Video Viral: ಗಂಗಾವತಿಯಲ್ಲಿ ವಿಲಕ್ಷಣ ಕಳ್ಳನ ಹಾವಳಿ: ಮಹಿಳೆಯರ ಒಳ ಉಡುಪು ಕದಿಯುವ ವ್ಯಕ್ತಿ ದೃಶ್ಯಗಳು ಸೆರೆ
ಕೊಪ್ಪಳ: ಹಗಲು ಹೊತ್ತು ಮನೆ ಆವರಣ, ಕಾಂಪೌಂಡ್ ಮೇಲೆ ಒಣಹಾಕಿದ್ದ ಮಹಿಳೆಯ ಒಳಉಡುಪುಗಳನ್ನು ಗಮನಿಸುತ್ತಿದ್ದ ಆಸಾಮಿ ರಾತ್ರಿಯಾಗುತ್ತಿದ್ದಂತೆ ಯಾರಿಗು ಗೊತ್ತಾಗುತ್ತಿದ್ದಂತೆ ಕಳ್ಳತನ ಮಾಡಿದ್ದಾನೆ. ಈ ವಿಲಕ್ಷಣ ಘಟನೆ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ನಡೆದಿದೆ. ಈ ಕೃತ್ಯದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ನಾಗರಿಕರು ಈ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
2-3 ದಿನಗಳಿಂದ ಬಟ್ಟೆಗಳು ಕಾಣೆ, ಕೃತ್ಯ ಬೆಳಕಿಗೆ
ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿರುವ ವಿಕೃತ ವ್ಯಕ್ತಿಯ ಚಲನವಲನಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ತಕ್ಷಣವೇ ಈತನ ವಿರುದ್ಧ ಪೊಲೀಸ್ ಕ್ರಮ ಕೈಗೊಳ್ಳುವಂತೆ ಒತ್ತಾಯ ಹೆಚ್ಚಾಗಿದೆ. ಕಳೆದ 2-3 ದಿನಗಳಿಂದ ತಡರಾತ್ರಿ ಮನೆಯ ಕಾಂಪೌಂಡ್ಗಳ ಮೇಲೆ ಹತ್ತಿ ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿರುವುದು ಸಾಬೀತಾಗಿದ್ದು, ಆತಂಕಕಾರಿ ಮತ್ತು ವಿಚಿತ್ರ ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ವಿಡಿಯೋವನ್ನು ಎಕ್ಸ್ನಲ್ಲಿ ಕರ್ನಾಟಕ ಪೋರ್ಟ್ಫೋಲೀಯೋ (@karnatakaportf) ಹಂಚಿಕೊಂಡಿದೆ.

ಕತ್ತಲಾದ ನಂತರ ಮನೆಗಳ ಮುಂದೆ ಬಂದು ಮಹಿಳೆಯರ ಒಳ ಉಡುಪುಗಳನ್ನು ಒಯ್ಯುವುದು ವರದಿ ಆಗಿದೆ. ಈ ವಿಚಾರ ನಿವಾಸಿಗಳಲ್ಲಿ ಅದರಲ್ಲೂ ಮಹಿಳೆಯರಲ್ಲಿ ಹೆಚ್ಚಿನ ಆತಂಕ ಮೂಡಿಸಿದೆ. ಹಗಲು ಹೊತ್ತು ಈ ವ್ಯಕ್ತಿ ಉದ್ಯಮಿಗಳು, ಗಣ್ಯ ವ್ಯಕ್ತಿಗಳ ಮನೆಗಳಲ್ಲಿ ಎಲ್ಲೆಲ್ಲಿ ಬಟ್ಟೆ ಒಣ ಹಾಕಿರುತ್ತಾರೆ ಎಂಬುದನ್ನು ಗುರುತಿಟ್ಟುಕೊಂಡು ರಾತ್ರಿ ವೇಳೆ ಯಾರು ಇಲ್ಲದ್ದನ್ನು ನೋಡಿಕೊಂಡು ಒಳಉಡುಪುಗಳನ್ನು ಕದಿಯುತ್ತಿದ್ದಾನೆ ಎಂಬುದು ವರದಿ ಆಗಿದೆ.
ಇದು ಕಳ್ಳತನವಲ್ಲ, ವಿಕೃತ ಮನಸ್ಥಿತಿ
ಮನೆ ಮುಂದೆ ಒಣ ಹಾಕಿದ ಬಟ್ಟೆಗಳು ಕಾಣದಿದ್ದಾಗ ಅನುಮಾನಗೊಂಡ ಮನೆ ಮಾಲೀಕರು ಸಿಸಿಟಿ ಪರಿಶೀಲಿಸಿದ್ದಾರೆ. ಆಗ ರಾತ್ರಿ ವ್ಯಕ್ತಿ ಕಾಂಪೌಂಡ್ ಬಳಿ ಬಂದು ಬಟ್ಟೆ ಕದಿಯುವ ದೃಶ್ಯಗಳು ಸೆರೆಯಾಗಿದ್ದು ಕಂಡು ದಂಗಾಗಿದ್ದಾರೆ. ಈ ವಿಡಿಯೋಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದನ್ನು ಕಳ್ಳತನವೆಂದು ಭಾವಿಸದೇ ವಿಕೃತ ಮನಸ್ಥಿತಿಯ ಸೂಚನೆ ಎಂದು ಜನರು ಕಳವಳ ವ್ಯಕ್ತಪಡಿಸಿದ್ದಾರೆ. ಇದು ಮಹಿಳೆಯ ಸುರಕ್ಷತೆ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡಿದ್ದು, ಇಂತಹ ಘಟನೆ ತಡೆಯುವಂತೆ ಪೊಲೀಸರಿಗೆ ತಿಳಿಸಿದ್ದಾರೆ.
CCTV Captures Pervert Stealing Women’s Undergarments in Gangavathi Karnataka , Residents Demand Immediate Police Action!
— Karnataka Portfolio (@karnatakaportf) March 31, 2026
A disturbing and bizarre incident has come to light in Gangavathi town, Koppal district, over the past 2–3 days, where a man has been stealing women’s… pic.twitter.com/oUnSnACMGh
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್













Click it and Unblock the Notifications