ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣೆ: ಕುತೂಹಲ ಮೂಡಿಸಿದ ಸಿದ್ದರಾಮಯ್ಯ-ವಿಎಚ್ಪಿ ಪ್ರಮುಖರ ಭೇಟಿ!
ಬೆಂಗಳೂರು, ಫೆ. 05: ಕುತೂಹಲಕಾರಿ ಬೆಳವಣಿಗೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಶ್ವ ಹಿಂದೂ ಪರಿಷತ್ ಪ್ರಮುಖರು ಭೇಟಿ ಮಾಡಿ ಚರ್ಚೆ ನಡೆಸಿದ್ದು, ಮಂದಿರ ನಿರ್ಮಾಣಕ್ಕೆ ಅವರು ದೇಣಿಗೆ ನೀಡುತ್ತಾರಾ? ಎಂಬ ವಿಚಾರ ಕುತೂಹಲ ಮೂಡಿಸಿದೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸಕ್ಕೆ ತೆರಳಿದ್ದ ವಿಶ್ವ ಹಿಂದೂ ಪರಿಷತ್ ಪ್ರಾಂತ ವಿಶೇಷ ಸಂಪರ್ಕ ಪ್ರಮುಖ್ ಮಂಜುನಾಥ ಸ್ವಾಮಿ ಅವರು ಶ್ರೀರಾಮ ಮಂದಿರ ನಿರ್ಮಾಣದ ಕುರಿತು ಸಿದ್ದರಾಮಯ್ಯ ಅವರಿಗೆ ವಿವರಣೆ ನೀಡಿದ್ದಾರೆ.

ಶ್ರೀರಾಮ ಮಂದಿರ ನಿರ್ಮಾಣ ನಿರ್ಮಾಣದ ಹಿನ್ನೆಲೆಯಲ್ಲಿ ನಾಡಿನ ಜನರಿಂದ ದೇಣಿಗೆ ಪಡೆಯಲಾಗುತ್ತಿದ್ದು, ಇದೇ ಹಿನ್ನೆಲೆಯಲ್ಲಿ ತಮ್ಮನ್ನು ಭೇಟಿ ಮಾಡಿದ್ದೇವೆ ಎಂದು ಮಂಜುನಾಥ್ ಸ್ವಾಮಿ ಅವರು ವಿವರಿಸಿದ್ದಾರೆ. ಜೊತೆಗೆ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಕುರಿತು ತಯಾರಿಸಲಾಗಿರುವ ವಿವರಣಾ ಪತ್ರವನ್ನೂ ಸಿದ್ದರಾಮಯ್ಯ ಅವರಿಗೆ ಕೊಡಲಾಗಿದೆ.

ರಾಮ ಮಂದಿರ ನಿರ್ಮಾಣಕ್ಕೆ ಕನಿಷ್ಠ 10 ರೂಪಾಯಿಗಳಿಂದ ತಮ್ಮ ಶಕ್ತಾನುಸಾರ ದೇಣಿಗೆ ನೀಡಬಹುದಾಗಿದೆ. ಎರಡು ಸಾವಿರ ರೂಪಾಯಿಗಳವರೆಗೆ ದೇಣಿಗೆ ನೀಡುವವರಿಗೆ ಕೂಪನ್ ಕೊಡಲಾಗುತ್ತಿದೆ. 2 ಸಾವಿರ ರೂಪಾಯಿಗಳಿಗಿಂತ ಹೆಚ್ಚು ಹಣವನ್ನು ದೇಣಿಗೆ ನೀಡುವವರಿಗೆ ಶ್ರೀ ರಾಮಜನ್ಮಭೂಮಿ ಟ್ರಸ್ಟ್ ವತಿಯಿಂದ ರಸೀದಿ ಕೊಡಲಾಗುವುದು ಎಂದು ಮಂಜುಸ್ವಾಮಿ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ವಿವರಿಸಿದ್ದಾರೆ.
ಸಿದ್ದರಾಮಯ್ಯ ಅವರು ವಿಶ್ವ ಹಿಂದೂ ಪರಿಷತ್ ಪ್ರಾಂತ ವಿಶೇಷ ಸಂಪರ್ಕ ಪ್ರಮುಖ್ ಮಂಜುನಾಥ ಸ್ವಾಮಿ ಅವರ ವಿವರಣೆಯಿಂದ ಆಲಿಸಿದ್ದಾರೆ. ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ರಂಗಣ್ಣ ಅವರು ಉಪಸ್ಥಿತರಿದ್ದರು.

Recommended Video
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ವಿಶ್ವ ಹಿಂದೂ ಪರಿಷತ್ ಪ್ರಮುಖರು ಭೇಟಿ ಮಾಡಲಿದ್ದಾರೆ ಎಂದು ವಿಎಚ್ಪಿ ಮೂಲಗಳು ತಿಳಿಸಿವೆ. ಹೀಗಾಗಿ ಸಿದ್ದರಾಮಯ್ಯ ಅವರು ಶ್ರೀರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುತ್ತಾರಾ? ಎಂಬುದು ಕುತೂಹಲ ಮೂಡಿಸಿದೆ.
-
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election












Click it and Unblock the Notifications