ವಿಜಯೇಂದ್ರ ಅವರೇ ಮುಂದಿನ ಮುಖ್ಯಮಂತ್ರಿ: ಅಚ್ಚರಿ ಹೇಳಿಕೆ ನೀಡಿದ ಯಡಿಯೂರಪ್ಪ ಅವರ ಆಪ್ತ
ದಾವಣಗೆರೆ, ನವೆಂಬರ್ 27: ರಾಜ್ಯದಲ್ಲಿ ಮುಡಾ ಪ್ರಕರಣದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎನ್ನುವ ಕೂಗು ಜೋರಾಗಿ ಕೇಳಿ ಬರುತ್ತಿದೆ. ಈ ಬೆನ್ನಲ್ಲೇ ಬಿಜೆಪಿಯಲ್ಲಿ ಮುಂದಿನ ಮುಖ್ಯಮಂತ್ರಿ ಕುರಿತು ಬಹರಂಗವಾಗಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಆಪ್ತರು ಅಚ್ಚರಿ ಹೇಳಿಕೆಯನ್ನ ನೀಡುತ್ತಿದ್ದಾರೆ.
ಶಿರಮಗೊಂಡನಹಳ್ಳಿಯಲ್ಲಿ ನಡೆಯುತಿದ್ದ ಮಾಜಿ ಸಚಿವ ಎಸ್ ಎ ರವೀಂದ್ರನಾಥ್ ಅವರ ಹುಟ್ಟುಹಬ್ಬದ ಕಾರ್ಯಕ್ರಮದ ವೇಳೆ ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ಅವರು, ವಿಜಯೇಂದ್ರ ಅವರು ಮುಂದಿನ ಸಿಎಂ ಎಂಬ ಹೇಳಿಕೆಯನ್ನು ನೀಡಿದ್ದಾರೆ.

ದಾವಣಗೆರೆಯಿಂದ ನಾವು ಸಂದೇಶ ಕೊಡ್ತೀವಿ. ಯಾವುದೇ ದುಷ್ಟು ಶಕ್ತಿ ಬಂದರು ಇದನ್ನು ತಡಿಯೋದಕ್ಕೆ ಸಾಧ್ಯವಿಲ್ಲ. ವಿಜಯೇಂದ್ರ ಅವರನ್ನ ಮುಂದಿನ ಮುಖ್ಯಮಂತ್ರಿ ಮಾಡೆ ಮಾಡ್ತೀವಿ ಎಂದು ಎರಡು ಕೈ ಎತ್ತಿ ವಿಜಯೇಂದ್ರ ಮುಖ್ಯಮಂತ್ರಿ ಆಗಬೇಕು ಅಂದ್ರೆ ಬೆಂಬಲ ಕೊಡಿ ಎಂದು ರೇಣುಕಾಚಾರ್ಯ ಹೇಳಿದ್ದಾರೆ.
ಇನ್ನೂ ರಾಜ್ಯದ ಮೂರು ಉಪಚುನಾವಣಾ ಫಲಿತಾಂಶದ ಕುರಿತು ಮಾತನಾಡಿ, ರಾಜ್ಯದ ಉಪ ಚುನಾವಣೆ ಫಲಿತಾಂಶ ಯಾವುದೇ ದಿಕ್ಸೂಚಿ ಅಲ್ಲ. ಈ ಮೂರು ಉಪಚುನಾವಣೆಯನ್ನ ಕಾಂಗ್ರೆಸ್ ಹಣ, ಹೆಂಡ ತೊಳ್ಬಲದಿಂದ ಗೆದ್ದಿದೆ. ಆದರೆ ನಾವು ಯಾವುದೇ ಸೋಲಿನಿಂದ ಕುಗ್ಗಿಲ್ಲ. ಮತ್ತೆ ಪಕ್ಷ ಸಂಘಟನೆ ಮಾಡೇ ಮಾಡ್ತೀವಿ ಎಂದು ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ಅವರು ಹೇಳಿದರು.
ಇನ್ನು ಉಪ ಚುನಾವಣೆ ಸೋಲಿಗೆ ವಿಜಯೇಂದ್ರ ಯಡಿಯೂರಪ್ಪ ಅವರು ಕಾರಣ ಅಂತಾರೆ. ಸ್ವಯಂ ಘೋಷಿತ ಹಿಂದು ಹುಲಿ, ನಾಚಿಕೆ ಆಗಬೇಕು ಅವರಿಗೆ. ದಾವಣಗೆರೆಯಲ್ಲಿ ಸರ್ವಾಧಿಕಾರ ದುರಂಕಾರದಿಂದ ಚುನಾವಣೆ ಸೋತರು. ಯಡಿಯೂರಪ್ಪ ಅವರಿಂದ ಉಂಡು ತಿಂದು ಅವರಿಂದ ಸಾಕಷ್ಟು ಮಾಡಿಕೊಂಡು ಅವರ ವಿರುದ್ಧವೇ ಮಾತನಾಡ್ತಾರೆ. ಯಾವುದೇ ವ್ಯಕ್ತಿ ಜೊತೆ ಬೇರೆ ಎಲ್ಲೋ ಹೋರಾಟಕ್ಕೆ ಹೋಗಿದ್ದಾರೆ. ದಾವಣಗೆರೆಯಲ್ಲಿ ತಮ್ಮ ಸೋಲಿಗೆ ನೀವೇ ಕಾರಣ ಬೇರೆ ಯಾರು ಅಲ್ಲ ಎಂದು ತೀವ್ರ ವಾಗ್ದಾಳಿ ನಡೆಸಿದರು.
