New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್
Vijayapura Airport: ಉತ್ತರ ಕರ್ನಾಟಕದ ಬಹುನಿರೀಕ್ಷೆಯ ವಿಜಯಪುರದ ನೂತನ ವಿಮಾನ ನಿಲ್ದಾಣದ (New Airport) ನಿರ್ಮಾಣ ಕೆಲಸ ಪೂರ್ಣಗೊಂಡಿದೆ. ರಾಜ್ಯ ಸರ್ಕಾರದಿಂದ ಬರೋಬ್ಬರಿ 220 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗಿದೆ. ನ್ಯಾಯಾಲಯದಲ್ಲಿನ ಪ್ರಕರಣಗಳ ವಿಚಾರಣೆ ಪೂರ್ಣಗೊಂಡಿದ್ದು, ಸಕರಾತ್ಮಕ ತೀರ್ಪು ಬರಲಿದೆ ಎಂದಿರುವ ರಾಜ್ಯ ಮೂಲಸೌಕರ್ಯಾಭಿವೃದ್ಧಿ ಮತ್ತು ಕೈಗಾರಿಕೆ ಸಚಿವ ಎಂಬಿ ಪಾಟೀಲ ಅವರು, ವಿಜಯಪುರ ಏರ್ಪೋರ್ಟ್ ಕನಸು ನನಸಾಗುವ ಕಾಲ ಹತ್ತಿರ ಬಂದಿದೆ ಎಂದು ಆ ಭಾಗದ ಜನರಿಗೆ ಶುಭ ಸುದ್ದಿ ನೀಡಿದ್ದಾರೆ.
ಈ ಕುರಿತು ಎಕ್ಸ್ ಮಾಡಿರುವ ಅವರು, ಪರಿಸರ ಸಂಬಂಧಿತ ವಿವಿಧ ಪ್ರಕರಣಗಳ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಪೂರ್ಣಗೊಂಡಿದೆ. ತೀರ್ಪಿನ ಪ್ರಕಟಣೆ ಮಾತ್ರ ಬಾಕಿ ಉಳಿದಿದೆ. ಸಕಾರಾತ್ಮಕ ತೀರ್ಪು ಶೀಘ್ರದಲ್ಲೇ ಹೊರಬರುವ ನಿರೀಕ್ಷೆಯಿದ್ದು, ಅದರೊಂದಿಗೆ ತ್ವರಿತವಾಗಿ ವಿಮಾನ ನಿಲ್ದಾಣದ ಕಾರ್ಯಾಚರಣೆ ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಸರ್ಕಾರದಿಂದ ಅನುದಾನ ಬಿಡುಗಡೆ
ಕರ್ನಾಟಕ ರಾಜ್ಯ ಸರ್ಕಾರ ದಿಂದ ₹220 ಕೋಟಿ ಹೆಚ್ಚುವರಿ ಅನುದಾನ ಬಿಡುಗಡೆಯಾದೆ. ಅದರಿಂದ ವಿಜಯಪುರ ಏರ್ಪೋರ್ಟ್ನಲ್ಲಿ ಅಗ್ನಿಶಾಮಕ ವಾಹನಗಳ ವ್ಯವಸ್ಥೆ, ವಿಮಾನಗಳ ನೈಟ್ ಲ್ಯಾಂಡಿಂಗ್ ಸೌಲಭ್ಯಗಳ ಜೊತೆಗೆ, ಯಾವುದೇ ಬಗೆಯ ಬೃಹತ್ ವಿಮಾನಗಳ ಹಾರಾಟಕ್ಕೂ ಅಗತ್ಯ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ವಿಜಯಪುರ ವಿಮಾನ ನಿಲ್ದಾಣವು ಉತ್ತರ ಕರ್ನಾಟಕದ ಅಭಿವೃದ್ಧಿಗೆ ಮಹತ್ವದ ಮೈಲುಗಲ್ಲಾಗಲಿದೆ ಎಂದು ಅವರು ಹೆಮ್ಮೆ ವ್ಯಕ್ತಪಡಿಸಿದರು.
ಏರ್ಪೋರ್ಟ್ ಕಾರ್ಯಾಚರಣೆ ತಡವಾಗಿದ್ದೇಕೆ? ಆಗದ್ದೇನು?
2021-2022ರಲ್ಲಿ ವಿಜಯಪುರ ವಿಮಾನ ನಿಲ್ದಾಣ ಯೋಜನೆ ಆರಂಭಿಸಲಾಗಿತ್ತು. ಆಗಲೂ ಸಹ ರಾಜ್ಯದಿಂದ ಕೇಂದ್ರ ಸರ್ಕಾರದ ಪರಿಸರ ಮತ್ತು ಹವಾಮಾನ ಇಲಾಖೆ ಇಲಾಖೆಯಿಂದ ಅನುಮತೆ ಪಡೆದುಕೊಂಡಿರಲಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅನುಮತಿಗೆ ಪ್ರಯತ್ನಿಸಲಾಗಿದೆ. ಪರಿಸರಕ್ಕೆ ಸಂಬಂಧಿಸಿದ ಇಲಾಖೆಯಿಂದ ಅನುಮೋದನೆ ಪಡೆಯದ ಕೆಲವು ಯೋಜನೆಗಳ ಸ್ಥಗಿತಗೊಳಿಸಬೇಕೆಂದು ಕೋರ್ಟ್ ಮೆಟ್ಟಿಲೇರಲಾಯಿತು. ವಿವಿಧ ಯೋಜನೆಗಳಲ್ಲಿ ವಿಜಯಪುರ ಏರ್ಪೋರ್ಟ್ ಯೋಜನೆಯೂ ಒಂದು, ಹೀಗಾಗಿ ಅದರ ಕಾರ್ಯಾಚರಣೆ, ಕಾಮಗಾರಿ ಪೂರ್ಣಕ್ಕೆ ಅಡಚಣೆ ಉಂಟಾಯಿತು.
ಈ ಎಲ್ಲ ಪ್ರಕರಣಗಳ ವಿಚಾರಣೆ ಪೂರ್ಣಗೊಂಡಿದೆ. ಸುಪ್ರೀಂ ಕೋರ್ಟ್ ಈ ಯೋಜನೆಗಳಿಗೆ ಸಂಬಂಧಿಸಿದಂತೆ ಸಕಾರಾತ್ಮಕ ತೀರ್ಪು ನೀಡುವ ಸಾಧ್ಯತೆ ಇದೆ ಎಂದು ಎಂಬಿ ಪಾಟೀಲರು ವಿಶ್ವಾಸ ವ್ಯಕ್ತಪಡಿಸಿದರು. ಕಾರ್ಯಾರಂಭಕ್ಕೆ ಅನುಮತಿ ನೀಡುವಂತೆ ಈಗಾಗಲೇ ನಾನು ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ, ಜೊತೆಗೆ ಕೇಂದ್ರ ವಿಮಾನಯಾನ ಸಚಿವ ರಾಮಮೋಹನ ನಾಯ್ಡು ಮತ್ತು ಪರಿಸರ ಸಚಿವ ಭೂಪೇಂದ್ರ ಯಾದವ್ ಅವರಿಗೆ ಮನವಿ ಮಾಡಿದ್ದೇನೆ. ಶೀಘ್ರವೇ ವಿಜಯಪುರ ವಿಮಾನ ನಿಲ್ದಾಣದಿಂದ ಕಾರ್ಯಾಚರಣೆ ಶುರುವಾಗಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
-
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ













Click it and Unblock the Notifications