ಧಾರವಾಡ ರೈತರ ಹೋರಾಟಕ್ಕೆ ಸಿಕ್ಕ ಜಯ, ಎರಡು ದಿನದಲ್ಲಿ "ವಕ್ಫ ಆಸ್ತಿ" ಎಂಬ ಶಬ್ದ ಪಹಣಿಯಿಂದ ತೆರವು

ಧಾರವಾಡ, ನವೆಂಬರ್‌ 07: ರೈತರ ಪಹಣಿ ಪತ್ರಿಕೆಯಲ್ಲಿ ನಮೂದಾಗಿದ್ದ ಸದರಿ ಆಸ್ತಿ ವಕ್ಫ ಆಸ್ತಿಗೆ ಒಳಪಟ್ಟಿದೆ ಎಂಬ ಶಬ್ದದ ವಿರುದ್ಧ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ರೈತರು ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಿದ್ದರು.

ತಮ್ಮ ಪಿತ್ರಾರ್ಜಿತ ಆಸ್ತಿಗೆ ವಕ್ಫ ಏನು ಸಂಬಂಧ? ತಮ್ಮ ಪಹಣಿ ಪತ್ರಿಕೆಯಲ್ಲಿ ಸದರಿ ಆಸ್ತಿ ವಕ್ಫಗೆ ಒಳಪಟ್ಟಿದೆ ಎಂದು ನಮೂದಾಗಿದ್ದು ಏಕೆ? ಇದನ್ನು ನಮೂದು ಮಾಡಿದವರು ಯಾರು? ರೈತರ ಗಮನಕ್ಕೆ ತರದೇ ಪಹಣಿಯಲ್ಲಿ ವಕ್ಫ ಹೆಸರು ಸೇರಿಸುವುದು ಏಕೆ? ಎಂದು ಉಪ್ಪಿನ ಬೆಟಗೇರಿ ಗ್ರಾಮಸ್ಥರು ಕೆಲ ದಿನಗಳ ಹಿಂದಷ್ಟೇ ಧಾರವಾಡ ತಹಶೀಲ್ದಾರ ಕಚೇರಿ ಎದುರು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ನೇತೃತ್ವದಲ್ಲಿ ದೊಡ್ಡಮಟ್ಟದ ಹೋರಾಟ ನಡೆಸಿದ್ದರು.

Victory for Farmers Removal of Waqf Asset Terms Ordered

ಅಲ್ಲದೇ ಸೋಮವಾರವೂ ಉಪ್ಪಿನ ಬೆಟಗೇರಿ ಗ್ರಾಮಸ್ಥರು ಧಾರವಾಡದ ವಕ್ಫ ಕಚೇರಿ ಎದುರೇ ಹೋರಾಟ ನಡೆಸಿದ್ದರು. ಉಪ್ಪಿನ ಬೆಟಗೇರಿಯ ಜವಳಗಿ, ಮಸೂತಿ ಹಾಗೂ ಹುಟಗಿ ಎಂಬುವವರಿಗೆ ಸೇರಿದ ಆಸ್ತಿಯ ಪಹಣಿಯಲ್ಲಿ ವಕ್ಫ ಆಸ್ತಿ ಎಂದು ನಮೂದಾಗಿತ್ತು. ಈ ಕುರಿತು ತಹಶೀಲ್ದಾರ ಕಚೇರಿ ಎದುರು ಧರಣಿ ನಡೆಸಿದ ನಂತರ ನವೆಂಬರ್‌ 5 ರಂದು ವಕ್ಫ ಅಧಿಕಾರಿಗಳು ಹಾಗೂ ರೈತರೊಂದಿಗೆ ಸಭೆ ನಡೆಸಿ ಸಮಸ್ಯೆ ಬಗೆಹರಿಸಲಾಗುವುದು ಎಂಬ ಭರವಸೆಯನ್ನು ತಹಶೀಲ್ದಾರರು ನೀಡಿದ್ದರು.

ಆ ಪ್ರಕಾರ ನಿನ್ನೆ (ಬುಧವಾರ) ಸಭೆ ನಡೆಸಿದ ತಹಶೀಲ್ದಾರರು ಎಲ್ಲಿ ತಪ್ಪು ನಡೆದಿದೆಯೋ ಅದನ್ನು ಸರಿಪಡಿಸಬೇಕು. ಇನ್ನೆರಡು ದಿನದಲ್ಲಿ ರೈತರ ಪಹಣಿ ಪತ್ರಿಕೆಯಲ್ಲಿ ದಾಖಲಾಗಿರುವ ವಕ್ಫ ಎಂಬ ಹೆಸರನ್ನು ತೆಗೆದು ಹಾಕಬೇಕು ಎಂದು ತಹಶೀಲ್ದಾರ ಕೋರ್ಟ್ ಮೂಲಕ ಆದೇಶಿಸಿದ್ದಾರೆ. ಇದು ರೈತರ ಹೋರಾಟಕ್ಕೆ ಸಿಕ್ಕ ಜಯವಾಗಿದೆ.