ನೀವು ಹಿಂದು ಹುಲಿ ಅಲ್ಲ ಇಲಿ. ನೀವು ಮುಖವಾಡ ಹಾಕಿಕೊಂಡು ಬದುಕುತಿದ್ದೀರಿ. ಉಪ ಚುನಾವಣೆ ಸೋಲಿಗೆ ಕಾರಣ ಯಡಿಯೂರಪ್ಪ, ವಿಜಯೇಂದ್ರ ಅಂತೀರಿ. ನೀನು ಹಿಂದು ಹುಲಿ, ಶಿಗ್ಗಾವಿಯಲ್ಲಿ ಏನು ಮಾಡಿದೆ ಎಂದು ಬಿಜೆಪಿ ಹಿರಿಯ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹಾಗೂ ಸಂಸದ ಜಿ ಎಂ ಸಿದ್ದೇಶ್ವರ ವಿರುದ್ಧ ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ಆಕ್ರೋಶ ಹೊರಹಾಕಿದರು. ಇನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು. ಗ್ಯಾರಂಟಿ ಕಾರಣದಿಂದ ಸಿದ್ದರಾಮಯ್ಯ ಸರ್ಕಾರ ಈಗಾಗಲೇ ದಿವಾಳಿಯಾಗಿದೆ. ಅವರಿಗೆ ಅಭಿವೃದ್ಧಿಗೆ ಅನುದಾನ ಕೊಡಲು ಆಗುತ್ತಿಲ್ಲ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ 50, ಕೋಟಿ 100 ಕೋಟಿ ಆಫರ್ ಬಗ್ಗೆ ಮಾತಾನಾಡುತ್ತಿದ್ದಾರೆ.
ಈ ಸಮಯದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ರಾಜಶೇಖರ ನಾಗಪ್ಪ ನವರು. ಮಾಜಿ ಶಾಸಕರಾದ ಶ್ರೀಯುತ ಮಾಡಾಳ್ ವಿರೂಪಾಕ್ಷಪ್ಪ ನವರು. ಮಾಜಿ ಶಾಸಕರಾದ ಬಸವರಾಜನಾಯ್ಕ್ ರವರು. ಮಾಜಿ ಶಾಸಕರಾದ ಪ್ರೋ ಲಿಂಗಣ್ಣ ನವರು. ಮಾಜಿಶಾಸಕರಾದ ರಾಜೇಶ್ ರವರು. ಮಾಜಿ ಶಾಸಕರಾದ ರಾಮಚಂದ್ರಪ್ಪ ನವರು. ಮಾಜಿ ಶಾಸಕರಾದ ಅರುಣ್ ಕುಮಾರ್ ಪೂಜಾರ್ ರವರು. ಮಾಜಿ ಮುಖ್ಯ ಸಚಕೇತರಾದ ಶಿವಯೋಗಿ ಸ್ವಾಮಿ ರವರು. ಬಿಜೆಪಿ ಮುಖಂಡರಾದ ಮರಿಸ್ವಾಮಿ ರವರು. ಬಿಜೆಪಿ ಮುಖಂಡರುಗಳಾದ ಮಾಡಾಳ್ ಮಲ್ಲಿಕಾರ್ಜುನ್ ರವರು,ಲೋಕಿಕೆರೆ ನಾಗರಾಜ್ ರವರು. ಬಿ.ಜಿ.ಅಜಯ್ ಕುಮಾರ್ ರವರು, ಚಂದ್ರಶೇಖರ್ ಪೂಜಾರ್ ರವರು. ಅಣಬೇರು ರಾಜಣ್ಣ ನವರು. ಸತೀಶ್ ರವರು. ಕಲ್ಲೇಶ್ ರವರು. ಅಲೂರು ಲಿಂಗರಾಜ್ ರವರು. ಧನಂಜಯ ಕಡ್ಲೇಬಾಳು. ಅನಿಲ್ ಕುಮಾರ್. ಅಣ್ಣೇಶ್ ಐರಾಣಿ. ರವರು ಕಾರ್ಯಕರ್ತರು ರೈತರು ಅಭಿಮಾನಿಗಳು ಭಾಗವಹಿಸಿದ್ದರು.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications