ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಎಡವಟ್ಟು
ಬೆಂಗಳೂರು, ಜನವರಿ 27: ಲೋಕಸಭಾ ಚುನಾವಣೆಗೆ ಸಿದ್ದತೆ ನಡೆಸುತ್ತಿರುವ ಕಾಂಗ್ರೆಸ್ ಶಾಸಕರಲ್ಲಿನ ಅಸಮಾಧಾನವನ್ನ ಶಮನಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ನಿಗಮ ಮಂಡಳಿ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಆದರೆ ನಿಗಮ ಮಂಡಳಿ ನೇಮಕ ವಿಚಾರದಲ್ಲಿ ಸರ್ಕಾರದ ಎಡವಟ್ಟು ಮಾಡಿದೆ.
ಹೌದು, 34 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದ್ದು, ಶಾಸಕ ವಿಜಯಾನಂದ ಕಾಶಪ್ಪನವರ್ ಅವರಿಗೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ನೀಡಿದೆ. ಆದರೆ ಕ್ರೀಡಾ ಪ್ರಾಧಿಕಾರದ ಬೈಲಾದಲ್ಲಿ ಇದಕ್ಕೆ ಅವಕಾಶವಿಲ್ಲ.ಕರ್ನಾಟಕ ಕ್ರೀಡಾ ಪ್ರಾಧಿಕಾರದ ಬೈಲಾದ ನಿಯಮದ ಪ್ರಕಾರ ಸಚಿವರೇ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರಾಗುತ್ತಾರೆ.

ಕ್ರೀಡಾ ಸಚಿವ ನಾಗೇಂದ್ರ ಅವರೇ ಪ್ರಾಧಿಕಾರದ ಅಧ್ಯಕ್ಷರಾಗಿದ್ದಾರೆ. ಕೇವಲ ಉಪಾಧ್ಯಕ್ಷ ಸ್ಥಾನಕ್ಕೆ ನೇಮಿಸಲು ಸರ್ಕಾರಕ್ಕೆ ಅವಕಾಶವಿರುತ್ತದೆ. ಆದರೆ, ಸಿದ್ದರಾಮಯ್ಯ ಸರ್ಕಾರ ಹೊರಡಿಸಿರುವ ಆದೇಶದಲ್ಲಿ ವಿಜಯಾನಂದ ಕಾಶಪ್ಪನವರ್ ಅವರಿಗೆ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಇದರಿಂದ ಶಾಸಕ ವಿಜಯಾನಂದ ಕಾಶಪ್ಪನವರ್ ಅಸಮಾಧಾನಗೊಂಡಿದ್ದಾರೆ.
ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಸಂಪೂರ್ಣ ಪಟ್ಟಿ ಇಲ್ಲಿದೆ
1.ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ- ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ
2. ಮುದ್ದೇಬಿಹಾಳ ಶಾಸಕ ಅಪ್ಪಾಜಿ ಸಿಎಸ್ ನಾಡಗೌಡ -ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜಂಟ್ಸ್
3.ಕಾಗವಾಡ ಶಾಸಕ ಭರಮಗೌಡ ಅಲಗೌಡ ಕಾಗೆ -ಹುಬ್ಬಳ್ಳಿ ಸಾರಿಗೆ ನಿಮಗ (ವಾಯುವ್ಯ ಸಾರಿಗೆ)
4.ಬಾಗಲಕೋಟೆ ಶಾಸಕ ಯಮುನಪ್ಪ ವೈ ಮೇಟಿ -ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ
5.ಗುಬ್ಬಿ ಶಾಸಕ ಎಸ್ಆರ್ ಶ್ರೀನಿವಾಸ -ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
6.ಬ್ಯಾಡಗಿ ಶಾಸಕ ಬಸವರಾಜ್ ನೀಲಪ್ಪ ಶಿವಣ್ಣನವರ್ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ
7.ಹೊಸದುರ್ಗ ಶಾಸಕ ಬಿಜಿ ಗೋವಿಂದಪ್ಪ- ಆಹಾರ ಮತ್ತು ನಾಗರಿಕ ಸರಬಾರಜು ನಿಗಮ
8.ಮಾಗಡಿ ಶಾಸಕ ಎಚ್ಸಿ ಬಾಲಕೃಷ್ಣ -ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ
9.ರೋಣ ಶಾಸಕ ಜಿಎಸ್ ಪಾಟೀಲ್ -ಕರ್ನಾಟಕ ಖನಿಜ ನಿಗಮ ಅಭಿವೃದ್ಧಿ ನಿಗಮ ನಿಯಮಿತ
10.ಶಾಂತಿ ನಗರ ಶಾಸಕ ಎನ್ಎ ಹ್ಯಾರೀಸ್ -ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
11.ಬೈಲಹೊಂಗಲ ಶಾಸಕ ಕೌಜಲಗಿ ಮಹಾಂತೇಶ್ ಶಿವಾನಂದ -ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ
12.ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ -ಮೈಸೂರ್ ಸೇಲ್ಸ್ ಇಂಟರ್ ನ್ಯಾಶನಲ್ ಲಿಮಿಟೆಡ್
13.ಬೀಳಗಿ ಶಾಸಕ ಜೆಟಿ ಪಾಟೀಲ್ -ಹಟ್ಟಿ ಚಿನ್ನದ ಗಣಿ
14.ಸುರಪುರ ಶಾಸಕ ರಾಜಾ ವೆಂಕಟ್ಟಪ್ಪ ನಾಯಕ -ಕರ್ನಾಟಕ ರಾಜ್ಯ ಉಗ್ರಾಣ ನಿಗಮ
15.ಭದ್ರಾವತಿ ಶಾಸಕ ಬಿಕೆ ಸಂಗಮೇಶ್ವರ್ -ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಮಗ/ಲ್ಯಾಂಡ್ ಆರ್ಮಿ
16.ಅರಸೀಕೆರೆ ಶಾಸಕ ಕೆಎಂ ಶಿವಲಿಂಗೇಗೌಡ -ಕರ್ನಾಟಕ ಗೃಹ ಮಂಡಳಿ
17.ಹುಬ್ಬಳ್ಳಿ-ಧಾರವಾಡ ಪೂರ್ವ ಶಾಸಕ ಅಬ್ಬಯ್ಯ ಪ್ರಸಾದ್ -ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ
18.ಸಾಗರ ಶಾಸಕ ಬಿಕೆ ಗೋಪಾಲಕೃಷ್ಣ ಬೇಳೂರು -ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತ
19.ಬಂಗಾರಪೇಟೆ ಶಾಸಕ ಎಸ್ ಎನ್ ನಾರಾಯಣಸ್ವಾಮಿ -ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ
20.ಮಳವಳ್ಳಿ ಶಾಸಕ ಪಿಎಂ ನರೇಂದ್ರಸ್ವಾಮಿ -ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ
21.ಚಳ್ಳಕೆರೆ ಶಾಸಕ ಟಿ ರಘುಮೂರ್ತಿ -ಕರ್ನಾಟಕ ರಾಜ್ಯ ಕೈಗಾರಿಕೆಗಳ ಮಂಡಳಿ
22.ಶ್ರೀರಂಗಪಟ್ಟಣ ಶಾಸಕ ಎಬಿ ರಮೇಶ್ ಬಂಡಿ ಸಿದ್ದೇಗೌಡ -ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ
23.ಆನೇಕಲ್ ಶಾಸಕ ಬಿ ಶಿವಣ್ಣ -ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ
24.ಬಾಗೇಪಲ್ಲಿ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ -ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ
25.ಧಾರವಾಡ ಶಾಸಕ ವಿನಯ್ ಕುಲಕರ್ಣಿ- ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
26. ಹೆಗ್ಗಡ ದೇವನಕೋಟೆ ಶಾಸಕ ಅನಿಲ್ ಚಿಕ್ಕಮಾದು -ಜಂಗಲ್ ಲಾಡ್ಜಸ್
27.ರಾಯಚೂರು ಗ್ರಾಮೀಣ ಶಾಸಕ ಬಸವನಗೌಡ ದದ್ದಲ್ -ಕರ್ನಾಟಕ ಪರಿಶಿಷ್ಟ ಪಂಡಗಳ ಅಭಿವೃದ್ಧಿ ನಿಗಮ
28.ಕಲಬುರಗಿ ಉತ್ತರ ಶಾಸಕಿ ಕನೀಜ್ ಫಾತಿಮಾ -ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ
29. ಹನಗುಂದ ಶಾಸಕ ಕಾಶಪ್ಪನವರ ವಿಜಯಾನಂದ ಶಿವಶಂಕಪ್ಪ - ಕರ್ನಾಟಕ ಕ್ರೀಡಾ ಪ್ರಾಧಿಕಾರ
30.ಹಾನಗಲ್ ಶಾಸಕ ಶ್ರೀನಿವಾಸ ಮಾನೆ -ಮಾನ್ಯ ಉಪಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರು
31.ಶೃಂಗೇರಿ ಶಾಸಕ ಟಿಡಿ ರಾಜೇಗೌಡ -ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ನಿಯಮಿತ
32.ಕೆಜಿಎಫ್ ಶಾಸಕಿ ರೂಪಕಲಾ - ಕರ್ನಾಟಕ ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ
33.ಕಾರವಾಡ ಶಾಸಕ ಸತೀಶ್ ಕೃಷ್ಣ ಸೈಲ್ -ಕರ್ನಾಟಕ ಮಾರ್ಕೆಟಿಂಗ್ ಕನ್ಸಲ್ಟೆಂಟ್ ಅಂಡ್ ಏಜೆನ್ಸೀಸ್
34.ಹೊಸಕೋಟೆ ಶಾಸಕ ಶರತ್ ಕುಮಾರ್ ಬಚ್ಚೇಗೌಡ -ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ
35.ಕಂಪ್ಲಿ ಶಾಸಕ ಜೆಎನ್ ಗಣೇಶ್ -ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ












Click it and Unblock the Notifications