ಇದೇ ವಿಷಯವಾಗಿ ಸಾಕಷ್ಟು ಬಾರಿ ತಹಶೀಲ್ದಾರ ಕಚೇರಿಗೆ ಅಲೆದಾಡಿದ್ದರೂ ಪ್ರಯೋಜನವಾಗಿರಲಿಲ್ಲ. ಹೋರಾಟ ನಡೆಸಿದಾಗ ಮಾಧ್ಯಮವರು ಇದರ ಮೇಲೆ ದೊಡ್ಡಮಟ್ಟದಲ್ಲೇ ಬೆಳಕು ಚೆಲ್ಲಿದಾಗ ಈಗ ಅಧಿಕಾರಿಗಳು ಸಮಸ್ಯೆ ಬಗೆಹರಿಸಿದ್ದಾರೆ ಎಂದು ರೈತರು ಸಂತಸ ವ್ಯಕ್ತಪಡಿಸಿದರು.

ಬುಧವಾರ ನಡೆದ ಸಭೆಯಲ್ಲಿ ಕೇವಲ ಉಪ್ಪಿನ ಬೆಟಗೇರಿ ಗ್ರಾಮಸ್ಥರ ಸಮಸ್ಯೆಯನ್ನು ಮಾತ್ರ ಬಗೆಹರಿಸಲು ಕ್ರಮ ವಹಿಸಲಾಗಿದೆ. ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲೂ ಇದೇ ರೀತಿ ಆಗಿದ್ದು, ಆ ಬಗ್ಗೆ ತಹಶೀಲ್ದಾರರು ಯಾವ ಕ್ರಮ ಕೈಗೊಳ್ಳುತ್ತಾರೋ ಕಾದು ನೋಡಬೇಕಿದೆ. ಉಪ್ಪಿನ ಬೆಟಗೇರಿ ಗ್ರಾಮಸ್ಥರು ತಮ್ಮ ಹೋರಾಟಕ್ಕೆ ಸಿಕ್ಕ ಪ್ರತಿಫಲದಿಂದಾಗಿ ತಹಶೀಲ್ದಾರ ಕಚೇರಿ ಎದುರೇ ಪರಸ್ಪರ ಸಿಹಿ ತಿನ್ನಿಸಿ ಸಂಭ್ರಮಿಸಿದರು.

ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಮಾತನಾಡಿ, ರಾಜ್ಯದಲ್ಲಿ ವಕ್ಪ್ ಬೋರ್ಡ್ ನಿಂದ ರೈತರಿಗೆ ನೊಟೀಸ್ ನೀಡಿರುವುದನ್ನು ವಕ್ಪ್ ಕಾಯ್ದೆ ತಿದ್ದುಪಡಿ ಕುರಿತು ಪರಿಶೀಲಿಸಲು ರಚನೆಯಾಗಿರುವ ಸಂಸತ್ತಿನ ಜಂಟಿ ಸದನ ಸಮಿತಿ ಗಮನಕ್ಕೆ ತಂದಿದ್ದೇವೆ ಎಂದು ಹೇಳಿದರು.

ಹಾವೇರಿ ಜಿಲ್ಲೆಯ ಶಿಗ್ಗಾವಿ ಸವಣೂರು ಸೇರಿದಂತೆ ಎಲ್ಲ ತಾಲೂಕುಗಳಲ್ಲಿ ವಕ್ಪ್ ಬೋರ್ಡ್ ನಿಂದ ರೈತರಿಗೆ, ಆಸ್ಪತ್ರೆ, ಶಾಲೆ, ಕಾಗಿನೆಲೆ ಮಠಕ್ಕೆ ನೊಟೀಸ್ ನೀಡಿದ್ದಾರೆ‌‌. ಇದನ್ನು ಜೆಪಿಸಿ ಅಧ್ಯಕ್ಷ ಗಮನಕ್ಕೆ ತಂದಿದ್ದೇವೆ‌. ಕೇವಲ ಹಾವೇರಿ ಜಿಲ್ಲೆಯಷ್ಟೇ ಅಲ್ಲ ಧಾರವಾಡ, ಬಿಜಾಪುರ, ಕೊಪ್ಪಳ, ಗದಗ, ಹಳೆ ಮೈಸೂರಿನ ಮಂಡ್ಯ, ಮೈಸೂರು ಜಿಲ್ಲೆ ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿ ರೈತರಿಗೆ ನೊಟೀಸ್ ಕೊಟ್ಟಿದ್ದಾರೆ‌. ವಕ್ಪ್ ಕಾಯಿದೆ ದುರ್ಬಳಕೆ ಮಾಡಿಕೊಂಡಿರುವುದರಿಂದ ಸಮಸ್ಯೆ ಉಲ್ಬಣಗೊಂಡಿದೆ. ಈ ಬಗ್ಗೆ ಸಮಿತಿ ಗಮನಕ್ಕೆ ತಂದಿದ್ದೇವೆ. ಈ ಸಮಿತಿ ತಳಮಟ್ಟದಲ್ಲಿ ವಾಸ್ತವ ಏನಿದೆ ಎನ್ನುವುದನ್ನು ತನ್ನ ವರದಿಯಲ್ಲಿ ಪ್ರಸ್ತಾಪಿಸಿ ಕಾಯ್ದೆ ತಿದ್ದುಪಡಿಗೆ ಸದನಕ್ಕೆ ಸಲ್ಲಿಸಲಿದೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+