ದೇವನಹಳ್ಳಿಯಲ್ಲಿ ಗ್ರಾಮ ದತ್ತು ಪಡೆದ ವೆಂಕಯ್ಯ ನಾಯ್ಡು
ಬೆಂಗಳೂರು, ಮಾ.6 : ಕೇಂದ್ರ ನಗರಾಭಿವೃದ್ಧಿ ಸಚಿವ ಮತ್ತು ರಾಜ್ಯಸಭಾ ಸದಸ್ಯ ವೆಂಕಯ್ಯ ನಾಯ್ಡು ಅವರು ದೇವನಹಳ್ಳಿ ತಾಲೂಕಿನ ಗ್ರಾಮವೊಂದನ್ನು ದತ್ತು ಪಡೆದಿದ್ದಾರೆ. ಸಚಿವರು ಆಂಧ್ರಪ್ರದೇಶದ ಗ್ರಾಮವನ್ನು ದತ್ತು ಪಡೆಯಲು ನಿರ್ಧರಿಸಿದ್ದು, ವಿರೋಧಕ್ಕೆ ಕಾರಣವಾಗಿತ್ತು.
ಸಂಸದರ ಆದರ್ಶ ಗ್ರಾಮ ಯೋಜನಯಡಿಯಲ್ಲಿ ವೆಂಕಯ್ಯ ನಾಯ್ಡು ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಯಲಿಯೂರು ಗ್ರಾಮವನ್ನು ದತ್ತು ಪಡೆದುಕೊಂಡಿದ್ದಾರೆ. ಶುಕ್ರವಾರ ಯಲಿಯೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಿಗೆ ಖುದ್ದು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.

ಗ್ರಾಮದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಜನಸಾಮಾನ್ಯರೊಂದಿಗೆ ಸಮಸ್ಯೆಗಳ ಕುರಿತು ಸಂವಾದ ನಡೆಸಿದ ಅವರು, ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಂಡು ಗ್ರಾಮಗಳನ್ನು ಅಭಿವೃದ್ಧಿಪಡಿಸುತ್ತೇನೆ ಎಂದು ಹೇಳಿದರು. [ಪ್ರತಿಕ್ರಿಯೆ : ವೆಂಕಯ್ಯ ನಾಯ್ಡು ಕರ್ನಾಟಕಕ್ಕೆ ದ್ರೋಹ ಮಾಡಿಲ್ಲವೇ?]
ಕೊಪ್ಪಳದಲ್ಲಿ ದತ್ತು ಪಡೆಯುತ್ತೇನೆ : ಈ ಬಾರಿ ಯಲಿಯೂರು ಗ್ರಾಮವನ್ನು ದತ್ತು ಪಡೆದಿದ್ದೇನೆ, ಮುಂದಿನ ವರ್ಷ ಉತ್ತರ ಕರ್ನಾಟಕದ ಕೊಪ್ಪಳ ಜಿಲ್ಲೆಯ ಗ್ರಾಮವೊಂದನ್ನು ದತ್ತು ಪಡೆಯುವುದಾಗಿ ವೆಂಕಯ್ಯ ನಾಯ್ಡು ತಿಳಿಸಿದರು. [ಕರ್ನಾಟಕದ ಸಂಸದರು ಆಯ್ಕೆಮಾಡಿಕೊಂಡ ಗ್ರಾಮಗಳು]
ಆಂಧ್ರದಲ್ಲಿ ದತ್ತುಪಡೆಯಲು ಮುಂದಾಗಿದ್ದರು : ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ ವೆಂಕಯ್ಯ ನಾಯ್ಡು ಅವರು ಆಂಧ್ರಪ್ರದೇಶದಲ್ಲಿ ಗ್ರಾಮವೊಂದನ್ನು ದತ್ತು ಪಡೆಯಲು ನಿರ್ಧರಿಸಿದ್ದರು. ಇದಕ್ಕೆ ವಿರೋಧ ವ್ಯಕ್ತವಾಗಿತ್ತು. ಕರ್ನಾಟಕ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ ಸಚಿವರು ಕರ್ನಾಟಕದಲ್ಲೇ ಗ್ರಾಮವನ್ನು ದತ್ತು ಪಡೆಯಲಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದರು. [ಪಿಟಿಐ ಚಿತ್ರ]
-
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ.












Click it and Unblock the Notifications