Karnataka winter update: ವಿಜಯಪುರದಲ್ಲಿ ಮೈಕೊರೆವ ಚಳಿ, ಕನಿಷ್ಠ ತಾಪಮಾನದ ಜಿಲ್ಲೆಗಳಿವು, 3 ದಿನ ಮಳೆ ಮುನ್ಸೂಚನೆ
ಬೆಂಗಳೂರು, ಡಿಸೆಂಬರ್ 28: ಕರ್ನಾಟಕದಲ್ಲಿ ಜನವರಿ ಮೊದಲ ಮೂರು ದಿನಗಳು ಜೋರು ಮಳೆಯಿಂದ ಕೂಡಿರಲಿವೆ. ಸಂಭವನೀಯ ಮಳೆಗೂ ಮೊದಲೇ ರಾಜ್ಯದಲ್ಲಿ ವಿಪರೀತ ಚಳಿ ದಾಖಲಾಗುತ್ತಿದೆ. ಅದರಲ್ಲೂ ಉತ್ತರ ಒಳನಾಡಿನ ವಿಜಯಪುರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಅತ್ಯಧಿಕ ಕನಿಷ್ಠ ತಾಪಮಾನ ದಾಖಲಾಗುವ ಮೂಲಕ ಮೈಕೊರೆಯುವ ಚಳಿ ದಾಖಲಾಗಿದೆ.
ಕರಾವಳಿ ಹೊರತಾಗಿ ಒಳನಾಡಿನ ಜಿಲ್ಲೆಗಳಲ್ಲಿ ಅತ್ಯಧಿಕ ಚಳಿ ದಾಖಲಾಗುತ್ತಿದೆ. ನಿತ್ಯ ಬೆಳಗ್ಗೆ ದಟ್ಟ ಮಂಜು ಆವರಿಸುವ ಜೊತೆಗೆ ಜನರು ಅತ್ಯಧಿಕ ಚಳಿ, ಶೀತದ ವಾತಾವರಣವನ್ನು ಅನುಭವಿಸುತ್ತಿದ್ದಾರೆ. ಬೆಳಗ್ಗೆ ಮತ್ತು ಸಂಜೆ ನಂತರ ಚಳಿ ಹೆಚ್ಚಾಗುತ್ತಿದ್ದು, ಮಧ್ಯಾಹ್ನ ಗರಿಷ್ಠ ತಾಪಮಾನ ದಾಖಲಾಗುತ್ತಿದೆ.

ವಿಜಯಪುರದಲ್ಲಿ ಅತ್ಯಧಿಕ ಚಳಿ
ವಿಜಯಪುರದಲ್ಲಿ ಕಳೆದ ಎರಡು ದಿನಗಳಿಂದ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್ಗೆ ಇಳಿಕೆ ಆಗಿದೆ. ಇದರೊಂದಿಗೆ ಬಾಗಲಕೋಟೆ, ಧಾರವಾಡದಲ್ಲಿ ತಲಾ 12.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಹಲವು ದಿವಸಗಳ ಹಿಂದೆ ಇದೇ ರೀತಿಯ ವಾತಾವರಣ ವಿಜಯಪುರ ಜಿಲ್ಲೆಯಲ್ಲಿ ಏರ್ಪಟ್ಟಿತ್ತು. ಆಗಲೂ ಮೈಕೊರೆವ ಚಳಿ ದಾಖಲಾಗಿತ್ತು ಅಂದು ಇಲ್ಲಿ ಕನಿಷ್ಠ ತಾಪಮಾನ 12 ಡಿಗ್ರಿ ಸೆಲ್ಸಿಯಸ್ ಗೆ ಇಳಿಕೆ ಆಗಿತ್ತು.
ಒಳನಾಡಿನ ಜಿಲ್ಲೆಗಳಲ್ಲಿ ಶೀತ: ಚಳಿ ಮಾಹಿತಿ
ರಾಜ್ಯದಲ್ಲಿ ಒಳನಾಡಿನ ಜಿಲ್ಲೆಗಳಾದ ಬೆಳಗಾವಿಯಲ್ಲಿ 16.5 ಡಿಗ್ರಿ ಸೆಲ್ಸಿಯಸ್, ಬೀದರ್ 13.6 ಡಿ.ಸೆ, ಹಾವೇರಿ 14.2 ಡಿ.ಸೆ, ಗದಗ 15.2 ಡಿ.ಸೆ, ಕಲಬುರಗಿ 18.2 ಡಿ.ಸೆ, ಬಿಸಿಲ ನಾಡು ರಾಯಚೂರಲ್ಲಿ 19.2 ಡಿ.ಸೆ, ಬೆಂಗಳೂರು ನಗರ 16 ಡಿ.ಸೆ, ಚಾಮರಾಜನಗರ 11.4 ಡಿ.ಸೆ, ಚಿಂತಾಮಣಿ 12.8 ಡಿ.ಸೆ, ಹಾಸನ 15.2 ಡಿ.ಸೆ, ಚಿಕ್ಕಮಗಳೂರು 14.2 ಡಿ.ಸೆ, ಮಂಡ್ಯ 13 ಡಿ.ಸೆ, ಶಿವಮೊಗ್ಗ 14 ಡಿ.ಸೆ,
ಮೂರು ದಿನ ವ್ಯಾಪಕ ಮಳೆ ಸಾಧ್ಯತೆ
ಕರ್ನಾಟಕದಲ್ಲಿ ಮತ್ತೆ ವ್ಯಾಪಕ ಮಳೆ ಸುರಿಯುವ ಲಕ್ಷಣಗಳು ಕಂಡು ಬಂದಿವೆ. ಜನವರಿ ಮೊಲದ ಮೂರು ದಿನ ಅಂದರೆ ಜನವರಿ 1 ರಿಂದ 3ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿಗೆ ವ್ಯಾಪಕ ಮಳೆ ಆಗಲಿದೆ. ಈ ವೇಳೆ ಉತ್ತರ ಒಳನಾಡಿನಗೆ ಯಾವುದೇ ಮಳೆ ಮುನ್ಸೂಚನೆ ಇಲ್ಲ. ಬದಲಾಗಿ ಇಲ್ಲಿ ಬೆಳಗ್ಗೆ ಶೀತ ವಾತಾವರಣ, ದಟ್ಟ ಮಂಜು ಇರಲಿದ್ದು, ಶುಷ್ಕ ವಾತಾವರಣವೇ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.

ಇದೇ ಮೂರು ದಿನ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು, ಕೊಡಗು, ಚಾಮಜರಾಜನಗರ, ಶಿವಮೊಗ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂಗರ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ಇನ್ನಿತರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಹಗುರದಿಂದ ಸಾಧಾರಣವಾಗಿ ಮಳೆ ಆಗಲಿದೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications