ಕೃಷಿ ಕಾಯ್ದೆಗಳ ವಿರುದ್ಧದ ವಿರೋಧ ತಗ್ಗಿಸಲು ಬಿಜೆಪಿಯ ಭಾರಿ ತಂತ್ರ!
ಬೆಂಗಳೂರು, ಫೆ. 07: ಕೇಂದ್ರದ ಕೃಷಿ ಸುಧಾರಣಾ ಕಾಯಿದೆಗಳ ಕುರಿತು ಜನಜಾಗೃತಿ ಮೂಡಿಸಲು ಇನ್ನು 10 ದಿನಗಳ ಒಳಗಾಗಿ ರಾಜ್ಯದಲ್ಲಿ ಜನಜಾಗೃತಿ ವರ್ಚುವಲ್ ಸಭೆಗಳನ್ನು ನಡೆಸಲಾಗುವುದು ಎಂದು ಡಿಸಿಎಂ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರು ತಿಳಿಸಿದರು. ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಠ ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ "ರಾಜ್ಯ ಮಟ್ಟದ ಸಾಮಾಜಿಕ ಜಾಲತಾಣ ಕಾರ್ಯಾಗಾರ ದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕೃಷಿ ಸುಧಾರಣಾ ಮಸೂದೆಗಳ ಕುರಿತು ಪಟ್ಟಭದ್ರ ಹಿತಾಸಕ್ತಿಗಳು ತಪ್ಪು ಮಾಹಿತಿ ನೀಡುತ್ತಿವೆ. ಮಸಿ ಬಳಿಯುವ ಕೆಲಸ ನಡೆದಿದೆ. ಇದನ್ನು ಹೋಗಲಾಡಿಸುವ ಅಗತ್ಯವಿದೆ ಎಂದರು.
ಹೊಸ ಕಾಯಿದೆಗಳಿಂದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಹೊಸತನ ಬರಲಿದೆ. ಬಹುಹಂತದ ಮಾರಾಟ ವ್ಯವಸ್ಥೆಯ ಬದಲಾಗಿ ವ್ಯಾಪಾರಿ- ರೈತರ ನಡುವೆ ನೇರವಾಗಿ ವ್ಯವಹಾರ ನಡೆದು ರೈತರ ಆದಾಯ ಹೆಚ್ಚಲಿದೆ ಎಂದು ಡಾ. ಅಶ್ವಥ್ ನಾರಾಯಣ ವಿವರಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವ ಮತ್ತು ದೂರದೃಷ್ಟಿಯ ಚಿಂತನೆಗಳಿಂದ ದೇಶವು ಭ್ರಷ್ಟಾಚಾರ, ಹಗರಣ ಮುಕ್ತವಾಗಿ ಮುನ್ನಡೆದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದ ಸರಕಾರವು ರಾಜ್ಯವನ್ನು ಸರ್ವಾಂಗೀಣ ಪ್ರಗತಿಯತ್ತ ತೆಗೆದುಕೊಂಡು ಹೋಗುತ್ತಿದೆ ಎಂದು ವಿವರಿಸಿದರು.

ರಾಜ್ಯ ಸರಕಾರದ ಯೋಜನೆಗಳ ವಿವರವನ್ನು ಇನ್ನಷ್ಟು ಸಮಗ್ರ ಮತ್ತು ಪರಿಣಾಮಕಾರಿಯಾಗಿ ಮುಂದಿನ ದಿನಗಳಲ್ಲಿ ವೆಬ್ಸೈಟ್ಗಳ ಮೂಲಕ ಒದಗಿಸಲಾಗುವುದು. 2023ರಲ್ಲಿ ಪಕ್ಷವು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೇರಲು ಕೇಂದ್ರ ಮತ್ತು ರಾಜ್ಯ ಸರಕಾರಗಳ ಉತ್ತಮ ಯೋಜನೆಗಳನ್ನು ಜನರಿಗೆ ತಿಳಿಸಬೇಕು ಎಂದು ತಮ್ಮ ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡಿದರು.
Recommended Video

-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications