ಯಾರಿಗೂ ಕೇರ್ ಮಾಡಲ್ಲ! ಸದನದಲ್ಲಿ ಹೆಚ್ಡಿಕೆ-ಸಿದ್ದರಾಮಯ್ಯ ವಾಗ್ವಾದ
ಬೆಂಗಳೂರು, ಜುಲೈ 6: ಗುರುವಾರ ಸದನದಲ್ಲಿ ಹಾಲಿ ಸಿಎಂ ಮತ್ತು ಮಾಜಿ ಸಿಎಂಗಳ ನಡುವೆ ಭಾರಿ ವಾಕ್ಸಮರ ನಡೆಯಿತು. ನಾಗಮಂಗಲ ಕೆಎಸ್ಆರ್ ಟಿಸಿ ಬಸ್ ಚಾಲಕ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ನಡುವೆ ಮಾತಿನ ಚಕಮಕಿ ನಡೆದಿದೆ. ಇಬ್ಬರೂ ನಾಯಕರು ಯಾರಿಗೂ ಕೇರ್ ಮಾಡಲ್ಲ ಎಂದು ವಾಗ್ದಾಳಿ ನಡೆಸಿದರು.
ನಾಗಮಂಗಲ ಬಸ್ ಚಾಲಕನ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಚಲುವರಾಯ ಸ್ವಾಮಿ ಹೆಸರು ಕೇಳಿಬಂದ ಹಿನ್ನಲೆಯಲ್ಲಿ ಅವರನ್ನು ವಜಾ ಮಾಡಬೇಕು ಎಂದು ಎಚ್ಡಿ ಕುಮಾರಸ್ವಾಮಿ ಸದನದಲ್ಲಿ ಒತ್ತಾಯಿಸಿದರು. ಈ ವೇಳೆ ಸಚಿವ ಚಲುವರಾಯಸ್ವಾಮಿ ಹೆಚ್.ಡಿ. ಕುಮಾರಸ್ವಾಮಿ ಆರೋಪಕ್ಕೆ ಉತ್ತರ ಕೊಟ್ಟರು.

ಇದಕ್ಕೂ ನನಗೂ ಸಂಬಂಧವಿಲ್ಲ, ಚಾಲಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಮೈಸೂರು, ಅಥವಾ ಬೆಂಗಳೂರಿನಲ್ಲಿ ಚಿಕಿತ್ಸೆ ಕೊಡಿಸಲು ವ್ಯವಸ್ಥೆ ಮಾಡಲಾಗಿದೆ. ಅವರು ಬೇರೆ ಆಸ್ಪತ್ರೆಗೆ ತೆರಳದಂತೆ ನೀವು ಸೂಚನೆ ನೀಡಿದ್ದೀರಾ ಆತ ಸತ್ತರೆ ರಾಜಕೀಯವಾಗಿ ಬಳಸಿಕೊಳ್ಳುವ ಉದ್ದೇಶ ನಿಮ್ಮದು ಎಂದು ಹೆಚ್ಡಿ ಕುಮಾರಸ್ವಾಮಿ ಅವರ ಆರೋಪಕ್ಕೆ ತಿರುಗೇಟು ನೀಡಿದರು.
ಶೇಕ್ ಹ್ಯಾಂಡ್ ಕೊಟ್ಟ ಸಿಎಂ ವಿರುದ್ಧ ಕೆಂಡಾಮಂಡಲ
ಹೆಚ್ಡಿ ಕುಮಾರಸ್ವಾಮಿ ಆರೋಪಕ್ಕೆ ಉತ್ತರ ಕೊಟ್ಟ ಚಲುವರಾಯ ಸ್ವಾಮಿಗೆ ಸಿದ್ದರಾಮಯ್ಯ ಶೇಕ್ ಹ್ಯಾಂಡ್ ನೀಡುವ ಮೂಲಕ ಅಭಿನಂದಿಸಿದ್ದು ಕುಮಾರಸ್ವಾಮಿಯನ್ನು ಕೆರಳಿಸಿತು. ಬಹಳ ಚೆನ್ನಾಗಿ ಉತ್ತರ ಕೊಟ್ಟಿದ್ದಾರೆ, ಇದಕ್ಕೆ ಶೇಕ್ ಹ್ಯಾಂಡ್ ಬೇರೆ ಎಂದ ಹೆಚ್ಡಿಕೆ ಇದಕ್ಕೆಲ್ಲಾ ನಾನು ಕೇರ್ ಮಾಡಲ್ಲ, ಇದೆಲ್ಲಾ ಬಹಳ ನೋಡ್ಬಿಟ್ಟಿದಿವಿ, ನಾನು ಇದನ್ನೆಲ್ಲಾ ಗಮನಿಸ್ತಾ ಇರ್ತೇವೆ. ಈ ತರ ರಾಜಕಾರಣ ಶಾಶ್ವತವಲ್ಲ ಎಂದು ಹೇಳಿದರು.
ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ರೀ ಕುಮಾರಸ್ವಾಮಿಯವರೇ ನಾವು ನಿಮಗೆ ಹೆದರಿಕೊಳ್ತೀವಾ ಎಂದು ತಿರುಗೇಟು ನೀಡಿದರು. ನೀವು ಕೇರ್ ಮಾಡಿಲ್ಲ ಅಂದ್ರೆ ನಾವು ಕೇರ್ ಮಾಡಲ್ಲ, ನೀವು ಕೇರ್ ಮಾಡಿದ್ರೆ ನಾವು ಕೇರ್ ಮಾಡ್ತೀವಿ. ನಿಮ್ ಕಂಡ್ರೆ ಯಾರೂ ಹೆದರಿಕೊಳ್ಳುವವರಿಲ್ಲ ಎಂದರು.
ಕೆಲಸಕ್ ಬಾರದೇ ಇರೋದೆಲ್ಲಾ ಮಾತಾಡ್ತಾವರೆ, ನೀವು ಕೇರ್ ಮಾಡಲ್ಲ ಅಂದರೆ ನಾನು ಅದರ ಅಪ್ಪನಷ್ಟು ಕೇರ್ ಮಾಡಲ್ಲ ಎಂದು ಸಿದ್ದರಾಮಯ್ಯ ಏರುಧ್ವನಿಯಲ್ಲಿ ಗರಂ ಆಗಿ ಹೇಳಿದರು. ಇದಕ್ಕೆ ಉತ್ತರಿಸಿದ ಹೆಚ್ಡಿಕೆ "ನಾವು ಅದೇ ತರ, ನಾವೇನು ನಿಮ್ಮ ಮುಲಾಜಿನಲ್ಲಿ ಬಂದಿಲ್ಲ, ನಾನು ಕೇರ್ ಮಾಡಲ್ಲ" ಎಂದರು. ಇಬ್ಬರ ನಡುವೆಯೂ ವಾಕ್ಸಮರ ನಡೆಯಿತು.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications