ನರಗುಂದ 'ಬಯಲು ಬಹಿರ್ದೆಸೆ ಮುಕ್ತ' ತಾಲೂಕು ಎಂದು ಘೋಷಣೆ
ಗದಗ, ಸೆಪ್ಟೆಂಬರ್ 26 : ಗದಗ ಜಿಲ್ಲೆಯ ನರಗುಂದ 'ಬಯಲು ಬಹಿರ್ದೆಸೆ ಮುಕ್ತ' ತಾಲೂಕು ಎಂದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಘೋಷಣೆ ಮಾಡಿದರು. ನರಗುಂದ 34 ಗ್ರಾಮಗಳನ್ನು ಹೊಂದಿರುವ ತಾಲೂಕಾಗಿದ್ದು, ಗ್ರಾಮದ ಎಲ್ಲಾ ಮನೆಗಳಲ್ಲಿ ಶೌಚಾಲಯ ನಿರ್ಮಿಸಲಾಗಿದೆ.
ಮಂಗಳವಾರ ನರಗುಂದ ತಾಲೂಕಿನ ಕೊಣ್ಣೂರು ಗ್ರಾಮದ ಸಂಯುಕ್ತ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ಸಮಾರಂಭದಲ್ಲಿ ವೆಂಕಯ್ಯ ನಾಯ್ಡು ಪಾಲ್ಗೊಂಡಿದ್ದರು. 'ನರಗುಂದ ತಾಲೂಕು ಬಯಲು ಬಹಿರ್ದೆಸೆ ಮುಕ್ತ ಎಂದು ಘೋಷಿಸಿದ ಅವರು, ದೇಶದ ಇತಿಹಾಸದಲ್ಲಿ ಈ ಗ್ರಾಮದ ಹೆಸರು ಚಿರಸ್ಥಾಯಿಯಾಗಿ ಉಳಿಯಲಿದೆ' ಎಂದರು.

'ತಮ್ಮ ಗ್ರಾಮಗಳ ಅಭಿವೃದ್ಧಿ ಬಗ್ಗೆ ಯುವಜನತೆ ಶದ್ಧೆ ವಹಿಸಬೇಕು ಎಂದು ಕರೆ ನೀಡಿದ ವೆಂಕಯ್ಯ ನಾಯ್ಡು, ಬಯಲು ಬಹಿರ್ದೆಸೆ ಮುಕ್ತ ತಾಲೂಕು ರಚನೆಗೆ ಶ್ರಮಿಸಿದ 13 ಗ್ರಾಮ ಪಂಚಾಯಿತಿಗಳ ಅಧ್ಯಕ್ಷರನ್ನು ಸನ್ಮಾನಿಸಿದರು.
'ಕೊಣ್ಣೂರು ಸ್ಚಚ್ಛ ಭಾರತ ಮಿಷನ್' ಎಂಬ ಕಾರ್ಯಕ್ರಮದಡಿ ನರಗುಂದದಲ್ಲಿ ಶೌಚಾಲಯ ನಿರ್ಮಿಸುವ ಕಾರ್ಯವನ್ನು ಕೈಗೊಳ್ಳಲಾಗಿತ್ತು. ಸುಮಾರು 34 ಗ್ರಾಮಗಳನ್ನು ಹೊಂದಿರುವ ತಾಲೂಕಿನಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದ್ದು, ಜನರು ಗ್ರಾಮ ಪಂಚಾಯಿತಿ ನೆರವಿನಿಂದ ಮನೆಯಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಂಡಿದ್ದಾರೆ.
ಇದೇ ಕಾರ್ಯಕ್ರಮದಲ್ಲಿ ವೆಂಕಯ್ಯ ನಾಯ್ಡು ಅವರು ನರಗುಂದದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೂ ಚಾಲನೆ ನೀಡಿದರು. ತಾಜ್ಯ ಸಂಸ್ಕರಣಾ ಘಟಕ, ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದರು.
ರಾಜ್ಯಪಾಲ ವಜುಭಾಯಿ ವಾಲಾ, ಗ್ರಾಮೀಣಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ್ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications