Viral Video: ಬ್ಯಾಂಕ್: ಕನ್ನಡದಲ್ಲಿ ಮಾತನಾಡಿ ಎಂದ ಗ್ರಾಹಕ: ಕಂಪನಿಗೆ ಕರೆ ಮಾಡಿ ದೂರು ನೀಡಿದ ಸಿಬ್ಬಂದಿ
ಬೆಳಗಾವಿ: ಕನ್ನಡದಲ್ಲಿ ವ್ಯವಹರಿಸಿ ಎಂದು ಬ್ಯಾಂಕ್ ಸಿಬ್ಬಂದಿಗೆ ಮನವಿ ಮಾಡಿದ ಗ್ರಾಹಕನ ಮೇಲೆಯೇ ಅವರು ಕೆಲಸ ಮಾಡುತ್ತಿದ್ದ ಕಂಪನಿಗೆ ದೂರು ನೀಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಬ್ಯಾಂಕ್ ಆಫ್ ಬರೋಡಾ ಸಿಬ್ಬಂದಿ ಕನ್ನಡದಲ್ಲಿ ವ್ಯವಹರಿಸಲು ಮನವಿ ಮಾಡಿದ ಗ್ರಾಹಕರಿಗೆ ತೊಂದರೆ ಕೊಟ್ಟಿದ್ದಾರೆ ಎನ್ನಲಾಗಿದೆ. Belagavi - ಬೆಳಗಾವಿ ಎನ್ನುವ ಖಾತೆಯಿಂದ ಈ ವಿಷಯಕ್ಕೆ ಸಂಬಂಧಿಸಿದ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗಿದೆ.
ಕರ್ನಾಟಕದ ಬ್ಯಾಂಕ್ಗಳಲ್ಲಿ ಅಲ್ಲಿನ ಸಿಬ್ಬಂದಿ ಹಾಗೂ ಮ್ಯಾನೇಜರ್ಗಳು ಹಿಂದಿ ಸೇರಿದಂತೆ ಅನ್ಯಭಾಷೆಯಲ್ಲಿ ಮಾತನಾಡುತ್ತಿರುವ ವಿಡಿಯೋಗಳು ವೈರಲ್ ಆಗಿರುವುದು ಇದೆ. ಆದರೆ ಬ್ಯಾಂಕ್ನ ಸಿಬ್ಬಂದಿ ಗ್ರಾಹಕರ ಕಂಪನಿಗೆ ದೂರು ನೀಡುವುದು ಎಲ್ಲಿಯಾದರೂ ಕೇಳಿದ್ದಿರಾ ? ಅಂತಹ ಒಂದು ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇದಕ್ಕೆ ಕನ್ನಡಿಗರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಘಟನೆಯ ಹಿನ್ನೆಲೆ ಏನು
ಕನ್ನಡಿಗ ಅನಿಲ್ ದಡ್ಡಿಮನಿ ಅವರು ಬೆಳಗಾವಿಯ ಉದ್ಯಮಬಾಗಿನ ಬ್ಯಾಂಕ್ ಆಫ್ ಬರೋಡಾಗೆ ಭೇಟಿ ನೀಡಿದ್ದು, ಬ್ಯಾಂಕ್ನ ಸಿಬ್ಬಂದಿಗೆ ಕನ್ನಡದಲ್ಲಿ ವ್ಯವಹರಿಸುವಂತೆ ಮನವಿ ಮಾಡಿದ್ದಾರೆ. ಆದರೆ ಅಲ್ಲಿಯ ಸಿಬ್ಬಂದಿ ಕನ್ನಡದಲ್ಲಿ ಮಾತನಾಡಿಲ್ಲ. ಕನ್ನಡದಲ್ಲಿ ಸೇವೆ ಕೊಡುವಂತೆ ಅನಿಲ್ ದಡ್ಡಿಮನಿ ಅವರು ಕೇಳಿಕೊಂಡಿದ್ದಾರೆ. ಆದರೆ, ಈ ಬ್ಯಾಂಕಿನ ಸಿಬ್ಬಂದಿ ಅನಿಲ್ ದಡ್ಡಿಮನಿ ಅವರು ಕೆಲಸ ಮಾಡುವ ಕಂಪನಿಗೆ ಕರೆ ಮಾಡಿದ್ದ ಬ್ಯಾಂಕ್ ಸಿಬ್ಬಂದಿ ಅವರ ಬಗ್ಗೆ ಆರೋಪ ಮಾಡಿದ್ದಾರೆ ಎಂದು ಹೇಳಲಾಗಿದೆ.
ಇದರಿಂದ ಆ ಕಂಪನಿಯ ಎಚ್ಆರ್ ಅನಿಲ್ ದಡ್ಡಿಮನಿ ಅವರಿಗೆ ಕರೆ ಮಾಡಿ, ವಿಚಾರಿಸಿದ್ದಾರೆ. ಇದರಿಂದ ಅನಿಲ್ ದಡ್ಡಿಮನಿ ಅವರಿಗೆ ಉದ್ಯೋಗದಲ್ಲೂ ಸಂಕಷ್ಟ ಎದುರಾಗಿದೆ. ಈ ವಿಚಾರವಾಗಿ ಬ್ಯಾಂಕಿಗೆ ತೆರಳಿ ಅನಿಲ್ ದಡ್ಡಿಮನಿ ಅವರು ಪ್ರಶ್ನೆ ಮಾಡಿದ್ದಾರೆ. ಕನ್ನಡಪರ ಹೋರಾಟಗಾರರು ಬ್ಯಾಂಕಿಗೆ ಆಗಮಿಸುತ್ತಿದ್ದಂತೆ ಸ್ಥಳಕ್ಕೆ ಬಂದ ಪೋಲೀಸರು, ಪರಿಸ್ಥಿತಿಯನ್ನಾ ಶಾಂತಗೊಳಿಸಿದ್ದಾರೆ.
ಅಲ್ಲದೇ ಈ ಬ್ಯಾಂಕಿನ ಸಿಬ್ಬಂದಿ ಕನ್ನಡದಲ್ಲಿ ಗ್ರಾಹಕರಿಗೆ ಸೇವೆ ಕೊಡದೆ ಇರುವುದು ಮೊದಲನೇ ತಪ್ಪು, ಇದನ್ನಾ ಪ್ರಶ್ನೆ ಮಾಡಿದ ಅನಿಲ್ ದಡ್ಡಿಮನಿ ಅವರು ಕೆಲಸ ಮಾಡುವ ಕಂಪನಿಗೆ ಆರೋಪ ಮಾಡಿದ್ದು ಎರಡನೇ ತಪ್ಪು. ಗ್ರಾಹಕನ ಜೊತೆಗೆ ಅನುಚಿತವಾಗಿ ವರ್ತನೆ ಮಾಡಿದ ಈ ಬ್ಯಾಂಕ್ ಸಿಬ್ಬಂದಿಯನ್ನಾ ಕೂಡಲೇ ಅಮಾನತ್ತು ಮಾಡಬೇಕು ಎಂದು ಕನ್ನಡಪರ ಹೋರಾಟಗಾರರು ಆಗ್ರಹಿಸಿದ್ದಾರೆ.
ಕ್ಷಮೆಯಾಚಿಸಿದ ಬ್ಯಾಂಕ್ ಸಿಬ್ಬಂದಿ
ಇನ್ನು ಈ ಬ್ಯಾಂಕ್ನ ಸಿಬ್ಬಂದಿಯು ಕನ್ನಡದಲ್ಲಿ ವ್ಯವಹರಿಸುವಂತೆ ಕೇಳಿದ ಗ್ರಾಹಕನ ಮೇಲೆಯೇ ಅವರು ಕೆಲಸ ಮಾಡುತ್ತಿದ್ದ ಕಂಪನಿಗೆ ದೂರು ನೀಡಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಬ್ಯಾಂಕ್ನ ಸಿಬ್ಬಂದಿಯ ನಡೆಯನ್ನು ಕನ್ನಡಪರ ಹೋರಾಟಗಾರರು ವಿರೋಧಿಸಿದ್ದು, ಬೆಳಗಾವಿಯ ಉದ್ಯಮಬಾಗಿನ ಬ್ಯಾಂಕ್ ಆಫ್ ಬರೋಡಾದ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಇದಾದ ಬೆನ್ನಲ್ಲೇ ಬ್ಯಾಂಕ್ನ ಸಿಬ್ಬಂದಿ ಕನ್ನಡಿಗರ ಕ್ಷಮೆಯಾಚನೆ ಮಾಡಿದ್ದಾರೆ.
-
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
Political Trends: ನಿಂದಾ ರಾಜಕೀಯದ ದಾರಿ ತಪ್ಪಿದ ಪ್ರಜಾತಂತ್ರ: ಯಾವ ಮನೆಯ ಸಾಸಿವೆ ತರ ಹೊರಟಿದ್ದೀರಿ: ರಾಜಾರಾಂ ತಲ್ಲೂರು ಬರಹ -
Bangladesh Bus Tragedy: ನದಿಗೆ ಉರಳಿದ 50 ಪ್ರಯಾಣಿಕರಿದ್ದ ಬಸ್, ಹಲವರು ಸಾವು; ಎದೆ ನಡುಗಿಸೋ ವಿಡಿಯೋ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ











Click it and Unblock the Notifications