BJP President: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರಗೆ ಕೊಕ್? ಈ ನಾಯಕರ ಹೆಸರೇ ಫೈನಲ್?
ಬೆಂಗಳೂರು, ಜೂನ್ 27: ರಾಜ್ಯ ರಾಜಕಾರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಗುಸು ಗುಸು ಚರ್ಚೆ ನಡೆಯುತ್ತಿದೆ. ಬಿಜೆಪಿ ಹೈಕಮಾಂಡ್ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರನ್ನ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ದಿನದಿಂದಲೂ ಬಿಜೆಪಿ ಮನೆಯೊಂದು ಮೂರು ಬಾಗಿಲಾಗಿದ್ದು, ಯತ್ನಾಳ್ ಹಾಗೂ ವಿಜಯೇಂದ್ರ ಬಣದ ನಡುವೆ ಬಣ ಬಡಿದಾಟ ತಾರಕಕ್ಕೇರಿದೆ. ಬಹುದಿನಗಳಿಂದ ಕರ್ನಾಟಕ ಬಿಜೆಪಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಡುವಿನ ತಿಕ್ಕಾಟ ಜೋರಾಗಿದ್ದು, ಬಹಿರಂಗವಾಗಿ ಸ್ವಪಕ್ಷದವರ ವಿರುದ್ಧ ಕಿಡಿಕಾರುತ್ತಿದ್ದ ಯತ್ನಾಳ್ ಅವರನ್ನ ಉಚ್ಚಾಟಿಸಲಾಗಿತ್ತು. ಆದರೆ, ಇದೀಗ ಮತ್ತೆ ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿದೆ.
ಕಳೆದ ವಾರ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಕೊಟ್ಟಿದ್ದರು. ಈ ವೇಳೆ ರಾಜ್ಯ ಬಿಜೆಪಿ ನಾಯಕರ ಜೊತೆಗೆ ಸುದೀರ್ಘ ಚರ್ಚೆ ನಡೆಸಿದ್ದರು ಎಂದು ಮೂಲಗಳು ತಿಳಿಸಿದ್ದವು. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಅಧಿಕೃತ ಘೋಷಣೆಗೆ ಈಗಾಗಲೇ ದಿನಗಣನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಾಕಷ್ಟು ಕಸರತ್ತುಗಳು ನಡೆದಿವೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದು, ಸರ್ಕಾರದ ವಿರುದ್ದ ಹೋರಾಟ ನಡೆಸುವ ಬಿಜೆಪಿ ಪಾಳಯದಲ್ಲಿಯೇ ಸರಿಯಾದ ಹೊಂದಾಣಿಕೆ ಇಲ್ಲದಂತಾಗಿದೆ. ಹೀಗಾಗಿ ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷರ ಬದಲಾವಣೆಗೆ ಮುಂದಾಗಿದೆ.

ನೂತನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡುವ ಪ್ರಯತ್ನದ ಜೊತೆಗೆ ರಾಜ್ಯ ನಾಯಕರಿಂದ ವರಿಷ್ಠರು ಮಾಹಿತಿ ಸಂಗ್ರಹದ ಕೆಲಸವನ್ನೂ ನಡೆಸಿದ್ದಾರೆ. ಈ ಮಧ್ಯೆ ಮೂರು ದಿನಗಳಿಂದ ದೆಹಲಿಯಲ್ಲೇ ವಿಪಕ್ಷ ನಾಯಕ ಅಶೋಕ್ ಇರುವುದು ತೀವ್ರ ಕುತೂಹಲವನ್ನು ಹೆಚ್ಚಿಸಿದೆ. ಇನ್ನೂ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಬದಲಾಗಿ ಬೇರೆಯವರನ್ನು ನೇಮಿಸಲು ಬಿಜೆಪಿ ಹೈಕಮಾಂಡ್ ಕಳೆದ ಆರು ತಿಂಗಳ ಹಿಂದೆ ಗಂಭೀರ ಚಿಂತನೆ ನಡೆಸಿತ್ತು ಎನ್ನಲಾಗಿದೆ.
