ಭೀಮಾ ತೀರದಲ್ಲಿ ಮತ್ತೆ ನೆತ್ತರು; ಚಂದಪ್ಪ ಹರಿಜನನ ಬಂಟ ಬಾಗಪ್ಪ ಹರಿಜನ ಮೇಲೆ ಗುಂಡಿನ ದಾಳಿ
ವಿಜಯಪುರ, ಆಗಸ್ಟ್ 8: ವಿಜಯಪುರ ನ್ಯಾಯಾಲಯದ ಆವರಣದಲ್ಲಿ ಇಂದು ಬೆಳಿಗ್ಗೆ (ಆಗಸ್ಟ್ 8) ಅಪರಿಚಿತ ವ್ಯಕ್ತಿಯೊಬ್ಬನಿಂದ ಭೀಮಾತೀರದ ಹಂತಕ ಎಂಬ ಕುಖ್ಯಾತಿ ಪಡೆದಿದ್ದ ಬಾಗಪ್ಪ ಹರಿಜನ್ ಮೇಲೆ ಗುಂಡಿನ ದಾಳಿ ನಡೆದಿದೆ.
ದಾಳಿಯಲ್ಲಿ ಗಂಭೀರವಾಗಿ ಗಾಯಗಳಾಗಿದ್ದು, ಬಾಗಪ್ಪನನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಕಲಬುರಗಿ, ವಿಜಯಪುರ, ಮಹಾರಾಷ್ಟ್ರ ಭಾಗಗಳಲ್ಲಕಿ ಭೀಮಾತೀರದ ಹಂತಕ ಎಂದೇ ಕುಖ್ಯಾತಿ ಪಡೆದಿದ್ದ, ಬಾಗಪ್ಪ ಮೇಲೆ ಈಗಾಗಲೇ ಹತ್ತು-ಹಲವು ಕ್ರಿಮಿನಲ್ ಕೇಸುಗಳಿದ್ದು, ಹಳೇ ದ್ವೇಷಕ್ಕೇ ಈ ಕೃತ್ಯ ನಡೆದಿರಬಹುದೆಂದು ಅಂದಾಜಿಸಲಾಗಿದೆ.

ವಿಜಯಪುರದ ಜಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.












Click it and Unblock the Notifications