SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ
ಬೆಂಗಳೂರು: ಉತ್ತರ ಕರ್ನಾಟಕದಿಂದ ನಿತ್ಯ ಕರಾವಳಿಯ ಪ್ರಮುಖ ನಗರವಾರದ ಮಂಗಳೂರಿಗೆ ಸಂಚಾರ ಸೇವೆ ನೀಡುತ್ತಿದ್ದ 'ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು' ಸಂಚಾರ ಭಾಗಶಃ ರದ್ದಾಗಿದೆ ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಉಂಟಾದ ಈ ಅಡಚಣೆಗೆ ಗಮನದಲ್ಲಿಟ್ಟುಕೊಂಡು ಈ ಮಾರ್ಗದ ರೈಲು ಪ್ರಮಾಣಿಕರು ತಮ್ಮ ಪ್ರಯಾಣ ಯೋಜಿಸುವಂತೆ ಅವರು ಕೋರಿದ್ದಾರೆ.
ನೈಋತ್ಯ ರೈಲ್ವೆ (South Western Railway) ಹುಬ್ಬಳ್ಳಿ ಜಂಕ್ಷನ್ ವ್ಯಾಪ್ತಿಯಲ್ಲಿ ಹಳಿ ನಿರ್ವಹಣಾ ಕಾಮಗಾರಿ ನಡೆಯುತ್ತಿದೆ. ಈ ಕಾರಣದಿಂದ ಮಂಗಳೂರು ಸೆಂಟ್ರಲ್ ಮತ್ತು ವಿಜಯಪುರ ನಡುವಿನ ರೈಲು ಸಂಚಾರದಲ್ಲಿ ಮಾರ್ಚ್ 25ರವರೆಗೆ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ. ಮಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು (17378) ಮಾರ್ಚ್ 19ರಿಂದ ಮಾರ್ಚ್ 24ರವರೆಗೆ ವಿಜಯಪುರದ ಬದಲು ಬಾಗಲಕೋಟೆಯಲ್ಲೇ ತನ್ನ ಪ್ರಯಾಣವನ್ನು ಕೊನೆಗೊಳಿಸಲಿದೆ. ಈ ಮೂಲಕ ಬಾಗಲಕೋಟೆ ಮತ್ತು ವಿಜಯಪುರ ಮಧ್ಯದ ಸಂಚಾರ ಭಾಗಶಃ ರದ್ದುಗೊಳಿಸಲಾಗಿದೆ.

ಇನ್ನೂ ಮರಳಿ ಅದೇ ದಿನಕ್ಕಿನಲ್ಲಿ ಬರುವ ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು (17377) ಮಾರ್ಚ್ 20 ರಿಂದ ಮಾರ್ಚ್ 25ರವರೆಗೆ ವಿಜಯಪುರದ ಬದಲು ಬಾಗಲಕೋಟೆ ನಿಲ್ದಾಣದಿಂದಲೇ ತನ್ನ ಪ್ರಯಾಣವನ್ನು ಆರಂಭಿಸಲಿದೆ. ಸಂಜೆ 5 ಗಂಟೆಗೆ ಬಾಗಲಕೋಟೆ ರೈಲು ನಿಲ್ದಾಣದಿಂದ ಈ ರೈಲು ಮಂಗಳೂರಿನ ಕಡೆಗೆ ಪ್ರಯಾಣ ಆರಂಭಿಸುತ್ತದೆ. ವಿಜಯಪುರ ಮತ್ತು ಬಾಗಲಕೋಟೆ ನಡುವೆ ಈ ರೈಲಿನ ಸಂಚಾರ ಇರುವುದಿಲ್ಲ.
ಒಂದು ವೇಳೆ ಮಂಗಳೂರಿಗೆ ತೆರಳಬೇಕಾದರೆ ವಿಜಯಪುರ, ಬಸವನ ಬಾಗೇವಾಡಿ ರೋಡ್, ಆಲಮಟ್ಟಿ ನಿಲ್ದಾಣಗಳ ಪ್ರಯಾಣಿಕರು ಬಾಗಲಕೋಟೆಗೆ ನಿಲ್ದಾಣಕ್ಕೆ ಬಂದು ರೈಲು ಹತ್ತಬಹುದು. ಉತ್ತರ ಕರ್ನಾಟಕದಿಂದ ಕರಾವಳಿಯ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರೈಲು ಇದಾಗಿದೆ.
ಈ ಮಾರ್ಗದ ಪ್ರಯಾಣಿಕರಿಗೆ ಎಂದಿನಂತೆ ರೈಲು ಲಭ್ಯ
ವಿಜಯಪುರ-ಮಂಗಳೂರು ರೈಲು ಮೇಲಿನ ನಿಲ್ದಾಣಗಳ ಜೊತೆಗೆ ಗುಳೇದಗುಡ್ಡ ರಸ್ತೆ ಮೂಲಕ ಬಾದಾಮಿ, ಹೋಳೆ ಆಲೂರು, ಮಲ್ಲಾಪುರ, ಗದಗ ಜಂಕ್ಷನ್, ಅಣ್ಣಿಗೇರಿ, ಎಸ್.ಎಸ್.ಎಸ್. ಹುಬ್ಬಳ್ಳಿ ಜಂಕ್ಷನ್, ಯಲವಿಗಿ, ಹಾವೇರಿ, ಬ್ಯಾಡಗಿ, ರಾಣೆಬೆನ್ನೂರು, ಹರಿಹರ, ದಾವಣಗೆರೆ, ಚಿಕ್ಕಜಾಜೂರು ಜಂಕ್ಷನ್, ಬಿರೂರು ಜಂಕ್ಷನ್, ಕಡೂರು, ಅರಸೀಕೆರೆ ಜಂಕ್ಷನ್, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ ಮಾರ್ಗವಾಗಿ ಮಂಗಳೂರು ಜಂಕ್ಷನ್ ನಿಲ್ದಾಣಕ್ಕೆ ತಲುಪುತ್ತದೆ. ಈ ಮೇಲಿನ ನಿಲ್ದಾಣಗಳ ಜನರಿಗೆ ಎಂದಿನಂತೆ ಈ ರೈಲಿನ ಸೇವೆ ಲಭ್ಯವಿದೆ ಎಂದು ರೈಲು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
South Western Railway: ಹುಬ್ಬಳ್ಳಿಯಿಂದ ರಾಮೇಶ್ವರಂಗೆ ವಿಶೇಷ ರೈಲು ಸಂಚಾರ; ಮಾರ್ಚ್ 21ರಿಂದ ಮುಂಗಡ ಟಿಕೆಟ್ ಬುಕ್ಕಿಂಗ್ ಆರಂಭ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election












Click it and Unblock the Notifications