ಇನ್ನೂ ರಾಜ್ಯಾಧ್ಯಕ್ಷರ ಆಯ್ಕೆ ವಿಚಾರವಾಗಿ ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದ್ದು, ಕಳೆದ ಆರು ತಿಂಗಳಿನಿಂದ ಹಲವು ಮಾತುಕತೆಗಳನ್ನ ಬಿಜೆಪಿ ಹೈಕಮಾಂಡ್ ನಡೆಸುತ್ತಿದ್ದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ ಮಾಡಿದ್ದ ಮಾಜಿ ಮುಖ್ಯಮಂತ್ರಿಯೊಬ್ಬರು ಈ ಬಗ್ಗೆ ಮಾಹಿತಿ ಬಹಿರಂಗಪಡಿಸಿದ್ದಾರೆ. ಇನ್ನೂ ಕರ್ನಾಟಕ ಮಾತ್ರವಲ್ಲದೇ ಬಾಕಿ ಇರುವ ಆರೇಳು ರಾಜ್ಯ ಘಟಕಗಳ ಅಧ್ಯಕ್ಷರ ಘೋಷಣೆ ಮಾಡಲಾಗುವುದು ಎಂದು ತಿಳಿದು ಬಂದಿದೆ.
ಮೊದಲಿನಿಂದಲೂ ಹಿರಿಯ ಲಿಂಗಾಯತ ನಾಯಕನಾದ ವಿ ಸೋಮಣ್ಣ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣೀತ್ತು. ಆದರೆ, ಬಿಜೆಪಿ ಹೈಕಮಾಂಡ್ ವಿ ಸೋಮಣ್ಣ ಅವರಿಗೆ ಕೇಂದ್ರ ಸಚಿವ ಸ್ಥಾನವನ್ನ ನೀಡಿದೆ. ಇದೀಗ ಕೇಂದ್ರ ಸಚಿವ ಸ್ಥಾನದ ಜೊತೆಗೆ ರಾಜ್ಯಾಧ್ಯಕ್ಷ ಸ್ಥಾನ ಎಂದಾದರೆ ಒಪ್ಪಿಕೊಳ್ಳಬಹುದು ಎಂಬ ಮನಸ್ಥಿತಿಗೂ ಸೋಮಣ್ಣ ತಲುಪಿದ್ದರು. ಆದರೆ, ವಿ ಸೋಮಣ್ಣ ಅವರಿಗೆ ಕೇಂದ್ರ ಸಚಿವರಾಗಿಯೇ ಒಳ್ಳೆಯ ಕೆಲಸ ಮಾಡುವಂತೆ ಹೈಕಮಾಂಡ್ ಸೂಚಿಸಿದೆ ಎನ್ನಲಾಗಿದೆ.
ಇನ್ನೂ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಹೆಸರಿಗೆ ಪರ್ಯಾಯವಾಗಿ ಹಿಂದುಳಿದ ವರ್ಗಗಳ ಕೋಟಾದಲ್ಲಿ ವಿ. ಸುನೀಲ್ ಕುಮಾರ್, ಲಿಂಗಾಯತ ಮತ್ತು ಪಂಚಮಸಾಲಿ ಕೋಟಾದಲ್ಲಿ ಅರವಿಂದ ಬೆಲ್ಲದ್ ಮತ್ತು ದಲಿತ ಕೋಟಾದಲ್ಲಿ ಅರವಿಂದ ಲಿಂಬಾವಳಿ ಅವನ್ನು ಪರಿಗಣಿಸಬಹುದು ಎಂಬ ಅಭಿಪ್ರಾಯವನ್ನೂ ಬಿಜೆಪಿ ಹೈಕಮಾಂಡ್ ಹೊಂದಿದೆ ಎಂಬುದನ್ನು ಮಾಜಿ ಮುಖ್ಯಮಂತ್ರಿ ತಿಳಿಸಿದ್ದಾರೆ. ಇತ್ತ ಯುವ ನಾಯಕರನ್ನ ಹಾಗೂ ಪಕ್ಷದಲ್ಲಿನ ಹಿರಿಯರನ್ನ ಒಗ್ಗೂಡಿಸಿಕೊಂಡು ಹೋಗುವ ಚಾಣಾಕ್ಷತನ ಇರುವುದು ವಿ ಸುನೀಲ್ ಕುಮಾರ್ ಅವರಿಗೆ ಎಂಬ ಮಾತುಗಳು ಕೇಳಿ ಬಂದಿದ್ದು, ಈಗಾಗಲೇ ಬಿಜೆಪಿ ವರಿಷ್ಠರು ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ವಿ ಸುನೀಲ್ ಕುಮಾರ್ ಅವರ ಜೊತೆಗೆ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications