ವಿರಾಜಪೇಟೆಯಿಂದ ಈ ಬಾರಿ ಅಂಕಣಕಾರ ಸಂತೋಷ್ ಕಣಕ್ಕೆ?
ವಿರಾಜಪೇಟೆ, ಮಾರ್ಚ್ 14: ಭಾರತೀಯ ಜನತಾ ಪಕ್ಷ(ಬಿಜೆಪಿ) ಈ ಬಾರಿ ಟಿಕೆಟ್ ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ಭಾರಿ ಗೊಂದಲದಲ್ಲಿದೆ. ಹಾಲಿ ಶಾಸಕರು, ಮಾಜಿ ಸಚಿವರು, ಸಂಸದರು, ಎಂಎಲ್ಸಿಗಳು, ಬಿಜೆಪಿ ಬೆಂಬಲಿತ ಸ್ವಾಮೀಜಿಗಳು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಈಗ ಈ ಪಟ್ಟಿಗೆ ಜನಪ್ರಿಯ ಅಂಕಣಕಾರ ಸಂತೋಷ್ ತಮ್ಮಯ್ಯ ಅವರ ಹೆಸರು ಸೇರ್ಪಡೆಗೊಂಡಿದೆ.
ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಆದರೆ, ಈ ಬಗ್ಗೆ ಸ್ಪಷ್ಟನೆ ಕೋರಿ ಅವರನ್ನು ಸಂಪರ್ಕಿಸಿದಾಗ ಪ್ರತಿಕ್ರಿಯಿಸಿ, ಟಿಕೇಟ್ ಗೆ ಸಂಬಂಧಿಸಿದಂತೆ ನನಗೆ ಯಾವುದೇ ಮಾಹಿತಿ ಇಲ್ಲ. ನಾನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಒಬ್ಬ ಸ್ವಯಂಸೇವಕ ಮತ್ತು ಬಿಜೆಪಿ ಕಾರ್ಯಕರ್ತ ಅಷ್ಟೆ. ನನಗೆ ಯಾವುದೇ ರಾಜಕೀಯ ಆಕಾಂಕ್ಷೆಯೂ ಇಲ್ಲ ಎಂದರು.
ಕೊಡಗಿನ ವಿರಾಜಪೇಟೆ ಕ್ಷೇತ್ರದಿಂದ ಹೊಸ ದಿಗಂತ ಪತ್ರಿಕೆಯ ಅಂಕಣಕಾರ ಸಂತೋಷ್ ತಮ್ಮಯ್ಯ ಅವರಿಗೆ ಬಿಜೆಪಿ ಟಿಕೇಟ್ ಬಹುತೇಕ ಖಚಿತ ಎಂಬ ಸುದ್ದಿ ಹರಿದಾಡುತ್ತಿದೆ.
ಚುನಾವಣಾ ಪ್ರಚಾರ ಚಿತ್ರಸಂಪುಟ : ಬಿಜೆಪಿ | ಕಾಂಗ್ರೆಸ್ | ಜೆಡಿಎಸ್

ಈ ಬಾರಿ ಬಿಜೆಪಿಯಿಂದ ಹೊಸ ಮುಖಗಳಿಗೆ ಟಿಕೆಟ್ ನೀಡುವ ಸಾಧ್ಯತೆಗಳಿರುವುದರಿಂದ ಸಂತೋಷ್ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಹೆಚ್ಚಿದೆ.
ಸಂತೋಷ್ ಆಯ್ಕೆಗೆ ಕಾರಣವಾದ ಅಂಶಗಳು:
* ಪತ್ರಿಕೋದ್ಯಮದಲ್ಲಿ ದಶಕಕ್ಕೂ ಹೆಚ್ಚು ಕಾಲ ಸಂತೋಷ್ ಅವರಿಗಿರುವ ಅನುಭವ.
* ದೇಶಪ್ರೇಮ, ಭಾರತೀಯ ಸೇನೆ, ಯೋಧರ ಕುರಿತು ಬಗ್ಗೆ ತಮ್ಮ ಅಂಕಣಗಳ ಮೂಲಕ ಯುವ ಪೀಳಿಗೆಯಲ್ಲಿ ಜಾಗೃತಿ ಮೂಡಿಸಿರುವುದು
* ಕೊಡವ ಭಾಷೆಯಲ್ಲೂ ಲೇಖನಗಳನ್ನು ಬರೆದು, ಸ್ಥಳೀಯರಿಗೆ ಇನ್ನಷ್ಟು ಹತ್ತಿರವಾಗಿರುವುದು.
* ಸಿದ್ದರಾಮಯ್ಯ ಅವರ ಸರ್ಕಾರದ ವಿವಾದಿತ 'ಟಿಪ್ಪು ಜಯಂತಿ' ಬಗ್ಗೆ ಸರಣಿ ಲೇಖನಗಳನ್ನು ಬರೆದು ಕೊಡವರ ಸ್ವಾಭಿಮಾನಕ್ಕೆ ಬಲ ತಂದಿದ್ದು, ಇವೇ ಮುಂತಾದ ಕಾರಣಗಳನ್ನು ಬಿಜೆಪಿ ಪರಿವೀಕ್ಷಕರು ಪರಿಗಣಿಸಿ, ಸಂತೋಷ್ ಅವರ ಹೆಸರನ್ನು ಸೂಚಿಸಿರುವ ಸಾಧ್ಯತೆಗಳಿವೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಸದ್ಯಕ್ಕೆ ಬಿಜೆಪಿ ಇನ್ನೂ ಅಧಿಕೃತ ಪಟ್ಟಿಯನ್ನು ಪ್ರಕಟಿಸಿಲ್ಲ. ಮಾರ್ಚ್ 22ರ ನಂತರ ಈ ಬಗ್ಗೆ ಸುದ್ದಿ ಸಿಗುವ ಸಾಧ್ಯತೆಯಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications