ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಡಿ. ಬಿ. ಇನಾಮಾದಾರ್ ನಿಧನ
ಬೆಂಗಳೂರು, ಏಪ್ರಿಲ್ 25; ಮಾಜಿ ಸಚಿವ, ಕಾಂಗ್ರೆಸ್ನ ಹಿರಿಯ ನಾಯಕ ಡಿ. ಬಿ. ಇನಾಮಾದಾರ್ ನಿಧನ ಹೊಂದಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ದಾನಪ್ಪಗೌಡ ಬಸವನಗೌಡ ಇನಾಮಾದಾರ್ (73) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಶ್ವಾಸಕೋಶ ಮತ್ತು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಬೆಳಗಾವಿ ಜಿಲ್ಲೆಯ ಕಿತ್ತೂರು ವಿಧಾನಸಭಾ ಕ್ಷೇತ್ರದಿಂದ 5 ಬಾರಿ ಡಿ. ಬಿ. ಇನಾಮಾದಾರ್ ಶಾಸಕರಾಗಿ ಆಯ್ಕೆಯಾಗಿದ್ದರು. ಸಚಿವರಾಗಿಯೂ ಸಹ ಕೆಲಸ ಮಾಡಿದ್ದರು. ಈ ಬಾರಿಯ ಚುನಾವಣೆಗೆ ಸಹ ಅವರು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅನಾರೋಗ್ಯದ ಕಾರಣ ಅವರಿಗೆ ಟಿಕೆಟ್ ನಿರಾಕರಿಸಲಾಗಿತ್ತು.
ಡಿ. ಬಿ. ಇನಾಮಾದಾರ್ ಜನತಾ ಪಕ್ಷದಿಂದ ಎರಡು ಮತ್ತು ಕಾಂಗ್ರೆಸ್ನಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎಸ್. ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಸಚಿವರಾಗಿಯೂ ಕೆಲಸ ಮಾಡಿದ್ದಾರೆ. 2018ರ ಚುನಾವಣೆಯಲ್ಲಿ ಕಿತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. 40,293 ಮತಗಳನ್ನು ಪಡೆದು ಬಿಜೆಪಿಯ ದಾನಪ್ಪ ಗೌಡ ಬಸನಗೌಡ ಇನಾಮದಾರ ವಿರುದ್ಧ ಸೋಲು ಕಂಡಿದ್ದರು.
ರಾಜೀನಾಮೆ ಘೋಷಣೆ ಮಾಡಿದ್ದರು; 2018ರ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಡಿ. ಬಿ. ಇನಾಮಾದಾರ್ಗೆ ಟಿಕೆಟ್ ಘೋಷಣೆ ಮಾಡಲು ತಡ ಮಾಡಿತ್ತು. ಆಗ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಅವರು ಘೋಷಣೆ ಮಾಡಿದ್ದರು. ಆದರೆ ಬಳಿಕ ಯೂ-ಟರ್ನ್ ತೆಗೆದುಕೊಂಡಿದ್ದರು. ಕಾಂಗ್ರೆಸ್ನಲ್ಲೇ ಉಳಿದಿದ್ದರು.
ಡಿ. ಬಿ. ಇನಾಮಾದಾರ್ 1983ರಲ್ಲಿ ಜನತಾ ಪಕ್ಷದಿಂದ ಕಿತ್ತೂರು ಕ್ಷೇತ್ರದಿಂದ ಕಣಕ್ಕಿಳಿದು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. 1985ರಲ್ಲಿಯೂ ಮತ್ತೆ ಜನತಾ ಪಕ್ಷದಿಂದ ಗೆಲುವು ಸಾಧಿಸಿದರು.
1994ರಲ್ಲಿ ಕಾಂಗ್ರೆಸ್ ಸೇರಿದ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜೊತೆ ಒಡನಾಟ ಹೊಂದಿದ್ದರು. 1994, 1999 ಮತ್ತು 2013ರ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಗೆಲುವು ಸಾಧಿಸಿದರು. ದೇವರಾಜ ಅರಸ್, ಎಸ್. ಎಂ. ಕೃಷ್ಣ ಮತ್ತು ಎಸ್. ಬಂಗಾರಪ್ಪ ಸಂಪುಟದಲ್ಲಿ ಸಚಿವರಾಗಿದ್ದರು.
ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿಯೂ ಕಿತ್ತೂರು ಕ್ಷೇತ್ರದಲ್ಲಿ ಡಿ. ಬಿ. ಇನಾಮಾದಾರ್ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಪಕ್ಷ ಬಾಬಾ ಸಾಹೇಬ್ ಡಿ. ಪಾಟೀಲ್ಗೆ ಟಿಕೆಟ್ ನೀಡಿದೆ. ಬಿಜೆಪಿಯಿಂದ ಹಾಲಿ ಶಾಸಕ ದಾನಪ್ಪ ಗೌಡ ಬಸನಗೌಡ ಇನಾಮದಾರ ಅಭ್ಯರ್ಥಿ. ಜೆಡಿಎಸ್ನಿಂದ ಅಶ್ವಿನಿ ಸಿಂಗಯ್ಯ ಪೂಜಾರೆ ಅಭ್ಯರ್ಥಿಯಾಗಿದ್ದಾರೆ.
ಸಿದ್ದರಾಮಯ್ಯ ಸಂತಾಪ; ಮಾಜಿ ಸಚಿವ ಡಿ. ಬಿ. ಇನಾಮಾದಾರ್ ನಿಧನಕ್ಕೆ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, "ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಮಾಜಿ ಸಚಿವರು ಆದ ಡಿ. ಬಿ. ಇನಾಂದಾರ್ ಅವರ ನಿಧನದ ಸುದ್ದಿ ಕೇಳಿ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಕುಟುಂಬ ಸದಸ್ಯರು ಮತ್ತು ಅಭಿಮಾನಿಗಳಿಗೆ ಇನಾಂದಾರ್ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಸಿಗಲಿ" ಎಂದು ಸಂತಾಪದಲ್ಲಿ ಹೇಳಿದ್ದಾರೆ.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ











Click it and Unblock the Notifications