ಕಟಪಾಡಿಯಲ್ಲಿ ಬಿಲ್ಲವರ ಕ್ರೀಡಾಕೂಟಕ್ಕೆ ಚಾಲನೆ
ಉಡುಪಿ, ಜೂನ್ 2 : ಕ್ರೀಡಾಕೂಟಗಳು ಯುವಜನರ ನಡುವಿನ ಬಾಂಧವ್ಯ ಬೆಸೆಯುವ ವೇದಿಕೆಯಾಗಬೇಕು, ಯುವಜನರನ್ನು ಒಗ್ಗೂಡಿಸುವುದರಿಂದ ಅವರ ನಡುವಿನ ಸಂವಹನ ಉತ್ತಮಗೊಂಡು ಪರಸ್ಪರ ಅರ್ಥೈಸುವಿಕೆಗೆ ಸಹಾಯವಾಗುತ್ತದೆ ಎಂದು ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ಬಿಲ್ಲವರ ಪರಿಷತ್ ಕಟಪಾಡಿ ಪ್ರಾಯೋಜಕತ್ವದಲ್ಲಿ ಭಾನುವಾರ ಕಟಪಾಡಿ ಪಳ್ಳಿಗುಡ್ಡೆ ನೆಹರೂ ಮೈದಾನದಲ್ಲಿ ಬಿಲ್ಲವ ಯುವಕ ಯುವತಿಯರಿಗಾಗಿ ನಡೆದ ಕ್ರಿಕೆಟ್ ಮತ್ತು ಥ್ರೋಬಾಲ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಗಳು ಕೇವಲ ಸ್ಪರ್ಧೆಗೆ ಸೀಮಿತವಾಗದೆ, ಯುವಕರ ನಡುವಿನ ಉತ್ತಮ ವಿಚಾರ ವಿನಿಮಯಕ್ಕೆ ವೇದಿಕೆಯಾಗಬೇಕು ಎಂದು ಅಭಿಪ್ರಾಯಪಟ್ಟರು.

ಕ್ರೀಡಾಕೂಟಗಳು ಯುವಜನರ ನಡುವಿನ ಸ್ನೇಹ, ಬಾಂಧವ್ಯ ವೃದ್ಧಿಗೆ ವೇದಿಕೆಯಾಗಬೇಕು. ಕ್ರೀಡಾಕೂಟಗಳ ಮೂಲಕ ಯುವಜನರನ್ನು ಒಟ್ಟುಗೂಡಿಸುವುದರಿಂದ ಅವರ ನಡುವಿನ ಸಂವಹನ ಉತ್ತಮಗೊಂಡು ಪರಸ್ಪರ ಅರ್ಥೈಸುವಿಕೆಗೆ ಸಹಾಯಕವಾಗುತ್ತದೆ ಎಂದು ಸಚಿವರು ಹೇಳಿದರು.
ಯಾವುದೇ ಸಮಾಜದ ಸಂಘಟನೆಯಲ್ಲಿ ಯುವಕರು ಮತ್ತು ಮಹಿಳೆಯರು ಮುಂಚೂಣಿಯಲ್ಲಿ ಕಾಣಿಸಿಕೊಳ್ಳುವುದು ವಿರಳ. ಯುವಕರು ಮತ್ತು ಮಹಿಳೆಯರು ಸಂಘಟನೆಗಳಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಲು ಇಂತಹ ಕ್ರೀಡಾಕೂಟಗಳನ್ನು ಆಯೋಜಿಸುವುದು ಉತ್ತಮ ವಿಚಾರವಾಗಿದೆ ಎಂದು ತಿಳಿಸಿದರು.
ಕಟಪಾಡಿ ಗ್ರಾಮಪಂಚಾಯಿತಿ ಅಧ್ಯಕ್ಷ ವಿನಯ ಬಳ್ಳಾಲ್, ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಶಾಂತ್ ಜತ್ತನ್ನ, ಜಿಪಂ ಸದಸ್ಯರಾದ ಕಟಪಾಡಿ ಶಂಕರ ಪೂಜಾರಿ, ಗೀತಾಂಜಲಿ ಸುವರ್ಣ, ಬಿಲ್ಲವ ಮುಖಂಡರಾದ ದಯಾನಂದ ಬಂಗೇರ, ಶ್ರೀಕರ ಸುವರ್ಣ, ಹರಿಶ್ಚಂದ್ರ ಅಮೀನ್, ಶೋಭಾ ಹರಿಯಪ್ಪ ಪೂಜಾರಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications