ದೇವನಹಳ್ಳಿಯಲ್ಲಿ ಗ್ರಾಮ ದತ್ತು ಪಡೆದ ವೆಂಕಯ್ಯ ನಾಯ್ಡು
ಬೆಂಗಳೂರು, ಮಾ.6 : ಕೇಂದ್ರ ನಗರಾಭಿವೃದ್ಧಿ ಸಚಿವ ಮತ್ತು ರಾಜ್ಯಸಭಾ ಸದಸ್ಯ ವೆಂಕಯ್ಯ ನಾಯ್ಡು ಅವರು ದೇವನಹಳ್ಳಿ ತಾಲೂಕಿನ ಗ್ರಾಮವೊಂದನ್ನು ದತ್ತು ಪಡೆದಿದ್ದಾರೆ. ಸಚಿವರು ಆಂಧ್ರಪ್ರದೇಶದ ಗ್ರಾಮವನ್ನು ದತ್ತು ಪಡೆಯಲು ನಿರ್ಧರಿಸಿದ್ದು, ವಿರೋಧಕ್ಕೆ ಕಾರಣವಾಗಿತ್ತು.
ಸಂಸದರ ಆದರ್ಶ ಗ್ರಾಮ ಯೋಜನಯಡಿಯಲ್ಲಿ ವೆಂಕಯ್ಯ ನಾಯ್ಡು ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಯಲಿಯೂರು ಗ್ರಾಮವನ್ನು ದತ್ತು ಪಡೆದುಕೊಂಡಿದ್ದಾರೆ. ಶುಕ್ರವಾರ ಯಲಿಯೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಿಗೆ ಖುದ್ದು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.

ಗ್ರಾಮದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಜನಸಾಮಾನ್ಯರೊಂದಿಗೆ ಸಮಸ್ಯೆಗಳ ಕುರಿತು ಸಂವಾದ ನಡೆಸಿದ ಅವರು, ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಂಡು ಗ್ರಾಮಗಳನ್ನು ಅಭಿವೃದ್ಧಿಪಡಿಸುತ್ತೇನೆ ಎಂದು ಹೇಳಿದರು. [ಪ್ರತಿಕ್ರಿಯೆ : ವೆಂಕಯ್ಯ ನಾಯ್ಡು ಕರ್ನಾಟಕಕ್ಕೆ ದ್ರೋಹ ಮಾಡಿಲ್ಲವೇ?]
ಕೊಪ್ಪಳದಲ್ಲಿ ದತ್ತು ಪಡೆಯುತ್ತೇನೆ : ಈ ಬಾರಿ ಯಲಿಯೂರು ಗ್ರಾಮವನ್ನು ದತ್ತು ಪಡೆದಿದ್ದೇನೆ, ಮುಂದಿನ ವರ್ಷ ಉತ್ತರ ಕರ್ನಾಟಕದ ಕೊಪ್ಪಳ ಜಿಲ್ಲೆಯ ಗ್ರಾಮವೊಂದನ್ನು ದತ್ತು ಪಡೆಯುವುದಾಗಿ ವೆಂಕಯ್ಯ ನಾಯ್ಡು ತಿಳಿಸಿದರು. [ಕರ್ನಾಟಕದ ಸಂಸದರು ಆಯ್ಕೆಮಾಡಿಕೊಂಡ ಗ್ರಾಮಗಳು]
ಆಂಧ್ರದಲ್ಲಿ ದತ್ತುಪಡೆಯಲು ಮುಂದಾಗಿದ್ದರು : ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ ವೆಂಕಯ್ಯ ನಾಯ್ಡು ಅವರು ಆಂಧ್ರಪ್ರದೇಶದಲ್ಲಿ ಗ್ರಾಮವೊಂದನ್ನು ದತ್ತು ಪಡೆಯಲು ನಿರ್ಧರಿಸಿದ್ದರು. ಇದಕ್ಕೆ ವಿರೋಧ ವ್ಯಕ್ತವಾಗಿತ್ತು. ಕರ್ನಾಟಕ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ ಸಚಿವರು ಕರ್ನಾಟಕದಲ್ಲೇ ಗ್ರಾಮವನ್ನು ದತ್ತು ಪಡೆಯಲಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದರು. [ಪಿಟಿಐ ಚಿತ್ರ]
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್












Click it and Unblock the Notifications