಹನಗಳು ಬಿಜಿಎಸ್ ಆಸ್ಪತ್ರೆ ಜಂಕ್ಷನ್ನಲ್ಲಿ ಬಲ ತಿರುವು ಪಡೆದು ಮೂಕಾಂಬಿಕ ಸರ್ಕಲ್, ವೃಷಭಾವತಿ ಮೋರಿ ಬ್ರಿಡ್ಜ್ ಮೂಲಕ ಮೈಸೂರು ರಸ್ತೆಗೆ ಪ್ರವೇಶಿಸಬಹುದು.
* ಮೈಸೂರು ರಸ್ತೆಯಿಂದ ಉತ್ತರಹಳ್ಳಿಗೆ ಹೋಗುವ ವಾಹನಗಳು ಮೈಲಸಂದ್ರ ವಿಲೇಜ್ ಜಂಕ್ಷನ್ನಲ್ಲಿ ಬಲ ತಿರುವು ಪಡೆದು ವಿಲೇಜ್ ಬ್ಯಾಕ್ ಗೇಟ್ ರಸ್ತೆ ಹಾಗೂ ಬಿಜಿಎಸ್ ಜಂಕ್ಷನ್ ಮೂಲಕ ಉತ್ತರಹಳ್ಳಿಗೆ ತಲುಪಬಹುದಾಗಿರುತ್ತದೆ.
* ನಗರದ ಕಡೆಯಿಂದ ಉತ್ತರಹಳ್ಳಿಗೆ ಹೋಗುವ ವಾಹನಗಳು ಮೈಲಸಂದ್ರ ಜಂಕ್ಷನ್ನಲ್ಲಿ ಎಡ ತಿರುವು ಪಡೆದು ಬಿಜಿಎಸ್ ಜಂಕ್ಷನ್ ಮೂಲಕ ಸಾಗಬಹುದು ಎಂದು ಬೆಂಗಳೂರು ಸಂಚಾರಿ ಪೊಲೀಸ್ ತಿಳಿಸಿದೆ.












Click it and Unblock the Notifications